Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ವಿಜ್ಞಾನ ಕಲಿಕೆಗೆ ಬಲ: ರಾಯಚೂರಿನ 12...

ವಿಜ್ಞಾನ ಕಲಿಕೆಗೆ ಬಲ: ರಾಯಚೂರಿನ 12 ಸರ್ಕಾರಿ ಶಾಲೆಗಳಿಗೆ ‘ಕ್ರಿಯಾ ಲ್ಯಾಬ್’

ಎಸ್‌ಬಿಐಎಫ್, ಎಸ್‌ಬಿಐಎಫ್‌ಎಂಎಲ್ ಹಾಗೂ ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆ ಸಹಯೋಗ

ವಾರ್ತಾಭಾರತಿವಾರ್ತಾಭಾರತಿ30 Aug 2026 9:32 AM IST
share
ವಿಜ್ಞಾನ ಕಲಿಕೆಗೆ ಬಲ: ರಾಯಚೂರಿನ 12 ಸರ್ಕಾರಿ ಶಾಲೆಗಳಿಗೆ ‘ಕ್ರಿಯಾ ಲ್ಯಾಬ್’

ರಾಯಚೂರು, ಆ.29: ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಲ್ಲಿ ವಿಜ್ಞಾನ ಕಲಿಕೆಯನ್ನು ಬಲಪಡಿಸುವ ಉದ್ದೇಶದಿಂದ ಎಸ್‌ಬಿಐ ಫೌಂಡೇಶನ್ (ಎಸ್‌ಬಿಐಎಫ್), ಎಸ್‌ಬಿಐ ಫಂಡ್ಸ್ ಮ್ಯಾನೇಜ್‌ಮೆಂಟ್ ಲಿಮಿಟೆಡ್ (ಎಸ್‌ಬಿಐಎಫ್‌ಎಂಎಲ್) ಹಾಗೂ ಬೆಂಗಳೂರಿನ ಪ್ರಯೋಗ ಶಿಕ್ಷಣ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ರಾಯಚೂರಿನ 12 ಸರ್ಕಾರಿ ಶಾಲೆಗಳಲ್ಲಿ ‘ಕ್ರಿಯಾ’ ಲ್ಯಾಬ್ ಉಪಕ್ರಮವನ್ನು ವಿಸ್ತರಿಸಲಾಗುತ್ತಿದೆ.

ಹೊಸ ಶೈಕ್ಷಣಿಕ ವರ್ಷದ ಹಿನ್ನೆಲೆಯಲ್ಲಿ ಶನಿವಾರ ರಾಯಚೂರಿನ ಎಕ್ಲಾಸಪೂರು ಹಾಗೂ ಹುಣಶಿಹಾಳ ಹುಡಾ ಎರಡು ಸರ್ಕಾರಿ ಪ್ರೌಢಶಾಲೆಗಳಲ್ಲಿ ‘ಕ್ರಿಯಾ ಲ್ಯಾಬ್ ಸ್ಟೇಷನ್‌’ಗಳನ್ನು ಉದ್ಘಾಟಿಸಲಾಯಿತು.

