Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರೈತರ ಬದುಕಿನೊಂದಿಗೆ ಆಟವಾಡದೆ ಬೇಸಿಗೆ...

ರೈತರ ಬದುಕಿನೊಂದಿಗೆ ಆಟವಾಡದೆ ಬೇಸಿಗೆ ಬೆಳೆಗೆ ನೀರು ಕೊಡಿ : ಮಾಜಿ ಸಚಿವ ವೆಂಕಟರಾವ್ ನಾಡಗೌಡ

ವಾರ್ತಾಭಾರತಿವಾರ್ತಾಭಾರತಿ5 Nov 2025 4:46 PM IST
share
ರೈತರ ಬದುಕಿನೊಂದಿಗೆ ಆಟವಾಡದೆ ಬೇಸಿಗೆ ಬೆಳೆಗೆ ನೀರು ಕೊಡಿ : ಮಾಜಿ ಸಚಿವ ವೆಂಕಟರಾವ್ ನಾಡಗೌಡ

ರಾಯಚೂರು: ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತವಾಗಿ ಬೇಸಿಗೆ ಬೆಳೆಗೆ ನೀರು ಕೊಡುವಷ್ಟು ನೀರು ಇದ್ದು, ರೈತರ ಬದುಕಿನೊಂದಿಗೆ ಆಟವಾಡದೆ, ನೀರು ಕೊಡಿ ಎಂದು ಮಾಜಿ ಸಚಿವ ಹಾಗೂ ಜೆಡಿಎಸ್ ಮುಖಂಡ ವೆಂಕಟರಾವ್ ನಾಡಗೌಡ ಆಗ್ರಹಿಸಿದರು.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಲಾಶಯದಲ್ಲಿ ನೀರಿನ ಸಂಗ್ರಹದ ಸಾಮರ್ಥ್ಯ ನೋಡಿ ಮಾತನಾಡಿದ್ದೇವೆ, ಈ ವರ್ಷ ಅತಿ ಹೆಚ್ಚು ಮಳೆಯಾಗಿ ಬೆಳೆದ ಬೆಳೆಯು ಕೂಡ ಕೈಗೆ ಬರದಂತಾಗಿದೆ. ಡ್ಯಾಮ್ ನಲ್ಲಿ ನೀರಿದ್ದರೂ ಕೂಡ ಜೂ.6 ರ ಅಂಕಿ ಅಂಶ ತೋರಿಸಿ ನೀರಿಲ್ಲಎಂದು ಹೇಳಿ ರೈತರಲ್ಲಿ ಗೊಂದಲ ಮೂಡಿಸಿ, ಏಳೆಂಟು ತಿಂಗಳುಗಳ ಕಾಲ ಕ್ರಸ್ಟ್‌ ಗೇಟ್ ಗಳನ್ನು ಕೊಡಿಸಬೇಕೆಂದು ಹೇಳುತ್ತಿದ್ದಾರೆ.

ಡ್ಯಾಮ್ ತಜ್ಞ ಕನ್ನಯ್ಯನಾಯ್ಡು ಅ.27 ರಂದೇ ಬೇಸಿಗೆ ಬೆಳೆಗೆ ನೀರು ಕೊಡಬಹುದು ಎಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜೊತೆಗೆ ತುಂಗಭದ್ರಾ ಕ್ರಸ್ಟ್‌ ಗೇಟ್ ಗಳನ್ನು ಕೂಡಿಸಲಿಕ್ಕೆ 3 ತಿಂಗಳು ಸಾಕು ಎಂದಿದ್ದಾರೆ.

ವಿವಿಧ ರಾಜ್ಯಗಳಿಗೆ ನೀರು ಹಂಚಿಕೆಯ ಲೆಕ್ಕಾಚಾರ ನಮಗೆ ಗೊತ್ತಿಲ್ಲ. ಐಸಿಸಿ ತುಂಗಭದ್ರಾ ಮಂಡಳಿಗೆ ಸಂಬಂಧಿಸಿದ ಆಡಳಿತ ಪಕ್ಷದಲ್ಲಿರುವ ಸಚಿವ ಶಿವರಾಜ ತಂಗಡಗಿ, ಶಾಸಕ ಹಂಪನಗೌಡ ಬಾದರ್ಲಿ ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಎರಡನೇ ಬೆಳೆಗೆ ನೀರು ಕೊಡಿಸಬೇಕು ಎಂದು ಆಗ್ರಹಿಸಿದರು.

