Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಲಿಂಗಸೂಗೂರು, ಹಟ್ಟಿ, ಮುದುಗಲ್...

ಲಿಂಗಸೂಗೂರು, ಹಟ್ಟಿ, ಮುದುಗಲ್ ಪಟ್ಟಣಕ್ಕೆ ಕಾಲಮಿತಿಯಲ್ಲಿ ನೀರು ಪೂರೈಕೆಗೆ ಕ್ರಮ: ಸಚಿವ ಭೈರತಿ ಸುರೇಶ್

ವಾರ್ತಾಭಾರತಿವಾರ್ತಾಭಾರತಿ12 Dec 2025 4:48 PM IST
share
ಲಿಂಗಸೂಗೂರು, ಹಟ್ಟಿ, ಮುದುಗಲ್ ಪಟ್ಟಣಕ್ಕೆ ಕಾಲಮಿತಿಯಲ್ಲಿ ನೀರು ಪೂರೈಕೆಗೆ ಕ್ರಮ: ಸಚಿವ ಭೈರತಿ ಸುರೇಶ್

ಬೆಳಗಾವಿ (ಸುವರ್ಣವಿಧಾನಸೌಧ) ಡಿ. 12: ರಾಯಚೂರು ಜಿಲ್ಲೆಯ ಲಿಂಗಸೂಗೂರು, ಹಟ್ಟಿ ಹಾಗೂ ಮುದುಗಲ್ ಪಟ್ಟಣಗಳಿಗೆ ನಿಗದಿತ ಕಾಲಮಿತಿಯಲ್ಲಿ ಕುಡಿಯುವ ನೀರು ಪೊರೈಕೆಗೆ ಸರಕಾರ ಕ್ರಮ ವಹಿಸಲಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮಾನಪ್ಪ ವಜ್ಜಲ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಭೈರತಿ ಸುರೇಶ್, ಲಿಂಗಸೂಗೂರು ಪಟ್ಟಣಕ್ಕೆ ಅಮೃತ್ 2.0 ಯೋಜನೆಯಡಿ 94 ಕೋಟಿ ರೂ.ವೆಚ್ಚದಲ್ಲಿ ಹಾಗೂ ಹಟ್ಟಿ ಪಟ್ಟಣ ಪಂಚಾಯಿತಿಗೆ ಜೆ.ಜೆ.ಎಂ ಯೋಜನೆಯಡಿ 33.22 ಕೋಟಿ ರೂ.ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿ ಚಾಲ್ತಿಯಲಿದ್ದು, ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದರು.

ಲಿಂಗಸೂಗೂರು ಯೋಜನೆಯ ಟೆಂಡರ್ ಪಡೆದ ಗುತ್ತಿಗೆದಾರರಿಗೆ ಕಾಮಗಾರಿ ಸ್ಥಳವನ್ನು 2024ರ ಮೇ ನಲ್ಲಿ ಹಸ್ತಾಂತರಿಸಲಾಗಿದೆ. 24 ತಿಂಗಳ ಕಾಲಾವಧಿ ನಿಗದಿಪಡಿಸಿದ್ದು, 2026ರ ಮೇ ಒಳಗಾಗಿ ಕಾಮಗಾರಿ ಪೂರ್ಣಗೊಳಿಸಿ ಚಾಲನೆ ನೀಡಲಾಗುವುದು. ಹಟ್ಟಿ ಪಟ್ಟಣ ಪಂಚಾಯಿತಿ ಯೋಜನೆಯ ಟೆಂಡರ್ ಪಡೆದ ಗುತ್ತಿಗೆದಾರರಿಗೆ ಸ್ಥಳವನ್ನು 2025ರ ಜನವರಿಯಲ್ಲಿ ಹಸ್ತಾಂತರಿಸಲಾಗಿದೆ. ಮುಂಬರುವ ವರ್ಷದ ಆರಂಭದಲ್ಲಿಯೇ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಸಚಿವ ಭೈರತಿ ಸುರೇಶ್ ತಿಳಿಸಿದರು.

ಮುದಗಲ್ ಪಟ್ಟಣದ ಕುಡಿಯುವ ನೀರು ಸರಬರಾಜು ಉನ್ನತೀಕರಣ ಯೋಜನೆಗೆ 34.96 ಕೋಟಿ ರೂ.ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಅನುಮೋದನೆ ನೀಡಲಾಗಿದೆ. ಈ ಪೈಕಿ ಶೇ.50ರಷ್ಟು ಮೊತ್ತ 17.48 ಕೋಟಿ ರೂ.ಸರಕಾರದ ಅನುದಾನ ಹಾಗೂ ಶೇ.50ರಷ್ಟು ಮೊತ್ತ 17.48 ಕೋಟಿ ರೂ.ಗಳನ್ನು ಪುರಸಭೆ ಪರವಾಗಿ ಮಾರುಕಟ್ಟೆ ಸಾಲ ಪಡೆದು ಅನುಷ್ಠಾನ ಗೊಳಿಸಲು ಉದ್ದೇಶಿಸಲಾಗಿತ್ತು. ಸರಕಾರದ ಅನುದಾನದ ಪಾಲಿನಲ್ಲಿ 6.62 ಕೋಟಿ ರೂ.ವೆಚ್ಚವಾಗಿದ್ದು, ಶೇ.27ರಷ್ಟು ಕೆಲಸ ಪೂರ್ಣಗೊಂಡಿದೆ ಎಂದು ಹೇಳಿದರು.

ಲಿಂಗಸೂಗೂರು, ಹಟ್ಟಿ ಮತ್ತು ಮುದುಗಲ್ ಪಟ್ಟಣಗಳಲ್ಲಿ ಪ್ರತಿ 10 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಹತ್ತಿರದಲ್ಲಿಯೇ ಕೃಷ್ಣಾ ನದಿಗೆ ಅಡ್ಡಲಾಗಿ ಅಣೆಕಟ್ಟು ಇದ್ದರೂ ಕುಡಿಯುವ ನೀರಿಗೆ ಪರದಾಡುವ ಸ್ಥಿತಿ ಎದುರಾಗಿದೆ. ಪ್ರತಿದಿನ ಜನರು ನೀರಿನ ಬವಣೆ ಹೇಳಿಕೊಂಡು ಮನೆಗೆ ಬರುತ್ತಾರೆ. ಸರಕಾರಕ್ಕೆ ಜನರಿಗೆ ಕುಡಿಯುವ ನೀರನ್ನು ಕೊಡುವ ಯೋಗ್ಯತೆಯೂ ಇಲ್ಲವೇ?. ಜನ ಪ್ರತಿನಿತ್ಯ ನನ್ನ ಮನೆಗೆ ಬಂದು ಛಿಮಾರಿ ಹಾಕುತ್ತಿದ್ದಾರೆಂದು ಸದಸ್ಯ ಮಾನಪ್ಪ ವಜ್ಜಲ್ ಸರಕಾರದ ಗಮನ ಸೆಳೆದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X