Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ಉತ್ಸವ ಸಿದ್ಧತೆಗೆ...

ರಾಯಚೂರು ಉತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿಗಳ ಸೂಚನೆ : ಜ.31ರಿಂದ 2 ದಿನಗಳ ಕಾಲ 'ಮಕ್ಕಳ ಉತ್ಸವ'

ವಾರ್ತಾಭಾರತಿವಾರ್ತಾಭಾರತಿ17 Jan 2026 12:20 AM IST
share
ರಾಯಚೂರು ಉತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿಗಳ ಸೂಚನೆ : ಜ.31ರಿಂದ 2 ದಿನಗಳ ಕಾಲ ಮಕ್ಕಳ ಉತ್ಸವ
ಪರಿಷ್ಕೃತ ದಿನಾಂಕದಂತೆ ಜಿಲ್ಲಾ ಉತ್ಸವ ಯಶಸ್ವಿಗೊಳಿಸಿ : ಡಿಸಿ ನಿತೀಶ್ ಕೆ.

ರಾಯಚೂರು : ಪರಿಷ್ಕೃತ ದಿನಾಂಕದಂತೆ ಫೆ.5, 6 ಮತ್ತು 7ರಂದು ನಡೆಯಲಿರುವ ರಾಯಚೂರು ಜಿಲ್ಲಾ ಉತ್ಸವದ ಎಲ್ಲಾ ಕಾರ್ಯಕ್ರಮಗಳು ಯಾವುದೇ ಲೋಪವಿಲ್ಲದೆ ಅಚ್ಚುಕಟ್ಟಾಗಿ ಜರುಗಬೇಕು. ಇದಕ್ಕಾಗಿ ಎಲ್ಲಾ ಉಪಸಮಿತಿಗಳು ಸಮನ್ವಯದಿಂದ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಉತ್ಸವ ಆಚರಣಾ ಸಮಿತಿ ಅಧ್ಯಕ್ಷ ನಿತೀಶ್ ಕೆ. ನಿರ್ದೇಶನ ನೀಡಿದರು.

ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಮಿತಿ ಅಧ್ಯಕ್ಷರು ಮತ್ತು ಸದಸ್ಯ ಕಾರ್ಯದರ್ಶಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉತ್ಸವದ ದಿನಾಂಕ ಮುಂದೂಡಲ್ಪಟ್ಟಿರುವುದರಿಂದ ಸಿದ್ಧತೆಗೆ ಹೆಚ್ಚಿನ ಸಮಯ ಲಭಿಸಿದೆ. ಈ ಅವಕಾಶವನ್ನು ಬಳಸಿಕೊಂಡು ಕಾರ್ಯಕ್ರಮಗಳನ್ನು ಮತ್ತಷ್ಟು ಅರ್ಥಪೂರ್ಣವಾಗಿ ರೂಪಿಸಬೇಕು. ಅಧಿಕಾರಿಗಳು ಮತ್ತು ಸಿಬ್ಬಂದಿ ವಿರಮಿಸದೆ ನಿರಂತರವಾಗಿ ಕೆಲಸ ಮಾಡಬೇಕು. ಕೆಲವು ಕ್ರೀಡಾ ಸ್ಪರ್ಧೆಗಳನ್ನು ಹೊರತುಪಡಿಸಿ ಉಳಿದಂತೆ ಯಾವುದೇ ಕಾರ್ಯಕ್ರಮಗಳಲ್ಲಿ ಬದಲಾವಣೆ ಇರುವುದಿಲ್ಲ ಎಂದು ಡಿಸಿ ಸ್ಪಷ್ಟಪಡಿಸಿದರು.

ಜಿಲ್ಲಾ ಉತ್ಸವದ ಮುನ್ನೋಡಿಯಾಗಿ ಜನವರಿ 31 ಮತ್ತು ಫೆಬ್ರವರಿ 1ರಂದು ಎರಡು ದಿನಗಳ ಕಾಲ 'ಮಕ್ಕಳ ಉತ್ಸವ' ನಡೆಸಲು ತೀರ್ಮಾನಿಸಲಾಗಿದೆ. ಜಿಲ್ಲೆಯ ಪ್ರತಿಭಾನ್ವಿತ ಮಕ್ಕಳಿಗೆ ವೇದಿಕೆ ಕಲ್ಪಿಸುವುದು ಇದರ ಉದ್ದೇಶವಾಗಿದ್ದು, ವಯೋಮಾನಕ್ಕೆ ಅನುಗುಣವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವ್ಯಾಪಕ ಪ್ರಚಾರ ನೀಡಲು ಸೂಚಿಸಲಾಯಿತು.

ಉತ್ಸವದ ಯಶಸ್ಸಿಗೆ ಸ್ವಯಂಪ್ರೇರಿತರಾಗಿ ಕೆಲಸ ಮಾಡುವ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಸ್ವಯಂಸೇವಕರ ಸೇವೆಯನ್ನು ಬಳಸಿಕೊಳ್ಳಬೇಕು. ಪ್ರಚಾರ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಪ್ರತಿಯೊಂದು ಕಾರ್ಯಕ್ರಮಕ್ಕೂ ಹೆಚ್ಚಿನ ಜನರು ಸಾಕ್ಷಿಯಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸಲಹೆ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ, ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ, ಬಸವಣೆಪ್ಪ ಕಲಶೆಟ್ಟಿ ಸೇರಿದಂತೆ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags

Raichur FestivalRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X