Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ದೇವದುರ್ಗ | ಗ್ರಾಮ ಪಂಚಾಯಿತಿಗಳಲ್ಲಿ...

ದೇವದುರ್ಗ | ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಿ: ಸಿಇಒ ಈಶ್ವರ್‌ ಕಾಂದೂ

ವಾರ್ತಾಭಾರತಿವಾರ್ತಾಭಾರತಿ18 Aug 2026 8:42 PM IST
share
ದೇವದುರ್ಗ | ಗ್ರಾಮ ಪಂಚಾಯಿತಿಗಳಲ್ಲಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡಿ: ಸಿಇಒ ಈಶ್ವರ್‌ ಕಾಂದೂ

ದೇವದುರ್ಗ: ಜಿಲ್ಲಾ ಪಂಚಾಯಿತಿ ರಾಯಚೂರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್‌ ಕಾಂದೂ ಅವರು ದೇವದುರ್ಗ ತಾಲೂಕಿನ ಮಲದಕಲ್, ರಾಮದುರ್ಗ ಹಾಗೂ ಮಸರಕಲ್ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದ ಕುರಿತು ಪರಿಶೀಲನೆ ನಡೆಸಿದರು.

ಮಲದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ಹಾಗೂ ಮೊಟ್ಟೆ ವಿತರಣೆ ಕುರಿತು ಮಾಹಿತಿ ಪಡೆದರು. ಬಳಿಕ ಗ್ರಾಮ ಪಂಚಾಯಿತಿಯ ವಿವಿಧ ಕಡತಗಳನ್ನು ಪರಿಶೀಲಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ತೆರಿಗೆ ಸಂಗ್ರಹಣೆಯನ್ನು ಕಡ್ಡಾಯವಾಗಿ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಶಾಶ್ವತ ಕಟ್ಟಡ ನಿರ್ಮಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಪ್ಪ ಅವರಿಗೆ ನಿರ್ದೇಶನ ನೀಡಿದರು. ಕಸ ಸಂಗ್ರಹಣೆ ಹಾಗೂ ವಿಂಗಡಣೆ ವ್ಯವಸ್ಥಿತವಾಗಿ ನಡೆಯಬೇಕು. ಓಎಚ್‌ಟಿ ಟ್ಯಾಂಕ್‌ಗಳನ್ನು ಪ್ರತಿ ತಿಂಗಳು ಸ್ವಚ್ಛಗೊಳಿಸಿ, ಕುಡಿಯುವ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಬೇಕು ಎಂದು ಸೂಚಿಸಿದರು.

ಅಲ್ಲದೆ, ವಿಬಿ-ಜಿ ರಾಮ್-ಜಿ ಯೋಜನೆಯಡಿ ಹೆಚ್ಚಿನ ಮಾನವ ದಿನಗಳ ಸೃಜನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆಗೆ ಆದ್ಯತೆ :

ನಂತರ ರಾಮದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಇಒ, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಬೇಕು. ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶಕ್ತಿ ಕೇಂದ್ರದ ಕಾರ್ಯಚಟುವಟಿಕೆ ಪರಿಶೀಲನೆ :

ಬಳಿಕ ಮಸರಕಲ್ ಶಕ್ತಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಕೇಂದ್ರದಲ್ಲಿ ಉತ್ಪಾದಿಸಲಾಗುತ್ತಿರುವ ರಾಗಿ, ಗೋಧಿ ಹಾಗೂ ಹೆಸರುಕಾಳಿನ ಉತ್ಪನ್ನಗಳ ತಯಾರಿಕೆ ಮತ್ತು ವಿತರಣೆ, ನವೀಕರಣ ಕಾಮಗಾರಿಗಳು, ಸಾರಿಗೆ ವ್ಯವಸ್ಥೆ ಹಾಗೂ ವಿವಿಧ ಗ್ರಾಮಗಳಿಗೆ ಆಹಾರ ಪದಾರ್ಥಗಳ ಸರಬರಾಜಿನ ಕುರಿತು ಮಾಹಿತಿ ಪಡೆದರು.

SAM, MAM ಮಕ್ಕಳ ಹಾಗೂ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಸರಬರಾಜು ಮತ್ತು ಫಲಾನುಭವಿಗಳ ವಿವರಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ನಾಯಕ್ ಅವರಿಂದ ಪಡೆದುಕೊಂಡರು. ಶಕ್ತಿ ಕೇಂದ್ರದ ಅಭಿವೃದ್ಧಿ ಹಾಗೂ ಕಾರ್ಯಚಟುವಟಿಕೆಗಳಿಗೆ KHPT ಸಂಸ್ಥೆಯವರು ನಿರಂತರ ಸಹಕಾರ ನೀಡಬೇಕು ಎಂದು ಸೂಚಿಸಿದರು.

ನಂತರ ಶಕ್ತಿ ಕೇಂದ್ರದ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಅವರು, ಸಿಬ್ಬಂದಿಯ ಸಮಸ್ಯೆಗಳು ಹಾಗೂ ಕಾರ್ಯನಿರ್ವಹಣೆ ಕುರಿತು ಮಾಹಿತಿ ಪಡೆದರು. ಕೇಂದ್ರದಲ್ಲಿರುವ ಯಂತ್ರೋಪಕರಣಗಳ ಕಾರ್ಯವೈಖರಿಯನ್ನು ಪರಿಶೀಲಿಸಿ, ಅವುಗಳ ನಿರ್ವಹಣೆ ಹಾಗೂ ಕಾರ್ಯಾಚರಣೆ ಕುರಿತು ನೋಡಲ್ ಅಧಿಕಾರಿ ಶರ್ಪುನ್ನಿಸ ಬೇಗಂ ಅವರಿಂದ ವಿವರ ಪಡೆದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ರಾಯಚೂರಿನ ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಸಹಾಯಕ ನಿರ್ದೇಶಕರಾದ ಶರ್ಪುನ್ನಿಸ (ಪಂಚಾಯತ್ ರಾಜ್), ಸಹಾಯಕ ನಿರ್ದೇಶಕರಾದ ಶ್ರೀಮತಿ ಮಹೇಶ್ವರಿ (ಆಡಳಿತ), ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ನಾಯಕ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನರಸಪ್ಪ (ರಾಮದುರ್ಗ), ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ವೇತಾ (ಮಸರಕಲ್), ಕೆ.ಹೆಚ್.ಪಿ.ಟಿ. ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Tags

Devadurga
share
ವಾರ್ತಾಭಾರತಿ
ವಾರ್ತಾಭಾರತಿ
Next Story
X