Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಯಾದಗಿರಿ
  4. ಫೆ.9ರಂದು ಆಲಮಟ್ಟಿಗೆ ರೈತರ ನಡೆ: ಕೃಷ್ಣಾ...

ಫೆ.9ರಂದು ಆಲಮಟ್ಟಿಗೆ ರೈತರ ನಡೆ: ಕೃಷ್ಣಾ ಮೇಲ್ದಂಡೆ ಹಂತ-3 ತಕ್ಷಣ ಜಾರಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ20 Jan 2026 11:45 PM IST
share
ಫೆ.9ರಂದು ಆಲಮಟ್ಟಿಗೆ ರೈತರ ನಡೆ: ಕೃಷ್ಣಾ ಮೇಲ್ದಂಡೆ ಹಂತ-3 ತಕ್ಷಣ ಜಾರಿಗೆ ಆಗ್ರಹ

ಯಾದಗಿರಿ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ–3ನ್ನು ತಕ್ಷಣ ಅನುಷ್ಠಾನಗೊಳಿಸಬೇಕೆಂದು ಒತ್ತಾಯಿಸಿ ಫೆಬ್ರವರಿ 9ರಂದು ಆಲಮಟ್ಟಿ ಜಲಾಶಯದ ಬಳಿ ಬೃಹತ್ ರೈತ ಹೋರಾಟ ನಡೆಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತ ಸೇನೆ ರಾಜ್ಯ ಸಮಿತಿ ನಿರ್ಣಯ ಕೈಗೊಂಡಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಲಕ್ಷ್ಮೀಕಾಂತ ಎ. ಪಾಟೀಲ್ ಮದ್ದರಕಿ ತಿಳಿಸಿದರು.

ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮೀಕಾಂತ ಎ. ಪಾಟೀಲ್, ಉತ್ತರ ಕರ್ನಾಟಕದ ರೈತರ ಹಿತದೃಷ್ಟಿಯಿಂದ ಈ ಹೋರಾಟವನ್ನು ಆಯೋಜಿಸಲಾಗಿದ್ದು, ವಿವಿಧ ಜಿಲ್ಲೆಗಳ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಯೋಜನೆಯ ಮೂರನೇ ಹಂತದಲ್ಲಿ ಆಲಮಟ್ಟಿ ಜಲಾಶಯದ ಎತ್ತರವನ್ನು 14 ಅಡಿ ಹೆಚ್ಚಿಸಲು ಅವಕಾಶವಿದ್ದರೂ ಇದುವರೆಗೆ ಜಾರಿಯಾಗಿಲ್ಲ. ಇದರಿಂದ 150 ಟಿಎಂಸಿ ನೀರು ಸಂಗ್ರಹಿಸಿ ಬಳಸುವ ಅವಕಾಶ ಕೈ ತಪ್ಪಿದ್ದು, ರೈತರಿಗೆ ಅಪಾರ ನಷ್ಟ ಉಂಟಾಗಿದೆ ಎಂದು ಆರೋಪಿಸಿದರು.

ಮೂರನೇ ಹಂತದಲ್ಲಿ ಒಟ್ಟು 9 ಉಪಯೋಜನೆಗಳಿದ್ದು, ವಿಜಯಪುರ, ಬಾಗಲಕೋಟೆ, ರಾಯಚೂರು, ಕಲಬುರ್ಗಿ, ಯಾದಗಿರಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳ ಸುಮಾರು 5.49 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಹೆಚ್ಚುವರಿ ನೀರಾವರಿ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಆದರೆ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳಕ್ಕೆ ಸಂಬಂಧಿಸಿದ ಆಂಧ್ರ ಪ್ರದೇಶದ ತಗಾದೆ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವುದರಿಂದ ಯೋಜನೆ ಇತ್ಯರ್ಥವಾಗದೆ ಉತ್ತರ ಕರ್ನಾಟಕದ ಶೇ.11ರಷ್ಟು ರೈತರಿಗೆ ಅನ್ಯಾಯವಾಗುತ್ತಿದೆ ಎಂದರು.