ಎಸ್‌ಬಿಐ ಫಂಡ್ಸ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ದೇಬಾಶಿಶ್ ಮಿಶ್ರಾ ಅವರು ಜಿಎಚ್‌ಪಿಎಸ್ ಏಕಲಾಸ್‌ಪುರದಲ್ಲಿ ಕ್ರಿಯಾ ಲ್ಯಾಬ್ ಸ್ಟೇಷನ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿವಿಧ ವಿಜ್ಞಾನ ಪ್ರಯೋಗಗಳನ್ನು ಪ್ರದರ್ಶಿಸಿದರು. ಪ್ರಾಯೋಗಿಕ ಹಾಗೂ ಚಟುವಟಿಕೆ ಆಧಾರಿತ ಕಲಿಕೆಯ ಮೂಲಕ ವೈಜ್ಞಾನಿಕ ಪರಿಕಲ್ಪನೆಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಲು ಕ್ರಿಯಾ ಲ್ಯಾಬ್‌ಗಳು ಹೇಗೆ ನೆರವಾಗುತ್ತಿವೆ ಎಂಬುದನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಬಿಐಎಫ್‌ಎಂಎಲ್‌ನ ಮುಖ್ಯ ಜನರು ಮತ್ತು ಸುಸ್ಥಿರತಾ ಅಧಿಕಾರಿ ರಜತ್ ಗ್ರೋವರ್, ಸಿಎಸ್‌ಆರ್ ಲೀಡ್ ನಿಶಾಂತ್ ಬಂಗೇರಾ ಸೇರಿದಂತೆ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನಾಯಕತ್ವ ತಂಡವು ಉಪಕ್ರಮದ ಪ್ರಗತಿ, ಪರಿಣಾಮ ಹಾಗೂ ಪ್ರಮುಖ ಕಲಿಕೆಗಳ ಕುರಿತು ಮಾಹಿತಿ ಪಡೆದುಕೊಂಡಿತು.

ಅನುಭವದ ಕಲಿಕೆಗೆ ಆದ್ಯತೆ

ಪ್ರಯೋಗದ ಸಮಗ್ರ ಮಾದರಿಯಡಿ ಸರ್ಕಾರಿ ಶಾಲೆಗಳಲ್ಲಿ ಸುಸಜ್ಜಿತ ವಿಜ್ಞಾನ ಪ್ರಯೋಗಾಲಯ ಕೇಂದ್ರಗಳನ್ನು ಸ್ಥಾಪಿಸುವುದರ ಜತೆಗೆ, ರಾಜ್ಯ ಹಾಗೂ ಎನ್‌ಸಿಇಆರ್‌ಟಿ ಪಠ್ಯಕ್ರಮಕ್ಕೆ ಹೊಂದಿಕೆಯಾಗುವಂತೆ ರೂಪಿಸಲಾದ ಕೋರ್ಸ್‌ವೇರ್ ಮತ್ತು ಶಿಕ್ಷಕರಿಗೆ ನಿರಂತರ ಶೈಕ್ಷಣಿಕ ಮಾರ್ಗದರ್ಶನ ಒದಗಿಸಲಾಗುತ್ತದೆ.

ವಿದ್ಯಾರ್ಥಿಗಳು ಸ್ವತಃ ಪ್ರಯೋಗ ನಡೆಸುವ ಮೂಲಕ ವಿಜ್ಞಾನ ವಿಷಯವನ್ನು ಹೆಚ್ಚು ಪರಿಣಾಮಕಾರಿಯಾಗಿ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟರು. ಶಿಕ್ಷಕರು ಕೂಡ ಚಟುವಟಿಕೆ ಆಧಾರಿತ ಬೋಧನಾ ವಿಧಾನವು ಬೋಧನೆಯನ್ನು ಹೆಚ್ಚು ಪರಿಣಾಮಕಾರಿಯಾಗಿಸಿದೆ ಎಂದು ತಿಳಿಸಿದರು.

ಈ ಉಪಕ್ರಮವು ವಿದ್ಯಾರ್ಥಿಗಳಲ್ಲಿ ಕುತೂಹಲ, ವೈಜ್ಞಾನಿಕ ಚಿಂತನೆ ಹಾಗೂ ಸಮಸ್ಯೆ ಪರಿಹರಿಸುವ ಕೌಶಲ ಬೆಳೆಸುವ ಗುರಿ ಹೊಂದಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಅನುಭವದ ಕಲಿಕೆಯ ತತ್ವಗಳಿಗೆ ಪೂರಕವಾಗಿದೆ.

