Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ...

ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ ಕಾಣಲಿ: ಜುಬಿನ್ ಮೊಹಪಾತ್ರ

ವಾರ್ತಾಭಾರತಿವಾರ್ತಾಭಾರತಿ28 Jan 2026 10:46 PM IST
share
ಉತ್ಸವದಲ್ಲಿ ರಾಯಚೂರು ಸಿಟಿ ಸುಂದರವಾಗಿ ಕಾಣಲಿ: ಜುಬಿನ್ ಮೊಹಪಾತ್ರ

ರಾಯಚೂರು : ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವವು ಯಶಸ್ವಿಯಾಗಿ ನಡೆಯುವ ನಿಟ್ಟಿನಲ್ಲಿ ರಾಯಚೂರು ನಗರವು ಸುಂದರ ಹಾಗೂ ಸ್ವಚ್ಛವಾಗಿ ಕಾಣಬೇಕು. ಈ ಕಾರ್ಯದಲ್ಲಿ ಪ್ರತಿಯೊಬ್ಬ ಪೌರ ಕಾರ್ಮಿಕರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ರಾಯಚೂರು ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮೋಹಪಾತ್ರ ಅವರು ಹೇಳಿದರು.

ನಗರದ ಜೈಲ್‌ಖಾನ್ ಸಮೀಪದ ಮಹಿಳಾ ಸಮಾಜ ಮೈದಾನದಲ್ಲಿ ಜ.28ರಂದು ಆಯೋಜಿಸಿದ್ದ ಪೌರ ಕಾರ್ಮಿಕರ ಸಭೆಯಲ್ಲಿ ಅವರು ಮಾತನಾಡಿದರು.

ಶುಚಿತ್ವ ಇದ್ದಲ್ಲಿ ಶಿಸ್ತು, ಶಿಸ್ತು ಇದ್ದಲ್ಲಿ ಶಾಂತಿ ಇರುತ್ತದೆ. ಈ ದೃಷ್ಟಿಕೋನದಿಂದ ಉತ್ಸವದ ಸಂದರ್ಭದಲ್ಲಿ ನಮ್ಮ ಮನೆ, ಮನೆಯ ಸುತ್ತಮುತ್ತಲಿನ ಪರಿಸರ, ರಸ್ತೆ, ಗಟಾರು, ಸಾರ್ವಜನಿಕ ಸ್ಥಳಗಳು ಸೇರಿದಂತೆ ಎಲ್ಲೆಡೆ ಶುಚಿತ್ವಕ್ಕೆ ಒತ್ತು ನೀಡಬೇಕು. ಜಿಲ್ಲಾ ಉತ್ಸವಕ್ಕೆ ಆಗಮಿಸುವ ಅತಿಥಿಗಳಿಗೆ ರಾಯಚೂರು ನಗರವು ಸ್ವಚ್ಛ ಹಾಗೂ ಆಕರ್ಷಕವಾಗಿ ಕಾಣಬೇಕು. ಜನರಿಗೆ ಸ್ವಚ್ಛತೆಯ ಸಂದೇಶ ರವಾನೆಯಾಗಬೇಕು. ರಾಯಚೂರನ್ನು ಸ್ವಚ್ಛ ನಗರವೆಂದು ಜನರು ಮೆಚ್ಚುವಂತೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಪೌರ ಕಾರ್ಮಿಕರಿಗೆ ತಿಳಿಸಿದರು.

ಜಿಲ್ಲಾ ಉತ್ಸವಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಇರುವುದರಿಂದ ಈಗಾಗಲೇ ನಗರದಲ್ಲಿ ಕಸ ಸಂಗ್ರಹ ಸ್ಥಳಗಳಲ್ಲಿ ನಿತ್ಯ ಕಸ ವಿಲೇವಾರಿ, ಮನೆಮನೆ ಕಸ ಸಂಗ್ರಹ, ಕಾರ್ಖಾನೆಗಳು, ಆಸ್ಪತ್ರೆಗಳಲ್ಲಿ ಕಸ ವಿಲೇವಾರಿ ಕಾರ್ಯ ನಡೆಯುತ್ತಿದೆ. ಈ ಕಾರ್ಯ ನಿರಂತರವಾಗಿ ಮುಂದುವರಿಯಬೇಕು ಎಂದು ಸೂಚಿಸಿದರು.

