Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಶಾಸಕ ಹಂಪನಗೌಡ ಬಾದರ್ಲಿಗೆ ರೈತರ ಬಗ್ಗೆ...

ಶಾಸಕ ಹಂಪನಗೌಡ ಬಾದರ್ಲಿಗೆ ರೈತರ ಬಗ್ಗೆ ಕಾಳಜಿ ಇದ್ದಿದ್ದಕ್ಕೆ 5 ಬಾರಿ ಗೆದ್ದಿದ್ದಾರೆ: ಸುಡಾ ಅಧ್ಯಕ್ಷ ಬಾಬುಗೌಡ

ವಾರ್ತಾಭಾರತಿವಾರ್ತಾಭಾರತಿ5 Nov 2025 4:55 PM IST
share
ಶಾಸಕ ಹಂಪನಗೌಡ ಬಾದರ್ಲಿಗೆ ರೈತರ ಬಗ್ಗೆ ಕಾಳಜಿ ಇದ್ದಿದ್ದಕ್ಕೆ 5 ಬಾರಿ ಗೆದ್ದಿದ್ದಾರೆ: ಸುಡಾ ಅಧ್ಯಕ್ಷ ಬಾಬುಗೌಡ

ಸಿಂಧನೂರು: ಶಾಸಕ ಹಂಪನಗೌಡ ಬಾದರ್ಲಿಯವರ ವ್ಯಕ್ತಿತ್ವ, ರೈತರ ಮೇಲಿನ ಕಾಳಜಿ ಹಾಗೂ ಅಭಿವೃದ್ಧಿ ವಿಚಾರದಲ್ಲಿ ಇರುವ ನಿಲುವು ಕಾರಣದಿಂದಲೇ ಕ್ಷೇತ್ರದ ಜನರು ಅವರನ್ನು ಐದು ಬಾರಿ ವಿಧಾನಸೌಧಕ್ಕೆ ಕಳುಹಿಸಿದ್ದಾರೆ ಎಂದು ಸುಡಾ ಅಧ್ಯಕ್ಷ ಬಾಬುಗೌಡ ಬಾದರ್ಲಿ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.

ಈ ಕುರಿತು ಪತ್ರಿಕೆ ಹೇಳಿಕೆ ನೀಡಿರುವ ಅವರು, ರೈತರ ವಿಚಾರದಲ್ಲಿ ಹಂಪನಗೌಡ ಬಾದರ್ಲಿಯವರು ತಾರತಮ್ಯ ಬಗೆದಿಲ್ಲ, ಬಗೆಯುವುದು ಇಲ್ಲ. ನಾಡಗೌಡರು ಸಚಿವರಾಗಿ ಹಾಗೂ ಐಸಿಸಿ ಸಲಹಾ ಸಮಿತಿ ಅಧ್ಯಕ್ಷರಾಗಿ ರೈತರಿಗೆ ಕೊಟ್ಟ ಕೊಡುಗೆ ಏನೆಂದರೆ ಬೆಳಗುರ್ಕಿ ಗ್ರಾಮದಲ್ಲಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಬಳಸಬೇಕಾದ ಅನುದಾನ ದುರುಪಯೋಗ ಪಡಿಸಿಕೊಂಡು ತಮ್ಮ ಕಾರ್ಯಕರ್ತ ವೆಂಕಟೇಶ ನಂಜಲದಿನ್ನಿ ಅವರ ಹೊಲಕ್ಕೆ ಪೈಪ್ ಲೈನ್ ಮಾಡುವ ಮೂಲಕ ಎಸ್ಸಿ-ಎಸ್ಟಿ ಸಮುದಾಯಕ್ಕೆ ಮಾಡಿದ ಬಹುದೊಡ್ಡ ಮೋಸ ಅಲ್ಲದೆ ಇನ್ನೇನೂ. ಇದು ನಾಡಗೌಡರ ರೈತಪರ ಕಾಳಜಿಯೇ? ಎಂಬುವುದು ಆ ಭಾಗದ ರೈತರು ಯೋಚಿಸಬೇಕು.

ತಾಲೂಕಿನ ಅಭಿವೃದ್ಧಿ ಬಗ್ಗೆ ಪ್ರಶ್ನಿಸುವ ಮುಖಂಡರೇ 2013 ರಿಂದ 18ರ ಸಾಲಿನ ರೈತಪರ ಯೊಜನೆಗಳಾದ ಹುಡಾ ಏತ ನೀರಾವರಿ ಯೊಜನೆ, ಸಿರನಗುಂಡಿ ಪಿಕಪ್ 2,848 ಎಕರೆ, ಗೊರೇಬಾಳ ಪಿಕಪ್ 4,438 ಎಕರೆ, ಉದ್ಬಾಳ ಗೊಮರ್ಸಿ ಸಣ್ಣ ನೀರಾವರಿ ಯೊಜನೆ 630 ಎಕರೆ, ಒಳಬಳ್ಳಾರಿ ಚನ್ನಬಸವೇಶ್ವರ ಏತ ನೀರಾವರಿ ಯೊಜನೆ 6,015, ತಿಮ್ಮಾಪುರ ಏತ ನೀರಾವರಿ ಯೊಜನೆ 36,000 ಎಕರೆ ಜಮೀನುಗಳಿಗೆ ನೀರು ಕೊಡಿಸಿದ್ದಾರೆ.

ಈ ಅವಧಿಯಲ್ಲಿ ಸಾಲಗುಂದ ಏತ ನೀರಾವರಿ ಯೊಜನೆ 19,335 ಎಕರೆ, ಸಿದ್ದಲಿಂಗೇಶ್ವರ ಏತ ನೀರಾವರಿ ಯೊಜನೆ 16,344 ಎಕರೆ, ಚನ್ನಳ್ಳಿ, ಸಿದ್ರಾಂಪುರ, ಏತ ನೀರಾವರಿ ಯೊಜನೆ 9,147 ಎಕರೆ, ತಿಮ್ಮಾಪುರ ಹಾಗೂ ಒಳಬಳ್ಳಾರಿ ಏತ ನೀರಾವರಿ ಯೋಜನೆ ನಡುವಿನ ತಡೆಗೋಡೆ ನಿರ್ಮಾಣಕ್ಕೆ 43 ಕೋಟಿ ರೂ. ವೆಚ್ಚದ ಅನುದಾನ ತಂದಿದ್ದಾರೆ. ಈ ಎಲ್ಲಾ ರೈತಪರ ಯೊಜನೆಗಳು ಬಡವರ ಪರವಾಗಿಯೋ ? ಅಥವಾ ಶ್ರೀಮಂತರ ಪರವಾಗಿಯೋ ? ಎಂಬುವುದು ರೈತರೇ ಯೋಚನೆ ಮಾಡಬೇಕೆಂದಿದ್ದಾರೆ.

ತಿಮ್ಮಾಪುರ ಏತ ನೀರಾವರಿ ಯೋಜನೆ ಅಡಿಯಲ್ಲಿ ಬಂದಂತಹ ಪೈಪ್ ಲೈನನ್ನು ತಮ್ಮ ಹೊಲದಲ್ಲಿ ದುರುಪಯೋಗ ಪಡಿಸಿಕೊಂಡು ಏರ್ ವಾಲ್ ಮುಖಾಂತರ ಅನಧಿಕೃತವಾಗಿ ತಮ್ಮ ಹೊಲಗಳಿಗೆ ನೀರು ಬಳಸಿಕೊಳ್ಳುವುದು ಸರಿನಾ? ಅಥವಾ ರೈತ ಪರವಾಗಿನಾ? ಎಂದು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X