Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕಲ್ಯಾಣ ಕರ್ನಾಟಕವೆಂದರೆ ಕೇವಲ...

ಕಲ್ಯಾಣ ಕರ್ನಾಟಕವೆಂದರೆ ಕೇವಲ ಕಲಬುರಗಿಯಲ್ಲ : ಚಂದ್ರಶೇಖರ ಗೋರೆಬಾಳ

ಸಿಂಧನೂರಿನಲ್ಲಿ 11ನೇ ಮೇ ಸಾಹಿತ್ಯ ಮೇಳ

ವಾರ್ತಾಭಾರತಿವಾರ್ತಾಭಾರತಿ18 May 2025 5:05 PM IST
share
ಕಲ್ಯಾಣ ಕರ್ನಾಟಕವೆಂದರೆ ಕೇವಲ ಕಲಬುರಗಿಯಲ್ಲ : ಚಂದ್ರಶೇಖರ ಗೋರೆಬಾಳ

ರಾಯಚೂರು : ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಎಂದರೆ ಕೇವಲ ಕಲಬುರಗಿಯ ಅಭಿವೃದ್ಧಿಯಲ್ಲ, ದೇಶದಲ್ಲಿಯೇ ಅತ್ಯಂತ ಹಿಂದುಳಿದ ರಾಯಚೂರು, ಯಾದಗಿರಿ‌‌ ಜಿಲ್ಲೆಯಲ್ಲಿರುವ ಜ್ವಲಂತ ಸಮಸ್ಯೆಗಳು ಪರಿಹಾರವಾಗದೇ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಆಗದು ಎಂದು ಕವಿ, ಹೋರಾಟಗಾರ ಚಂದ್ರಶೇಖರ ಗೋರಬಾಳ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಸತ್ಯಾ ಗಾರ್ಡನ್‌ನಲ್ಲಿ ಲಡಾಯಿ ಪ್ರಕಾಶನ ಗದಗ, ಕವಿ ಪ್ರಕಾಶ ಕವಲಕ್ಕಿ, ಚಿತ್ತಾರ ಕಲಾ ಬಳಗ ಧಾರವಾಡ ಹಾಗೂ ಮೇ ಸಾಹಿತ್ಯ ಮೇಳ ಬಳಗ ಸಿಂಧನೂರು ಸಹಯೋಗದಲ್ಲಿ ಆಯೋಜಿಸಿದ್ದ ಮೆದಿಕಿನಾಳ ಭೂ ಹೋರಾಟ ನೆನಪಿನ ವೇದಿಕೆಯಲ್ಲಿ ನಡೆದ ಎರಡನೇ ದಿನದ ‘ಅಸಮಾನ ಭಾರತ ಸಮಾನತೆಗಾಗಿ ಸಂಘರ್ಷ ಅಂದು-ಇಂದು’ ಎಂಬ ಘೋಷವಾಕ್ಯದ 11ನೇ ಮೇ ಸಾಹಿತ್ಯ ಮೇಳದಲ್ಲಿ ಎರಡನೇ ದಿನ ಭಾನುವಾರ ಅಭಿವೃದ್ಧಿಯ ಸತ್ಯ-ಮಿಥ್ಯೆ ಎಂಬ ಗೋಷ್ಠಿಯಲ್ಲಿ ‘ಕಲ್ಯಾಣ ಕರ್ನಾಟಕದ ಅಭಿವೃದ್ಧಿ’ ಎಂಬ ವಿಷಯದ ಕುರಿತು ಮಾತನಾಡಿದರು.

ದೇಶದಲ್ಲಿ ಅತ್ಯಂತ ಹಿಂದುಳಿದ ಭಾಗವಾದ ಕಲ್ಯಾಣ ಕರ್ನಾಟಕವನ್ನು ಆಳುವ ಸರ್ಕಾರ ಕೇವಲ ಹೆಸರು ಬದಲಿಸಿದ್ದೆ ಕಲ್ಯಾಣ ಮಾಡಿದೆ. ಈ ಭಾಗದ ಅಸಮಾನತೆ ಹೋಗಲಾಡಿಸಬೇಕಾದರೆ ಆಲೋಚನೆ ಮಾಡುವ ದಿಕ್ಕು ಬದಲಾಗಬೇಕು. 371 ಜೆ ಕಲಂ ಜಾರಿಯಾದರೂ ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಅಭಿವೃದ್ಧಿಯಾಗಿಲ್ಲ. ಭೂಮಿ ಹಂಚಿಕೆ, ವಸತಿ ಮತ್ತು ಭೂ ವಂಚಿತರ ಬಗ್ಗೆ ಇದುವರೆಗೆ ಹೋರಾಟ ನಡೆಯುತ್ತಿದೆ ಅವರ ಹಕ್ಕು ಸಿಕ್ಕಿಲ್ಲ ಎಂದು ಕಳವಳ‌ ವ್ಯಕ್ತಪಡಿಸಿದರು.