‘ತಳಮಟ್ಟದಲ್ಲಿ ಕಲಿಕೆಗೆ ಉತ್ತೇಜನ’

ಎಸ್‌ಬಿಐ ಫಂಡ್ಸ್ ಮ್ಯಾನೇಜ್‌ಮೆಂಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ದೇಬಾಶಿಶ್ ಮಿಶ್ರಾ ಮಾತನಾಡಿ, ಅಗತ್ಯ ಸೇವೆಗಳು ಹಾಗೂ ಸೌಲಭ್ಯಗಳಿಂದ ವಂಚಿತ ಸಮುದಾಯಗಳಿಗೆ ಅವಕಾಶಗಳನ್ನು ಕಲ್ಪಿಸುವ ಸಂಸ್ಥೆಗಳೊಂದಿಗೆ ಸಿಎಸ್‌ಆರ್ ಯೋಜನೆಗಳ ಮೂಲಕ ನಿರಂತರವಾಗಿ ಕೈಜೋಡಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ಪ್ರಾಯೋಗಿಕ ವಿಜ್ಞಾನ ಕಲಿಕಾ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಈ ಸಹಯೋಗ ಮಹತ್ವದ್ದಾಗಿದೆ ಎಂದು ಹೇಳಿದರು.

ಪ್ರಯೋಗದ ಕಾರ್ಯನಿರ್ವಾಹಕ ಅಧ್ಯಕ್ಷ ವಲ್ಲಿಶ್ ಹೇರೂರ್ ಮಾತನಾಡಿ, ವಿದ್ಯಾರ್ಥಿಗಳು ಸ್ವತಃ ಅನ್ವೇಷಿಸಲು ಮತ್ತು ಪ್ರಯೋಗ ನಡೆಸಲು ಅವಕಾಶ ದೊರೆತಾಗ ವಿಜ್ಞಾನವನ್ನು ಉತ್ತಮವಾಗಿ ಅರ್ಥೈಸಿಕೊಳ್ಳುತ್ತಾರೆ. ಕ್ರಿಯಾ ಉಪಕ್ರಮವು ಸರ್ಕಾರಿ ಶಾಲೆಗಳಲ್ಲಿ ಪ್ರಾಯೋಗಿಕ ಕಲಿಕೆಗೆ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳು ಪಠ್ಯಪುಸ್ತಕದಾಚೆಗೆ ಚಿಂತಿಸುವ ಹಾಗೂ ಕುತೂಹಲ ಬೆಳೆಸಿಕೊಳ್ಳುವ ವಾತಾವರಣವನ್ನು ಸೃಷ್ಟಿಸುತ್ತಿದೆ ಎಂದು ಹೇಳಿದರು.

ನೀತಿ ಆಯೋಗದ ಮಹತ್ವಾಕಾಂಕ್ಷೆಯ ಜಿಲ್ಲೆಗಳ ಕಾರ್ಯಕ್ರಮದಡಿ ದೇಶದ 112 ಜಿಲ್ಲೆಗಳನ್ನು ಕೇಂದ್ರೀಕೃತ ಅಭಿವೃದ್ಧಿಗಾಗಿ ಗುರುತಿಸಲಾಗಿದ್ದು, ರಾಯಚೂರು ಕೂಡ ಈ ಪಟ್ಟಿಯಲ್ಲಿದೆ. ಇದೇ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಶಿಕ್ಷಣವನ್ನು ಬಲಪಡಿಸುವ ಈ ಉಪಕ್ರಮ ಮಹತ್ವ ಪಡೆದುಕೊಂಡಿದೆ.

ಎಸ್‌ಬಿಐ ಫೌಂಡೇಶನ್ ಈಗಾಗಲೇ ಪ್ರಯೋಗದ ವಿದ್ಯಾರ್ಥಿ ಸಂಶೋಧನಾ ಉಪಕ್ರಮವಾದ ‘ಅನ್ವೇಷಣ’ಕ್ಕೂ ಬೆಂಬಲ ನೀಡಿದೆ.

Tags

Kriya Labgovernment schoolsRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X