ಅ.22ರಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಯಚೂರು ಜಿಲ್ಲಾ ಪ್ರವಾಸ

ಡಿ.ಕೆ.ಶಿವಕುಮಾರ್
ರಾಯಚೂರು : ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಅ.22ರಂದು ರಾಯಚೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 8 ಗಂಟೆಗೆ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದುಕೊಂಡು ಅಲ್ಲಿಂದ 9.30ಕ್ಕೆ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮಕ್ಕೆ ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು. 10.30ಕ್ಕೆ ಬಿಚ್ಚಾಲಿಯಿಂದ ನಿರ್ಗಮಿಸಿ 11 ಗಂಟೆಗೆ ರಾಯಚೂರು ಗ್ರಾಮೀಣ ಪ್ರದೇಶದಲ್ಲಿನ ಶ್ರೀ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬಳಿಕ ಬೆಳಿಗ್ಗೆ 11.30ಕ್ಕೆ ಪಕ್ಷದ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12.30ಕ್ಕೆ ಪಂಚಮುಖಿಯಿಂದ ನಿರ್ಗಮಿಸಿ ಮಂತ್ರಾಲಯಕ್ಕೆ ತೆರಳುವರು. ಸಂಜೆ 6.55ಕ್ಕೆ ಮಂತ್ರಾಲಯದಿಂದ ರೈಲು ಮಾರ್ಗವಾಗಿ ಕೇಂದ್ರ ಸ್ಥಾನ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಉಪಮುಖ್ಯಮಂತ್ರಿಗಳ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಬಿ.ಎಸ್.ಶ್ರೀಧರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





