Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ತುಂಗಭದ್ರಾ ಹಂಗಾಮಿ ನೌಕರರಿಗೆ 8 ತಿಂಗಳ...

ತುಂಗಭದ್ರಾ ಹಂಗಾಮಿ ನೌಕರರಿಗೆ 8 ತಿಂಗಳ ಬಾಕಿ ವೇತನ ಪಾವತಿಗೆ ವಿಳಂಬ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ12 Jan 2026 2:36 PM IST
share
ತುಂಗಭದ್ರಾ ಹಂಗಾಮಿ ನೌಕರರಿಗೆ 8 ತಿಂಗಳ ಬಾಕಿ ವೇತನ ಪಾವತಿಗೆ ವಿಳಂಬ; ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ಎಚ್ಚರಿಕೆ

ರಾಯಚೂರು: ತುಂಗಭದ್ರಾ ನೀರಾವರಿ ವಲಯದ ಹಂಗಾಮಿ ನೌಕರರಿಗೆ ಕಳೆದ ಎಂಟು ತಿಂಗಳಿನಿಂದ ವೇತನ ಪಾವತಿಯಾಗದೆ ಇರುವುದರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಕೆಲಸವೂ ಇಲ್ಲ, ವೇತನವೂ ಇಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಸಮಸ್ಯೆ ಪರಿಹರಿಸದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಘೇರಾವ್ ನಡೆಸುವುದಾಗಿ ತುಂಗಭದ್ರಾ ನೀರಾವರಿ ವಲಯ ಹಂಗಾಮಿ ಕಾರ್ಮಿಕರ ಸಂಘ ಎಚ್ಚರಿಕೆ ನೀಡಿದೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಆರ್. ಮಾನಸಯ್ಯ, “ಉಸ್ತುವಾರಿ ಸಚಿವರು ಬಾಕಿ ವೇತನ ಪಾವತಿಸಲು ಅಧಿಕಾರಿಗಳಿಗೆ ಪತ್ರ ಬರೆದಿದ್ದರೂ, ನೀರಾವರಿ ನಿಗಮದಲ್ಲಿ ಅದಕ್ಕೆ ಬೆಲೆ ಇಲ್ಲದಂತಾಗಿದೆ. ನಮಗೆ ಉತ್ಸವ ಸಚಿವರು ಬೇಡ, ಸಮಸ್ಯೆ ಪರಿಹರಿಸುವ ಉಸ್ತುವಾರಿ ಸಚಿವರು ಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ತುಂಗಭದ್ರಾ ಯೋಜನೆಯಡಿ ಕ್ರಸ್ಟ್‌ಗೇಟ್ ಅಳವಡಿಕೆಯಿಂದ ನೀರು ಹರಿವು ಸ್ಥಗಿತಗೊಂಡಿದ್ದು, ಇದರಿಂದ ಕಾರ್ಮಿಕರಿಗೆ ಕೆಲಸವೂ ಇಲ್ಲದಂತಾಗಿದೆ. ವರ್ಷಪೂರ್ತಿ ಕೆಲಸ ನೀಡುವುದಾಗಿ ನಿಗಮ ಭರವಸೆ ನೀಡಿದ್ದರೂ, ಪ್ರಸ್ತುತ ಕೆಲಸವೂ ಇಲ್ಲ, ವೇತನವೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.

ಬಾಕಿ ವೇತನವನ್ನು ತಕ್ಷಣ ಪಾವತಿಸದಿದ್ದರೆ ಜನವರಿ 26ರಂದು ಗಣರಾಜ್ಯೋತ್ಸವದ ಧ್ವಜಾರೋಹಣಕ್ಕೆ ಅವಕಾಶ ನೀಡುವುದಿಲ್ಲ. ಕಪ್ಪುಪಟ್ಟಿ ಪ್ರದರ್ಶಿಸಿ ಹಂಗಾಮಿ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು.

ಹೊರಗುತ್ತಿಗೆ, ಗುತ್ತಿಗೆ ನೌಕರರು, ಅತಿಥಿ ಶಿಕ್ಷಕರು ಸೇರಿದಂತೆ ಅನೇಕ ಇಲಾಖೆಗಳಲ್ಲೂ ವೇತನ ಪಾವತಿಯಲ್ಲಿ ವಿಳಂಬವಾಗುತ್ತಿದೆ. ತುಂಗಭದ್ರಾ ಯೋಜನೆ 6 ಲಕ್ಷ ಎಕರೆ ಕೃಷಿಭೂಮಿಗೆ ನೀರು ಒದಗಿಸುತ್ತಿದ್ದು, ಎರಡು ಮಹಾನಗರ ಪಾಲಿಕೆಗಳು, ಮೂರು ಪಟ್ಟಣ ಪಂಚಾಯತ್‌ಗಳು ಹಾಗೂ 180 ಗ್ರಾಮಗಳ ಕುಡಿಯುವ ನೀರು ಸರಬರಾಜು ಇದರ ಮೇಲೆ ಅವಲಂಬಿತವಾಗಿದೆ. ಇಂತಹ ಮಹತ್ವದ ಯೋಜನೆಯಲ್ಲಿ ಕಾರ್ಮಿಕರನ್ನು ವೇತನವಿಲ್ಲದೇ ಕೆಲಸಕ್ಕೆ ನಿಲ್ಲಿಸಿರುವುದು ಅನ್ಯಾಯಕರ ಎಂದು ಅವರು ಹೇಳಿದರು.

ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಅಡವಿರಾವ್ ಸೇರಿದಂತೆ ಲೋಕಪ್ಪ, ರಾಧಾಕೃಷ್ಣ, ಮುದುಕಪ್ಪ, ಸಿದ್ದಪ್ಪ, ಶಂಕರಪ್ಪ, ನಾಗರಾಜ ಹಾಗೂ ಮಹದ ಸಫಿಯುದ್ದೀನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X