Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದಿಂದ 5...

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದಿಂದ 5 ಸಾವಿರ ಕೋಟಿ ರೂ. ನೀಡಲಿ : ಸಚಿವ ಡಾ.ಅಜಯ್ ಧರಂಸಿಂಗ್

ವಾರ್ತಾಭಾರತಿವಾರ್ತಾಭಾರತಿ17 Sept 2026 1:39 PM IST
share
ಕಲ್ಯಾಣ ಕರ್ನಾಟಕಕ್ಕೆ ಕೇಂದ್ರದಿಂದ 5 ಸಾವಿರ ಕೋಟಿ ರೂ. ನೀಡಲಿ : ಸಚಿವ ಡಾ.ಅಜಯ್ ಧರಂಸಿಂಗ್

ರಾಯಚೂರು : ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರಕಾರ 5 ಸಾವಿರ ಕೋಟಿ ರೂ. ಅನುದಾನ ನೀಡುತ್ತಿದ್ದು, ಕೇಂದ್ರ ಸರಕಾರವೂ ಇದೇ ಪ್ರಮಾಣದ ಅನುದಾನ ನೀಡಬೇಕು ಎಂದು ಸಚಿವ ಡಾ.ಅಜಯ್ ಧರಂಸಿಂಗ್ ಆಗ್ರಹಿಸಿದರು.

ಕರ್ನಾಟಕದ ಬಜೆಟ್ ಸುಮಾರು 4.48 ಲಕ್ಷ ಕೋಟಿ ರೂ. ಇದ್ದು, ಅದರಲ್ಲಿ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ. ಮೀಸಲಿಡಲಾಗುತ್ತಿದೆ. ಕೇಂದ್ರ ಸರಕಾರದ ಬಜೆಟ್ ಸುಮಾರು 52 ಲಕ್ಷ ಕೋಟಿ ರೂ. ಇದೆ. ಹೀಗಾಗಿ ಕೇಂದ್ರ ಸರಕಾರವೂ ಕಲ್ಯಾಣ ಕರ್ನಾಟಕಕ್ಕೆ 5 ಸಾವಿರ ಕೋಟಿ ರೂ. ನೀಡಿದರೆ ಒಟ್ಟು 10 ಸಾವಿರ ಕೋಟಿ ರೂ. ಅನುದಾನ ದೊರೆಯಲಿದ್ದು, ಈ ಭಾಗದ ಅಭಿವೃದ್ಧಿಗೆ ಇನ್ನಷ್ಟು ವೇಗ ಸಿಗಲಿದೆ ಎಂದರು.

“ಮೋದಿಯವರ ಕೊಡುಗೆ ಏನು?” ಎಂದು ಪ್ರಶ್ನಿಸಿದ ಅವರು, ಕಳೆದ 12–13 ವರ್ಷಗಳಿಂದ ನರೇಂದ್ರ ಮೋದಿ ಅವರು ಅಧಿಕಾರದಲ್ಲಿದ್ದಾರೆ. 2014ರಲ್ಲಿ ಕರ್ನಾಟಕದಿಂದ 17 ಸಂಸದರು ಆಯ್ಕೆಯಾಗಿದ್ದರು. 2019ರಲ್ಲಿ 26 ಎನ್‌ಡಿಎ ಸಂಸದರು ಆಯ್ಕೆಯಾಗಿದ್ದರು. ಈಗಲೂ 19 ಸಂಸದರು ಇದ್ದಾರೆ. ಆದರೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರದಿಂದ ಹೆಚ್ಚಿನ ಅನುದಾನ ತರುವ ಕುರಿತು ಯಾರೂ ಧ್ವನಿ ಎತ್ತುತ್ತಿಲ್ಲ ಎಂದು ಟೀಕಿಸಿದರು.

ಬಿಜೆಪಿ ನಾಯಕರ ಬಳಿ ಯಾವುದೇ ದಾಖಲೆಗಳಿಲ್ಲ :

ಕೆಪಿಎಸ್‌ಸಿ ನೇಮಕಾತಿ ಹಗರಣದ ವಿಚಾರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂಬ ಬಿಜೆಪಿ ನಾಯಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅಜಯ್ ಧರಂಸಿಂಗ್, ಬಿಜೆಪಿ ನಾಯಕರ ಬಳಿ ಯಾವುದೇ ದಾಖಲೆಗಳಿಲ್ಲ ಎಂದು ಹೇಳಿದರು.

ಬಿಜೆಪಿ ನಾಯಕರು ಕಳೆದ ಒಂದು ತಿಂಗಳು, 15 ದಿನಗಳಿಂದ ಈ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಇದುವರೆಗೆ ಯಾವುದೇ ದಾಖಲೆಗಳನ್ನು ಬಹಿರಂಗಪಡಿಸಿಲ್ಲ. ಪ್ರಿಯಾಂಕ್ ಖರ್ಗೆ ಅವರು ತಮ್ಮ ನಿಲುವಿನ ಬಗ್ಗೆ ಸ್ಪಷ್ಟನೆಯನ್ನೂ ನೀಡಿದ್ದಾರೆ. ಕೇವಲ ಪ್ರಚಾರಕ್ಕಾಗಿ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದರು.

ಹಿಂದೆ ಕುಮಾರಸ್ವಾಮಿ ಅವರೂ ತಮ್ಮ ಬಳಿ ಸಿಡಿ ಹಾಗೂ ಪೆನ್‌ಡ್ರೈವ್ ಇದೆ ಎಂದು ಹೇಳಿದ್ದರು. ಆದರೆ ಯಾವುದೇ ಸಿಡಿ ಅಥವಾ ಪೆನ್‌ಡ್ರೈವ್ ಹೊರಬರಲಿಲ್ಲ. ಈಗ ಆರೋಪ ಮಾಡುತ್ತಿರುವವರೇ “ಹಿಟ್ ವಿಕೆಟ್” ಆಗುತ್ತಿದ್ದಾರೆ ಎಂದು ಹೇಳಿದರು.

ಈ ವೇಳೆ ಮಾಜಿ ಸಚಿವ ಎನ್.ಎಸ್.ಬೋಸರಾಜು, ವಿಧಾನ ಪರಿಷತ್ ಎ ವಸಂತ ಕುಮಾರ, ಕಾಂಗ್ರೆಸ್ ಮುಖಂಡ ಮುಹಮ್ಮದ್ ಶಾಲಂ ಮತ್ತಿತರರು ಇದ್ದರು.

Tags

Minister Dr. Ajay Dharam Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X