Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಗುಣಮಟ್ಟದ ಕಾಮಗಾರಿಗಳು ಮಾಡಿ ಬೇಗನೆ...

ಗುಣಮಟ್ಟದ ಕಾಮಗಾರಿಗಳು ಮಾಡಿ ಬೇಗನೆ ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ವಿವಿಧ ಗ್ರಾಮಗಳಲ್ಲಿ ಕೋಟ್ಯಾಂತರ ರೂ. ವೆಚ್ಚದ ಕಾಮಗಾರಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ4 Sept 2026 8:45 PM IST
share
ಗುಣಮಟ್ಟದ ಕಾಮಗಾರಿಗಳು ಮಾಡಿ ಬೇಗನೆ ಮುಗಿಸಿ ಜನರಿಗೆ ಅನುಕೂಲ ಕಲ್ಪಿಸಬೇಕು: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ದೇವದುರ್ಗ: ಗುಣಮಟ್ಟ ಕಾಯ್ದುಕೊಳ್ಳುವ ಮೂಲಕ ತ್ವರಿತಗತಿಯಲ್ಲಿ ಕಾಮಗಾರಿಗಳು ಪೂರ್ಣಗೊಳಸಬೇಕು. ಯಾವುದೇ ಕಾರಣಕ್ಕೆ ಸಾರ್ವಜನಿಕರಿಂದ ಕಳಪೆ ಗುಣಮಟ್ಟ ದೂರುಗಳು ಬರದಂತೆ ಅಧಿಕಾರಿಗಳು ನಿಗಾವಹಿಸಬೇಕು ಎಂದು ಶಾಸಕಿ ಕರೆಮ್ಮ ಗೋಪಾಲಕೃಷ್ಣ ಹೇಳಿದರು.

ಪಟ್ಟಣದ ಶಂಕರಬಂಡಿ, ಸೋಮಕಾರ ದೊಡ್ಡಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕೋಟ್ಯಂತರ ರೂ. ವೆಚ್ಚದ ಸಿಸಿರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ಚಾಲನೆ ನೀಡಿ ಅವರು ಮಾತನಾಡಿದರು. ಕಳೆದ ಮೂರು ವರ್ಷದ ಅವಧಿಯಲ್ಲಿ ಜನರ ಬೇಡಿಕೆಯಂತೆ ಹಂತ ಹಂತವಾಗಿ ಅಭಿವೃದ್ಧಿ ಕೈಗೊಳ್ಳಲಾಗಿದ್ದು, ಉಳಿದಿರುವ ಎರಡು ವರ್ಷದಲ್ಲಿ ಬದಲಾವಣೆ ಬೆಳಕು ಚೆಲ್ಲುವ ಕೆಲಸ ಪ್ರಮಾಣಿಕವಾಗಿ ಮಾಡುತ್ತೇನೆ ಎಂದು ಹೇಳಿದರು.

ರಾಜ್ಯ ಸರಕಾರ ಅಭಿವೃದ್ಧಿಗೆ ಅನುದಾನ ನೀಡದೆ ಮಲತಾಯಿ ದೋರಣೆ ಅನುಸರಿಸುತ್ತಿದ್ದು, ಕೆಕೆಆರ್‌ಡಿಬಿ ಯೋಜನೆಯ ಅನುದಾನವೇ ಸದ್ಬಳಿಕೆ ಮಾಡಿಕೊಂಡು ತಾಲೂಕು ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ವಿರೋಧ ಪಕ್ಷದಲ್ಲಿದ್ದರೂ, ಮೂರು ವರ್ಷಗಳಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಸರಕಾರಿ ಶಾಲಾ ಕಟ್ಟಡ, ಸಮುದಾಯ ಆರೋಗ್ಯ ಕೇಂದ್ರಗಳು, ರಸ್ತೆ, ಹೈಮಾಸ್‌ ಬೀದಿದೀಪ ಸೇರಿದಂತೆ ಇತರೆ ಅಭಿವೃದ್ಧಿಗೆ ಪ್ರಮಾಣಿಕ ಸೇವೆ ನೀಡಲಾಗಿದೆ ಎಂದು ಹೇಳಿದರು.

ಸಾರ್ವತ್ರಿಕ ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ನಡೆದುಕೊಂಡು, ಅವರ ವಿಶ್ವಾಸಕ್ಕೆ ಮಾದರಿಯಾಗಿದ್ದೇನೆ ಎಂದರು. ಕೊಪ್ಪೂರು ಕ್ರಾಸ್‌ನಿಂದ ಅಂಚೆಸೂಗೂರು ಕ್ರಾಸ್‌ವರೆಗೆ ಹೈಮಾಸ್‌ ಬೀದಿದೀಪಗಳ ಕಾಮಗಾರಿ ಪಗ್ರತಿಯಲ್ಲಿದ್ದು, ಅಭಿವೃದ್ಧಿ ವಿಚಾರದಲ್ಲಿ ಬದಲಾವಣೆ ತರಬೇಕು ಎನ್ನುವ ಸಂಕಲ್ಪ ಮಾಡಿದ್ದೇನೆ ಎಂದು ಹೇಳಿದರು.

ಒಳ ಚಂರಡಿ ಕಾಮಗಾರಿ ನಿರ್ಮಿಸಲು 37 ಕೋಟಿ ರೂ. ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಸಲ್ಲಿಸಲಾಗಿದ್ದು, ಸಂಬಂಧಪಟ್ಟ ಸಚಿವರಿಗೆ ಮನವರಿಕೆ ಮಾಡಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜೆಡಿಎಸ್‌ ಪಕ್ಷದ ತಾಲೂಕಾಧ್ಯಕ್ಷ ಬಸನಗೌಡ ದೇಸಾಯಿ, ಅಮರೇಶ ಪಾಟೀಲ್‌ ವಕೀಲರು ಪರತಪುರ, ಶಾಲಂ ಉದ್ದಾರ, ಸಿದ್ದಣ್ಣ ಗಣೇಕಲ್‌, ರಮೇಶ ರಾಮನಾಳ, ರಂಗಮ್ಮ ಇರಬಗೇರಾ, ಹನುಮಂತ್ರಾಯ ವಕೀಲ, ನಾಗರಾಜ ಪಾಟೀಲ್,ಗೋವಿಂದ ನಾಯಕ,ಮೈನುದ್ದೀನ್ ಡಿ.ಜೆ,ಖಾಜಾ ಹುಸೇನ್,ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಗೋವಿಂದರಾಜ್‌ ನಾಯಕ, ಮಹಿಬೂಬು ಗೌರಂಪೇಟೆ, ನಾಗರಾಜ ಪಾಟೀಲ್‌ ಸೇರಿದಂತೆ ಇತರರು ಇದ್ದರು.

Tags

Karemma GopalakrishnaRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X