ಬೇಸಿಗೆ ಬೆಳೆಗೆ ನೀರು ಕೊಡುವಷ್ಟು ಜಲಾಶಯದಲ್ಲಿ ನೀರಿದೆ. ಇನ್ನೂ ಕೂಡ ಒಳಹರಿವು ಹೆಚ್ಚಾಗಿ ನೀರು ಬರುವ ಸಾಧ್ಯತೆಗಳಿದ್ದು, ರೈತರ ಹಿತದೃಷ್ಟಿಯಿಂದ ವಿಚಾರ ಮಾಡಿ ಆಡಳಿತ ಪಕ್ಷದ ಶಾಸಕರು, ಸಚಿವರು ನೀರು ಕೊಡಿಸುವ ಕೆಲಸ ಮಾಡಬೇಕು.

ರಾಜಕೀಯ ಉದ್ದೇಶವಿಟ್ಟುಕೊಂಡು ನಾವು ಟೀಕೆ ಮಾಡುತ್ತಿಲ್ಲ. ಎಲ್ಲರೂ ಸೇರಿ ರೈತರಿಗೆ ಅನುಕೂಲ ಮಾಡಬೇಕೆನ್ನುವ ಉದ್ದೇಶ ನಮ್ಮದು ಎಂದು ನಾಡಗೌಡ, ವಿರುಪಾಕ್ಷಪ್ಪ ಸ್ಪಷ್ಟಪಡಿಸಿದರು.

ಶಿವರಾಜ ತಂಗಡಗಿಗೆ ರೈತರ ಮೇಲೆ ಕಾಳಜಿಯಿದ್ದರೆ ಭದ್ರಾದಿಂದ 10 ಟಿಎಂಸಿ ನೀರು ಬಿಡಿಸಿ ಬೇಸಿಗೆ ಬೆಳೆಗೆ ನೀರು ಕೊಟ್ಟು ಅವರ ಹಿತ ಕಾಪಾಡಲಿ, ಅದು ಬಿಟ್ಟು ಬೇಸಿಗೆ ಬೆಳೆಗೆ ಸಂಪೂರ್ಣ ನೀರಿಲ್ಲ. ಕ್ರಸ್ಟ್‌ ಗೇಟ್ ಕೂಡಿಸಬೇಕೆಂದು ಸಬೂಬು ಹೇಳಬಾರದೆಂದು ನಾಡಗೌಡರು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ತಾಲೂಕು ಅಧ್ಯಕ್ಷ ಬಸವರಾಜ ನಾಡಗೌಡ, ನಗರ ಘಟಕದ ಅಧ್ಯಕ್ಷ ರವಿಗೌಡ ಪನ್ನೂರು, ನಗರಸಭೆ ಸದಸ್ಯರಾದ ಜಿಲಾನಿಪಾಷಾ, ಚಂದ್ರಶೇಖರ ಮೈಲಾರ, ಮುಖಂಡರಾದ ಜಿ.ಸತ್ಯನಾರಾಯಣ, ಅಶೋಕಗೌಡ ಗದ್ರಟಗಿ, ಅಲ್ಲಮಪ್ರಭು ಪೂಜಾ‌ರ್, ಎಸ್.ಪಿ.ಟೇಲರ್, ನಿರುಪಾದೆಪ್ಪ ಸುಕಾಲಪೇಟೆ, ಶಿವನಗೌಡ ಗೊರೇಬಾಳ, ಧರ್ಮನಗೌಡ ಮಲ್ಕಾಪುರ, ಅಜಯ್ ದಾಸರಿ, ಜೀವನ್ ಕುಮಾರ, ಸೈಯಾದ್ ಆಶೀಫ್, ಮೋಸಿನ್ ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X