Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಬ್ರಹ್ಮ ರಾಕ್ಷಸನಂತಿರುವ ಆರೆಸ್ಸೆಸ್‌...

ಬ್ರಹ್ಮ ರಾಕ್ಷಸನಂತಿರುವ ಆರೆಸ್ಸೆಸ್‌ ವಿರುದ್ಧ ಹೋರಾಟ ಅನಿವಾರ್ಯ: ಸಾಹಿತಿ ಕುಂ.ವೀರಭದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ21 Dec 2025 9:33 PM IST
share
ಬ್ರಹ್ಮ ರಾಕ್ಷಸನಂತಿರುವ ಆರೆಸ್ಸೆಸ್‌ ವಿರುದ್ಧ ಹೋರಾಟ ಅನಿವಾರ್ಯ: ಸಾಹಿತಿ ಕುಂ.ವೀರಭದ್ರಪ್ಪ
11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ

ರಾಯಚೂರು, ಡಿ.21: ಸಂವಿಧಾನವನ್ನು ಮೂಲೆಗುಂಪು ಮಾಡುವ ಹುನ್ನಾರ ಮಾಡಲಾಗುತ್ತಿದೆ. ಮನುವಾದಿಗಳು ಸಂವಿಧಾನವನ್ನು ಒಪ್ಪುವುದಿಲ್ಲ. ಇವರು ಅಸ್ತಿತ್ವದಲ್ಲಿದ್ದರೆ ಯಾರೂ ಕೂಡ ಬದುಕಲು ಸಾಧ್ಯವಿಲ್ಲ. ಆದ್ದರಿಂದ ಸಾಮಾಜಿಕ, ರಾಜಕೀಯ ಹೊಣೆಗಾರಿಕೆ ದಲಿತ ಸಾಹಿತಿಗಳ ಮೇಲಿದೆ ಎಂದು ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ರಾಯಚೂರು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ದಲಿತ ಸಾಹಿತ್ಯ ಪರಿಷತ್ತು ರಾಜ್ಯ ಘಟಕದಿಂದ ಹಮ್ಮಿಕೊಂಡಿದ್ದ 11ನೇ ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದ ಅಂಗವಾಗಿ ವಿವಿಧ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವೆಲ್ಲರೂ ಬಹಳ ಅಪಾಯಕಾರಿ ಸ್ಥಿತಿಯಲ್ಲಿದ್ದೇವೆ. ದೇಶದಲ್ಲಿ ಲೇಖಕರ ಮೇಲೆ ದೈಹಿಕ ಹಲ್ಲೆಗಳು ನಡೆಯುತ್ತಿವೆ. ಮಹಿಳೆಯರ ಮಾನಭಂಗವಾಗುತ್ತಿದೆ, ಪ್ರಶ್ನೆ ಮಾಡುವವರ ಧ್ವನಿ ಅಡಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ನಮಗೆ ಕಮಲ ಮುಖ್ಯವಲ್ಲ, ಕಮಲದ ಕೆಳಗೆ ಇರುವ ಬ್ರಹ್ಮ ರಾಕ್ಷಸನಂತಿರುವ ಆರೆಸ್ಸೆಸ್‌ ವಿರುದ್ಧ ನಾವು ಹೋರಾಟ ಮಾಡಬೇಕಾಗಿದೆ. ಆರೆಸ್ಸೆಸ್‌ ಬಹಳ ಅಪಾಯಕಾರಿಯಾಗಿರುವಂತಹದ್ದು, ಅದರ ವಿರುದ್ಧ ನಾವು ಹೋರಾಡಬೇಕಿದೆ ಎಂದು ಕರೆ ನೀಡಿದರು.

ಸರ್ಕಾರ ಎಷ್ಟೋ ಪ್ರಶಸ್ತಿಗಳನ್ನು ಕೊಡುತ್ತಿದ್ದು, ಹಲವು ಪ್ರಾಧಿಕಾರಗಳನ್ನು ಮಾಡುತ್ತಿದ್ದು, ಅದರಲ್ಲಿ ಶೇ.30ರಷ್ಟು ದಲಿತರಿಗೆ ಮೀಸಲಿಡಬೇಕು. ಪ್ರಾಧಿಕಾರದಲ್ಲಿ ಕನಿಷ್ಠ ಇಬ್ಬರು ದಲಿತ ಸದಸ್ಯರಿರಬೇಕು. ಅಕಾಡೆಮಿಗಳಲ್ಲಿ ದಲಿತರು ಸದಸ್ಯರಾಗಿರಬೇಕು. ಸರ್ಕಾರ ಕೊಡುವ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಶೇ.30ರಷ್ಟು ದಲಿತರಿಗೆ ಮೀಸಲಿರಬೇಕು. ಅರ್ಹತೆಯ ಪ್ರಶ್ನೆಯಲ್ಲ. ಈ ನೆಲದ ನೋವುಗಳಿಗೆ ಸ್ಪಂದಿಸಿ ಅವುಗಳನ್ನು ಬರಹ ರೂಪಕ್ಕೆ ತಂದಿರುವ ಸಾಹಿತಿಗಳ ಬರವಣಿಗೆ ಬಹಳ ಮುಖ್ಯವಾಗಿರುತ್ತದೆ ಎಂದು ಅವರು ಹೇಳಿದರು.

