Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಆರೆಸ್ಸೆಸ್ ಮುಖಂಡರು ಮೊದಲು ಸಗಣಿ, ಮೂತ್ರ...

ಆರೆಸ್ಸೆಸ್ ಮುಖಂಡರು ಮೊದಲು ಸಗಣಿ, ಮೂತ್ರ ಒಂದು ತಿಂಗಳು ಕುಡಿದು ನೋಡಲಿ ಆಮೇಲೆ ಸಾರ್ವಜನಿಕರಿಗೆ ಹೇಳಲಿ: ಕೆ ನೀಲಾ

ವಾರ್ತಾಭಾರತಿವಾರ್ತಾಭಾರತಿ2 Dec 2025 12:39 PM IST
share
ಆರೆಸ್ಸೆಸ್ ಮುಖಂಡರು ಮೊದಲು ಸಗಣಿ, ಮೂತ್ರ ಒಂದು ತಿಂಗಳು ಕುಡಿದು ನೋಡಲಿ ಆಮೇಲೆ ಸಾರ್ವಜನಿಕರಿಗೆ ಹೇಳಲಿ: ಕೆ ನೀಲಾ

ರಾಯಚೂರು: ದೇಶ ತುಪ್ಪ ತಿಂದವರಿಂದ ಹಾಳಾಗಿದೆ ಹೊರತು ಮಾಂಸ ತಿಂದವರಿಂದಲ್ಲ ಎಂದು ಪ್ರಗತಿಪರ ಚಿಂತಕಿ ಹಾಗೂ ಹೋರಾಟಗಾರ್ತಿ ಕೆ. ನೀಲಾ ಹೇಳಿದ್ದಾರೆ.

ದೇವದುರ್ಗ ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಆಯೋಜಿಸಿದ್ದ ಲಾಠಿ ಬಿಡಿ ಶಿಕ್ಷಣ ಪಡಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿ ಜನ್‌ ಕಿ ಬಾತ್ ಮಾತನಾಡುವ ಬದಲು ತನ್ನ ಮನ್‌ ಕಿ ಬಾತ್ ಮಾತನಾಡುತ್ತಿದ್ದಾರೆ. ದೇಶದ ಯುವಜನತೆ ಉತ್ತಮ ಶಿಕ್ಷಣ, ಉದ್ಯೋಗ ವಿಲ್ಲದೇ ಪರದಾಡಬೇಕಾದರೆ ಬಡ,ಕೂಲಿ ಕಾರ್ಮಿಕರ ಮಕ್ಕಳ ಕೈಯಲ್ಲಿ ಲಾಠಿ ಕೊಟ್ಟು ತಮ್ಮ ಮಕ್ಕಳ ಕೈಲಿ ಸೀಟಿ ಕೊಟ್ಟು ಮುಗ್ಧ ಯುವಕರನ್ನು ದಾರಿ ತಪ್ಪಿಸುವ ಕೆಲಸ ಆರೆಸ್ಸೆಸ್ ಮಾಡುತ್ತಿದೆ ಎಂದು ಆರೋಪಿಸಿದರು.

ಆರೆಸ್ಸೆಸ್ ದೇಶದಲ್ಲಿ ಕೋಮು ಗಲಭೆ, ಹಿಂಸಾಚಾರ, ಗೋರಕ್ಷಣೆ ನೆಪದಲ್ಲಿ ಯುವಕರ ಮೇಲೆ ದೌರ್ಜನ್ಯ, ಅಮಾಯಕರನ್ನು ಬಲಿ ತೆಗೆದುಕೊಳ್ಳುತಿದೆ. ದೇಶದ ಯುವಜನತೆಗೆ ಶಿಕ್ಷಣ, ಉದ್ಯೋಗದ ಅವಶ್ಯಕತೆ ಇದೆ ಹೊರತು ಲಾಠಿ ಅಲ್ಲ. ಹೆಣ್ಣನ್ನು ವ್ಯಭಿಚಾರಿ ಎಂದು ಹೇಳುವ ಇವರ ಸಂಸ್ಕೃತಿ ಹೆಣ್ಣನ್ನು ಗೌರವಿಸುತ್ತಾ? ದೇವದುರ್ಗದ ದಲಿತ, ಹಿಂದುಳಿದ ಯುವಕರ ಕೈಯಲ್ಲಿ ಲಾಠಿ ಕೊಡುವ ಆರೆಸ್ಸೆಸ್ ಎಲ್ಲಾ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವವರೆ ಎಂದು ಪ್ರಶ್ನಿಸಿದರು. ‌

ದೇಶ ಮೋದಿಯಿಂದ ನಡೀತಾ ಇಲ್ಲ ಅಂಬಾನಿ, ಆದಾನಿಗಳ ಕೈಗೊಂಬೆ ಆಗಿದೆ. ದೇಶದ ಜನ ತೆರಿಗೆ ಕಟ್ಟಿ ಒದ್ದಾಡುತಿದ್ದಾರೆ. ಆರೆಸ್ಸೆಸ್, ಬಿಜೆಪಿ ಮುಖಂಡರ ಮಕ್ಕಳು ದೇಶ ವಿದೇಶಗಳಲ್ಲಿ ಮಜಾ ಮಾಡುತ್ತಿದ್ದಾರೆ. ಬಡ, ಕೂಲಿ ಕಾರ್ಮಿಕರ ಮಕ್ಕಳು ಲಾಠಿ ಹಿಡಿದು ಜೈಲು ಸೇರುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ರಂಗಪ್ಪ ಗೋಸಲ್,ಮುಫ್ತಿ ಸಾಬ್, ನರಸಣ್ಣ ನಾಯಕ, ಎಮ್. ಆರ್. ಭೇದಿ,ಮಾನಪ್ಪ ಮೇಸ್ತ್ರಿ, ಫಾದರ್ ಜಾನಪೌಲ, ಅಮಿನ ಬಾಷ, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X