Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಜಾತಿ...

ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಜಾತಿ ವಿನಾಶ‌ ಅಗತ್ಯ :ಆರ್.ಮಾನಸಯ್ಯ

ವಾರ್ತಾಭಾರತಿವಾರ್ತಾಭಾರತಿ22 Dec 2024 11:48 AM IST
share
  • ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಜಾತಿ ವಿನಾಶ‌ ಅಗತ್ಯ :ಆರ್.ಮಾನಸಯ್ಯ
  • ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಜಾತಿ ವಿನಾಶ‌ ಅಗತ್ಯ :ಆರ್.ಮಾನಸಯ್ಯ

ರಾಯಚೂರು: ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಜಾತಿ ವಿನಾಶ‌ ಅಗತ್ಯವಾಗಿದೆ ಎಂದು ರಾಯಚೂರಿನ ಹೋರಾಟಗಾರ ಹಾಗೂ ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯೂರೋ ಸದಸ್ಯ ಆರ್ ಮಾನಸಯ್ಯ ತಿಳಿಸಿದರು.

ತಮಿಳುನಾಡಿನ ಅಖಿಲ ಭಾರತ ಜಾತಿ ವಿನಾಶ ಚಳವಳಿ (ಸಿಎಎಂ) ಚೆನ್ನೈ ಸಮಿತಿಯಿಂದ ಚೆನ್ನೈನ ವಡಪಳನಿಯಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಕಮ್ಯುನಿಸ್ಟ್ ಧೋರಣೆಯನ್ನು ಡಾ ಬಿ ಆರ್ ಅಂಬೇಡ್ಕರ್ ಮತ್ತು ಐತಿಹಾಸಿಕ ಘಟನೆಗಳೊಂದಿಗೆ ಜಾತಿ ವಿನಾಶವನ್ನು ಸ್ಪಷ್ಟವಾಗಿ ಮಂಡಿಸಿದರು.

ಕರ್ನಾಟಕದ ಸಿಪಿಐಎಂಎಲ್ ರೆಡ್ ಸ್ಟಾರ್ ಪಕ್ಷದ ಮುಖಂಡರು ನಡೆಸಿದ ಭೂ ಹೋರಾಟ, ದಲಿತ ಚಳವಳಿಗಳು ಮತ್ತು ಜಾತಿ ಪ್ರಶ್ನೆಗೆ ಸಂಬಂಧಿಸಿದ ಇತರ ಕ್ಷೇತ್ರದ ಅನುಭವಗಳನ್ನು ತಿಳಿಸಿದರು. ನಂತರ ಪ್ರೇಕ್ಷಕರ ಪ್ರಶ್ನೆಗಳಿಗೆ ಉತ್ತರಿಸಿದರು.

ಸಂಕಿರಣದ ಅಧ್ಯಕ್ಷ ಕಾಂ. ನಟರಾಜನ್ (ಸಿಎಎಂ) ಸದಸ್ಯ ಮೋದಿ ಸರ್ಕಾರದ ಜಾತಿ ಧ್ರುವೀಕರಣ ಚಟುವಟಿಕೆಗಳನ್ನು ಮತ್ತು ಪ್ರಸ್ತುತ ರಾಜಕೀಯ ಚಿಂತನೆಗಳೊಂದಿಗೆ ಜಾತಿ ವಿನಾಶದ ಆಂದೋಲನದ ಅಗತ್ಯವಾಗಿದೆ ಎಂದು ತಿಳಿಸಿದರು.

ಸಿಪಿಐಎಂ‌ಎಲ್ ರೆಡ್ ಸ್ಟಾರ್ ರಾಜ್ಯ ಕಾರ್ಯದರ್ಶಿ ಮನೋಹರನ್, "ಜಾತಿ ಗಣತಿ ಏಕೆ ಅಗತ್ಯ?" ಕುರಿತು ತಮ್ಮ ವಿಚಾರ ಮಂಡಿಸಿದರು ಮತ್ತು ಜಾತಿ ಗಣತಿ ನಡೆಸಲು ಪ್ರಸ್ತುತ ಪರಿಸ್ಥಿತಿಯನ್ನು ಸಮರ್ಥಿಸಿದರು.

ತಮಿಳ್ ಮುರಸು ಚೆನ್ನೈ ಜಿಲ್ಲಾ ಕಾರ್ಯದರ್ಶಿ ಸ್ವಾಗತಿಸಿದರು. ಎ.ಬಾಲಸುಬ್ರಮಣಿಯನ್ (ಆರ್‌ಸಿಎಫ್) ಮತ್ತು ಕಾಂ ಭವಾನಿ ಕ್ರಾಂತಿಗೀತೆಗಳನ್ನು ಹಾಡಿದರು.

ಸಿಪಿಐ(ಎಂಎಲ್) ರೆಡ್‌ಸ್ಟಾರ್ ಚೆನ್ನೈ ಜಿಲ್ಲಾ ಕಾರ್ಯದರ್ಶಿ ಕರ್ಕಿ ವೇಲನ್ ಮಾತನಾಡಿ,ತಮಿಳುನಾಡಿನ ತೇನಿ ಜಿಲ್ಲೆಯ ಪಂಚಮಿ ಭೂ ಸುಧಾರಣೆ ಆಂದೋಲನದ ಬಗ್ಗೆ ತಮ್ಮ ಸ್ವಂತ ಅನುಭವ ಮತ್ತು ಪಕ್ಷದ ನಿಲುವನ್ನು ಹಂಚಿಕೊಂಡರು.

ಸಿಎಎಂ ತಮಿಳುನಾಡಿನ ರಾಜ್ಯ ಅಧ್ಯಕ್ಷ ಇನಿಯವನ್, ವರ್ಗ ಮತ್ತು ಜಾತಿಯ ಕುರಿತು ಸಂಕ್ಷಿಪ್ತ ಟಿಪ್ಪಣಿಯನ್ನು ನೀಡಿದರು.

ವಿಚಾರ ಸಂಕಿರಣದಲ್ಲಿ ತಮಿಳುನಾಡು ರಾಜ್ಯದ ವಿವಿಧ ಸ್ಥಳಗಳಿಂದ ಎಂಎಲ್ ಮತ್ತು ಸಿಆರ್ ಗುಂಪುಗಳ ಬುದ್ಧಿಜೀವಿಗಳು ಭಾಗವಹಿಸಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X