ಯಾದಗಿರಿ ಜಿಲ್ಲೆಯಲ್ಲಿ ಯೋಜನೆ ಜಾರಿಯಾದರೆ ವಡಗೇರಿ ತಾಲ್ಲೂಕಿನ ವಡಗೇರಿ, ತುಮಕೂರು, ಅಭಿವ್ಯಾಳ, ರೊಟ್ಟಡಿಗಿ, ಬೂದಿಯಾಳ, ಕದರಾಪುರ ಸೇರಿದಂತೆ ಹಲವು ಗ್ರಾಮಗಳಿಗೆ ಭೀಮಾ ಪ್ಲಾಂಟ್ ಯೋಜನೆಯಿಂದ ನೀರು ದೊರೆಯಲಿದೆ. ಸುರಪುರ ಹಾಗೂ ಶಹಾಪುರ ತಾಲ್ಲೂಕಿನ ಅನೇಕ ಗ್ರಾಮಗಳಿಗೆ ಮಲ್ಲಾಬಾದಿ ಏತನೀರಾವರಿ ಲಿಫ್ಟ್–1, 2 ಹಾಗೂ 3 ಹಂತಗಳ ಮೂಲಕ ನೀರು ಒದಗಿಸುವ ಉದ್ದೇಶವಿದೆ ಎಂದು ವಿವರಿಸಿದರು.

ಸರ್ಕಾರದ ಇಚ್ಛಾಶಕ್ತಿ ಕೊರತೆಯಿಂದಾಗಿ ಕೊನೆ ಭಾಗದ ರೈತರಿಗೆ ಪ್ರತಿವರ್ಷ ನೀರು ಸಿಗದೆ ಭೂಮಿ ಬರಡಾಗುತ್ತಿದೆ. ಎರಡನೇ ಬೆಳೆಗೆ ನೀರು ಒದಗಿಸುವಂತೆ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ತಕ್ಷಣ ಕಾರ್ಯಪ್ರವೃತ್ತರಾಗಿ ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣ ಇತ್ಯರ್ಥಗೊಳಿಸಿ ಜಲಾಶಯ ಎತ್ತರ ಹೆಚ್ಚಳಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಈ ಹೋರಾಟದಲ್ಲಿ ನಾಡಿನ ವಿವಿಧ ಮಠಾಧೀಶರು, ಸಂಘಟನೆಗಳ ಮುಖಂಡರು, ಚಿಂತಕರು, ಸಾಹಿತಿಗಳು, ಪತ್ರಕರ್ತರು, ನ್ಯಾಯವಾದಿಗಳು ಹಾಗೂ ಕೃಷಿ ಸಂಬಂಧಿ ಉದ್ಯಮದಾರರು ಸೇರಿದಂತೆ ಅಪಾರ ಸಂಖ್ಯೆಯ ರೈತರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯಾದಗಿರಿ ಜಿಲ್ಲಾ ಅಧ್ಯಕ್ಷ ಮಹಾವೀರ ಲಿಂಗೇರಿ, ಕಲ್ಯಾಣ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಭೀಮರೆಡ್ಡಿ ಯರಗೋಳ, ಮಹಿಪಾಲರೆಡ್ಡಿ, ಸುಭಾಷ್ ನಡುವಿನಕೇರಿ, ಶಿವು ಯರಗೋಳ, ಮೊಹಮ್ಮದ್ ಗೌಸ್, ಶ್ರೀಕಾಂತ್ ಕುಂಬಾರ, ತಾಯಪ್ಪ ನಗಲಾಪೂರ, ಬಾಷ್ ಕುರುಕುಂದಿ, ಭವಾನಿಶಂಕರ, ಸೈದು ವಿಭೂತಿ, ಸಾಬರೆಡ್ಡಿ, ಶರಣು ಖಾನಾಪೂರ, ಅರುಣ ಸಾಹುಕಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Farmers protest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X