ವ್ಯವಸ್ಥೆಗೆ ಉಪದ್ರವನ್ನು ಕೊಡುವ ಹಾಗೂ ಪ್ರಶ್ನಿಸುವಂತಹ ಎಲ್ಲರೂ ಕೂಡ ಶ್ರೇಷ್ಠ ಕೊಡುಗೆ ನೀಡುತ್ತಿದ್ದಾರೆ. ಈ ನೆಲದ ಮೂಲ ವಾರಸುದಾರರೆಂದರೆ ದಲಿತ ಸಾಹಿತಿಗಳು, ದಲಿತರಾಗಿದ್ದಾರೆ. ತಳ ಸಮುದಾಯಗಳ ಆಶಯಗಳನ್ನು ಸಾಂಕ್ರಾಮಿಕಗೊಳಿಸುವ ಕೆಲಸ ಮಾಡಬೇಕು. ವರ್ತಮಾನ ಸಂದರ್ಭದಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕಾದ ಸ್ಥಿತಿ ಇದೆ ಎಂದು ತಿಳಿಸಿದರು.

ದಲಿತರು ಯಾವುದಾದರೂ ಕುರ್ಚಿಯಲ್ಲಿ ಕೂತು ಎದ್ದು ಬಂದರೆ ಅದನ್ನು ಪಾದೋದಕಗಳಿಂದ ಶುಚಿಗೊಳಿಸುವ ಕೆಲಸ ನಡೆಯುತ್ತಿದೆ. ಇದು ಬಹಳ ಅಪಾಯಕಾರಿ ಮನಸ್ಥಿತಿ, ಮತ್ತು ಉಸಿರುಗಟ್ಟುವ ಸ್ಥಿತಿಯಾಗಿದೆ. ವ್ಯವಸ್ಥೆಯನ್ನು ಸರಿಪಡಿಸದೇ ಇದ್ದಲ್ಲಿ ಮುಂದಿನ ಹತ್ತು ವರ್ಷದಲ್ಲಿ ಸಂವಿಧಾನ ನಮ್ಮ ಕೈಯಲ್ಲಿ ಇರುವುದಿಲ್ಲ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷೆ ಡಾ.ಜಯದೇವಿ ಗಾಯಕವಾಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಹನುಮಂತಪ್ಪ, ರಾಷ್ಟ್ರೀಯ ಪ್ರಶಸ್ತಿನ ಪುರಸ್ಕೃತರಾದ ಬಾಬು ಭಂಡಾರಿಗಲ್, ಡಾ.ಪದ್ಮಿನಿ ನಾಗರಾಜು, ಡಾ.ಚನ್ನಬಸಪ್ಪ ಮಲ್ಕಂದಿನ್ನಿ, ಡಾ.ಕೆ.ಪಿ.ಮಹಾದೇವ, ಡಾ.ಅಮರೇಶ ಯತಗಲ್, ಡಾ.ಜೆ.ಪಿ ದೊಡಮನಿ, ಡಾ.ಸೂರ್ಯಕಾಂತ ಸುಜ್ಯಾತ ಮೊದಲಾದವರು ಉಪಸ್ಥಿತರಿದ್ದರು.

ಸಮ್ಮೇಳನದ ಎರಡನೇ ದಿನದ ಸಮಾರೋಪ ಸಮಾರಂಭದಲ್ಲಿ ಐದು ನಿರ್ಣಯಗಳನ್ನು ಮಂಡಿಸಲಾಗಿದ್ದು, ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಮೈಸೂರಿನಲ್ಲಿ ನಡೆಸಲು ದಲಿತ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಅರ್ಜುನ ಗೊಳಸಂಗಿ, ಉಪಾಧ್ಯಕ್ಷ ಡಾ.ವೈ.ಎಂ ಭಜಂತ್ರಿ, ಕಾರ್ಯದರ್ಶಿ ಡಾ.ಸುಭಾಷ್ ಹೊದ್ಲೂರು, ಖಜಾಂಚಿ ಡಾ.ಎಚ್ ಬಿ ಕೋಲ್ಕರ್ ಅವರು ತೀರ್ಮಾನಕ್ಕೆ ಸಹಿ ಹಾಕಿದರು.

ಅಖಿಲ ಭಾರತ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಮಂಡಿಸಲಾದ 5 ನಿರ್ಣಯಗಳು :

► ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಗಬೇಕು

► ದಲಿತ ಸಾಹಿತ್ಯ ಪರಿಷತ್ ಗೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಅನುದಾನ ಮೀಸಲಿಡಬೇಕು

► ಮೀಸಲಾತಿ ಅನ್ವಯ ಆಗುವ ಕಡೆ ಒಳ ಮೀಸಲಾತಿ ಜಾರಿಯಾಗಬೇಕು

► ಅಂಬೇಡ್ಕರ್ ಧಾರವಾಹಿ ಮರು ಪ್ರಸಾರ ಆಗಬೇಕು

► ಕೇಂದ್ರ ಸರ್ಕಾರ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X