ಉತ್ಸವಕ್ಕೂ ಮುಂಚಿತವಾಗಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ರಾಜ್ಯ ಹಾಗೂ ಅಂತಾರಾಜ್ಯ ಮಟ್ಟದ ಕಲಾವಿದರು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಲಿರುವುದರಿಂದ ರಾಯಚೂರು ನಗರವನ್ನು ಸ್ವಚ್ಛ ನಗರವೆಂದು ಪರಿಚಯಿಸುವ ಅವಕಾಶ ಇದು ಎಂದರು.

ಪ್ರಮುಖವಾಗಿ ಮುಖ್ಯ ರಸ್ತೆಗಳು ಹಾಗೂ ರಾಜ ಕಾಲುವೆಗಳಲ್ಲಿ ದುರ್ವಾಸನೆ ಬರದಂತೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಎಲ್ಲಿಯೂ ಕಸ ಕಾಣದಂತೆ ನೋಡಿಕೊಳ್ಳಬೇಕು. ಉತ್ಸವ ನಡೆಯಲಿರುವ ಶ್ರೀ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರ, ಜೈಲ್‌ಖಾನ್ ಬಳಿಯ ಮಹಿಳಾ ಸಮಾಜ ಆವರಣ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ವಾಲ್‌ಕಟ್ ಮೈದಾನ, ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಮತ್ತು ಹೊರಾಂಗಣದಲ್ಲಿ ಈಗಿನಿಂದಲೇ ಪ್ರತಿದಿನ ಶುಚಿತ್ವ ಕಾರ್ಯ ನಡೆಸಬೇಕು ಎಂದು ಆಯುಕ್ತರು ಸೂಚಿಸಿದರು. ಜೊತೆಗೆ ವಿವಿಧೆಡೆ ಫಾಗಿಂಗ್ ಕಾರ್ಯ ಕೈಗೊಳ್ಳಬೇಕು ಮತ್ತು ಸಾರ್ವಜನಿಕರಲ್ಲಿ ಕಸ ಎಸೆಯದಂತೆ ಜಾಗೃತಿ ಮೂಡಿಸಬೇಕು ಎಂದರು.

ಮೈಸೂರು, ಮಂಗಳೂರು ಸೇರಿದಂತೆ ಕೆಲವು ನಗರಗಳು ಸ್ವಚ್ಛತೆಗೆ ಹೆಸರುವಾಸಿಯಾಗಿವೆ. ಅವುಗಳ ಸಾಲಿನಲ್ಲಿ ರಾಯಚೂರು ಕೂಡ ಸೇರುವಂತೆ ಮಾಡಲು ಜಿಲ್ಲಾ ಉತ್ಸವ ಒಂದು ಉತ್ತಮ ಅವಕಾಶವಾಗಿದೆ. ಇದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡಬೇಕು. ಪ್ರತಿಯೊಬ್ಬರೂ ಸ್ವಚ್ಛತೆಯನ್ನು ತಮ್ಮ ಮನೆಯ ಕೆಲಸವೆಂದು ಭಾವಿಸಿ ಜವಾಬ್ದಾರಿ ಹೊತ್ತರೆ ಮಾತ್ರ ರಾಯಚೂರು ಸ್ವಚ್ಛ ನಗರವಾಗಿ ಗುರುತಿಸಿಕೊಳ್ಳುತ್ತದೆ ಎಂದು ಹೇಳಿದರು.

ಪೌರ ಕಾರ್ಮಿಕರ ಕಾರ್ಯದಲ್ಲಿ ಸಮರ್ಪಕ ಮೇಲ್ವಿಚಾರಣೆ ವಹಿಸುವಂತೆ ಪಾಲಿಕೆಯ ಪರಿಸರ ಅಭಿಯಂತರರು ಹಾಗೂ ಪರಿಸರ ನಿರೀಕ್ಷಕರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಪರಿಸರ ವಿಭಾಗದ ಅಭಿಯಂತರ ಜೈಪಾಲ್ ರೆಡ್ಡಿ, ಉಪ ಆಯುಕ್ತ ಮಲ್ಲಿಕಾರ್ಜುನ, ಪೌರ ಕಾರ್ಮಿಕರು ಹಾಗೂ ಮಹಾನಗರ ಪಾಲಿಕೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X