Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಭೂಮಾನಂದ, ಅಶ್ವಿನಿ, ರಾಣೆಮ್ಮ ಹತ್ಯೆ...

ಭೂಮಾನಂದ, ಅಶ್ವಿನಿ, ರಾಣೆಮ್ಮ ಹತ್ಯೆ ಖಂಡಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 Aug 2026 7:29 PM IST
share
ಭೂಮಾನಂದ, ಅಶ್ವಿನಿ, ರಾಣೆಮ್ಮ ಹತ್ಯೆ ಖಂಡಿಸಿ ರಾಯಚೂರಿನಲ್ಲಿ ಬೃಹತ್ ಪ್ರತಿಭಟನೆ

ರಾಯಚೂರು: ದಲಿತ ಮುಖಂಡ ಭೂಮಾನಂದ, ಯುವತಿ ಅಶ್ವಿನಿ ಹಾಗೂ ಮಹಿಳೆ ರಾಣೆಮ್ಮ ಅವರ ಕೊಲೆ ಪ್ರಕರಣಗಳನ್ನು ಖಂಡಿಸಿ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ ಸೋಮವಾರ ರಾಯಚೂರಿಗೆ ತಲುಪಿ ಸಮಾಪ್ತಿಯಾಯಿತು. ಬಳಿಕ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ ಪ್ರತಿಭಟನಾ ಸಭೆ ನಡೆಯಿತು.

ಭಾನುವಾರ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದಿಂದ ಆರಂಭಗೊಂಡ ಬೈಕ್ ರ್ಯಾಲಿ ರಾಯಚೂರು ತಾಲೂಕಿನ ಅಸ್ಕಿಹಾಳ ಗ್ರಾಮಕ್ಕೆ ತಲುಪಿ, ಹರ್ಷಿತಾ ಗಾರ್ಡನ್‌ನಲ್ಲಿ ವಾಸ್ತವ್ಯ ಹೂಡಿತ್ತು. ಸೋಮವಾರ ಮಧ್ಯಾಹ್ನ 12.30ಕ್ಕೆ ರ್ಯಾಲಿ ಮತ್ತೆ ಆರಂಭಗೊಂಡು ರಾಯಚೂರು ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ತಲುಪಿತು.

ಪ್ರತಿಭಟನಾ ಸಭೆಯಲ್ಲಿ ದಲಿತಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಎಸ್. ಮಾರೆಪ್ಪ ವಕೀಲರು ಮಾತನಾಡಿ, ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯವು ಎರಡನೇ ಅತಿದೊಡ್ಡ ಜನಸಂಖ್ಯೆ ಹೊಂದಿದ್ದರೂ ಕಳೆದ 25 ವರ್ಷಗಳಿಂದ ಸಮರ್ಪಕ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿದೆ. ಜಿಲ್ಲಾಡಳಿತದಲ್ಲಿಯೂ ದಲಿತರ ಪಾತ್ರ ಕಡಿಮೆಯಾಗಿರುವುದು ಇಂತಹ ಪರಿಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಆರೋಪಿಸಿದರು.

ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ–ಹದ್ದಿನಾಳ ಮುಖ್ಯ ರಸ್ತೆಯಲ್ಲಿ ಸಾರ್ವಜನಿಕರ ಮುಂದೆಯೇ ಬಹುಜನ ಮುಖಂಡ ಭೂಮಾನಂದ ಅವರನ್ನು ಹತ್ಯೆ ಮಾಡಲಾಗಿದೆ. ಪ್ರಕರಣದ ಎಲ್ಲ ಆರೋಪಿಗಳನ್ನು ಇದುವರೆಗೆ ಬಂಧಿಸದಿರುವುದು ಆತಂಕಕಾರಿ ಬೆಳವಣಿಗೆ ಎಂದು ಅವರು ಹೇಳಿದರು.

ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಪದವೀಧರೆ ಅಶ್ವಿನಿ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಅತ್ಯಂತ ಕ್ರೂರವಾಗಿದ್ದು, ಪ್ರಕರಣದ ತನಿಖೆಯನ್ನು ಪಾರದರ್ಶಕವಾಗಿ ಹಾಗೂ ನಿಷ್ಪಕ್ಷಪಾತವಾಗಿ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಲಿಂಗಸುಗೂರು ತಾಲೂಕಿನ ಕರಡಕಲ್ ಗ್ರಾಮದ ರಾಣೆಮ್ಮ ಅವರನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣದ ಬಗ್ಗೆಯೂ ಸಮಗ್ರ ತನಿಖೆ ನಡೆಸಬೇಕು. ಕೇವಲ 15 ದಿನಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಮೂರು ದಲಿತ ಸಮುದಾಯಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳು ನಡೆದಿರುವುದು ಕಳವಳಕಾರಿ. ಮೂರು ಪ್ರಕರಣಗಳಲ್ಲೂ ಎಲ್ಲ ಆರೋಪಿಗಳನ್ನು ಇನ್ನೂ ಬಂಧಿಸದಿರುವುದು ಜಿಲ್ಲಾಡಳಿತದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಮಾರೆಪ್ಪ ಆರೋಪಿಸಿದರು.

ಭೂಮಾನಂದ ಕೊಲೆ ಪ್ರಕರಣ ಸೇರಿದಂತೆ ಅಶ್ವಿನಿ ಹಾಗೂ ರಾಣೆಮ್ಮ ಅವರ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಸಿಐಡಿ ತನಿಖೆಗೆ ವಹಿಸಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಪ್ರಕರಣಗಳ ವಿಚಾರಣೆಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಯಚೂರು ಜಿಲ್ಲೆಯಲ್ಲಿ ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಯಲು ಸರ್ಕಾರ ವಿಶೇಷ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು. ಪ್ರತಿಭಟನಾ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.

ಈ ಸಂದರ್ಭದಲ್ಲಿ ಮಾದಿಗ ಸಮಾಜದ ರಾಜ್ಯ ಮುಖಂಡ ಅಂಬಣ್ಣ ಅರೋಲಿಕರ್, ರವೀಂದ್ರನಾಥ ಪಟ್ಟಿ, ಎಂಆರ್‌ಎಸ್ಎಚ್ ರಾಜ್ಯಾಧ್ಯಕ್ಷ ಶಿವರಾಯ ಅಕ್ಕರಕಿ, ದಲಿತ ಸಂರ್ಘ ಸಮಿತಿ ಸಂಚಾಲಕ ಹನುಮಂತಪ್ಪ ಕಾಕರಗಲ್, ಹೇಮರಾಜ ಅಸ್ಥಿಹಾಳ, ಹಿರಿಯ ಬಹುಜನ ಚಿಂತಕ ಎಂ.ಆ‌ರ್.ಬೇರಿ, ಎಂಆರ್‌ಎಸ್‌ಎಚ್ ಜಿಲ್ಲಾಧ್ಯಕ್ಷ ಹನುಮಂತ ಮನ್ನಾಪುರಿ,ಜಾಕೋಬ್ ಬೊಮ್ಮನಾಳ, ಜಿಲ್ಲಾ ಚಲವಾದಿ ಮಹಿಳಾ ಘಟಕದ ಅಧ್ಯಕ್ಷೆ ಅರ್ಚನಾ ಸುಂಕಾರಿ, ಪಿ. ಯಲ್ಲಪ್ಪ, ಎಂ. ವಿರುಪಾಕ್ಷಿ, ನರಸಿಂಹಲು ಮಾಡಗಿರಿ, ವಿಶ್ವನಾಥ ಪಟ್ಟಿ, ಈರಣ್ಣ ಬಂಡಾರಿ, ವಿಜಯ ರಾಣಿ ಸೇರಿದಂತೆ ಇತರರು ಇದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X