ರಾಯಚೂರು ಜಿಲ್ಲೆಯಲ್ಲಿ ಅತಿ‌ಹೆಚ್ಚು ಹತ್ತಿ,‌ ಭತ್ತ ಬೆಳೆಯಲಾಗುತ್ತಿದೆ. ಆದರೂ ಜವಳಿ ಪಾರ್ಕ್ ಹಾಗೂ ದೊಡ್ಡದಾದ ಯೋಜನೆಗಳು ಕಲಬುರಗಿ ಪಾಲಾಗುತ್ತಿದೆ. ದೀರ್ಘಾವಧಿ ಕಾಲ ಒಂದೇ ಪಕ್ಷ, ಒಬ್ಬ ನಾಯಕ ಅಧಿಕಾರ ಹಿಡಿದಿಟ್ಟುಕೊಂಡ ಕಾರಣ ಇತರೆ ಜಿಲ್ಲೆಗಳ ಅಭಿವೃದ್ಧಿ ಆಗುತ್ತಿಲ್ಲ. ಕಲ್ಯಾಣ ಕರ್ನಾಟಕ ಎಂದರೆ‌‌ ಕೇವಲ‌ ಕಲಬುರಗಿಯಲ್ಲ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳಿಗೂ‌ ಹಕ್ಕು ಸಿಗಬೇಕು ಎಂದು ಹೇಳಿದರು

‘ಅಭಿವೃದ್ಧಿ ಪರಿಕಲ್ಪನೆ- ವಾಸ್ತವಾಂಶಗಳು’ ಕುರಿತು ನಾಗೇಗೌಡ ಕಿಲಾರ ಮಾತನಾಡಿದರು.

ಕಂದೇಗಾಲ ಶ್ರೀನಿವಾಸ ಮಾತನಾಡಿ, ಟಿಪ್ಪು ಸುಲ್ತಾನ್ ಭೂ‌ ಸುಧಾರಣೆ ಕಾಯ್ದೆ ಜಾರಿಯಾಗುವ ಮುಂಚೆಯೇ ಬಡವರಿಗೆ, ತುಳಿತಕ್ಕೊಳಗಾದವರಿಗೆ ಭೂಮಿ ಹಂಚಿದ್ದರು. ಸಂಪತ್ತಿನ ಸಮಾನ ಹಂಚಿಕೆಯನ್ನು ಇಂದಿನ ಸರ್ಕಾರ ಅರಿತುಕೊಳ್ಳಬೇಕಿದೆ.

ಕಾಟನ್ ಬೆಳೆಯುವ ರಾಯಚೂರಿನಲ್ಲಿ ಗಾರ್ಮೆಂಟ್ ಫ್ಯಾಕ್ಟರಿಗಳಿಲ್ಲ ಎನ್ನುವುದು ದುರಂತ. ದಾಲ್ ಮಿಲ್ ಗಳು ಮುಚ್ಚಿ ಹೋಗಿವೆ. ಉದ್ಯೋಗ ಸೃಷ್ಠಿಸುವ ಕೈಗಾರಿಕೆಗಳು ಬೆಂಗಳೂರಿನಂತಹ ಮಹಾನಗರಗಳಿಗೆ ಹೋಗುತ್ತಿವೆ. ಪರಿಸ್ಥಿತಿ ಬದಲಾಗಬೇಕು, ಅಸಮಾನತೆ ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿದರು.

ಬಿಹಾರ ಹೊರತುಪಡಿಸಿ ಕಲ್ಯಾಣ ಕರ್ನಾಟಕದಲ್ಲಿ ಅತಿಹೆಚ್ಚು ಪೌಷ್ಠಿಕತೆ, ಗರ್ಭಿಣಿಯರು, ಬಾಣಂತಿಯರ ಸಾವಾಗುತ್ತಿದೆ. ರಾಯಚೂರಿನಲ್ಲಿಯೇ ಏಮ್ಸ್ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

‘ಉತ್ತರ ಕರ್ನಾಟಕ’ದ ಕುರಿತು ಬಿ.ಎಸ್ ಸೊಪ್ಪಿನ ಮಾತನಾಡಿದರು. ರೈತ ಮುಖಂಡ ಶರಣಪ್ಪ ಮರಳಿ, ನಾಗರಾಜ ಪೂಜಾರ್, ಶೇಖಣ್ಣ ಕವಳಿಕಾಯಿ, ಶರೀಫ ಬಿಳಿಯಲಿ ಉಪಸ್ಥಿತರಿದ್ದರು. ಸೋಮಶೇಖರ ಕನಕಾಚಲ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X