Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಅಕ್ರಮ ಗಣಿಗಾರಿಕೆ | ಬಾಕಿ ಪ್ರಕರಣಗಳ...

ಅಕ್ರಮ ಗಣಿಗಾರಿಕೆ | ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ23 Jun 2025 4:11 PM IST
share
ಅಕ್ರಮ ಗಣಿಗಾರಿಕೆ | ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ರಾಯಚೂರು: ರಾಜ್ಯದಲ್ಲಿ ಬಾಕಿ ಉಳಿದಿರುವ ಗಣಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ವಿಶೇಷ ನ್ಯಾಯಾಲಯ ಸ್ಥಾಪಿಸಲು ಎಚ್.ಕೆ.ಪಾಟೀಲ ನೇತೃತ್ವದ ಸಮಿತಿಯು ಸರಕಾರಕ್ಕೆ ಮನವಿ ಸಲ್ಲಿಸಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಯಚೂರು ತಾಲೂಕಿನ ಯರಗೇರಾ ಸಮೀಪದ ಆದಿಕವಿ ಮಹರ್ಷಿ ವಾಲ್ಮೀಕಿ ವುವಿ ಆವರಣದಲ್ಲಿನ ಹೆಲಿಪ್ಯಾಡ್ ನಲ್ಲಿಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡುತ್ತಿದ್ದರು.

ಹಿಂದೆ ಅಕ್ರಮ ಗಣಿಗಾರಿಕೆ ವಿರುದ್ಧ ಸದನದಲ್ಲಿ ಧ್ವನಿ ಎತ್ತಿದಾಗ ಬಿಜೆಪಿಯ ಶಾಸಕರು ಬಳ್ಳಾರಿಗೆ ಬಂದು ನೋಡಿ ಎಂದು ಸವಾಲು ಹಾಕಿದ್ದರು. ಆ ವೇಳೆ ಕಾಂಗ್ರೆಸ್ ಪಕ್ಷ ಪಾದಯಾತ್ರೆಯ ಮೂಲಕ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿತ್ತು ಎಂದು ತಿಳಿಸಿದರು.

ಅಕ್ರಮ ಗಣಿಗಾರಿಕೆ ಗೆ ಸಂಬಂಧಿಸಿದಂತೆ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಮನವಿ ಸಲ್ಲಿಸಿದ್ದರು. ದಾಖಲೆಗಳನ್ನು ಸಲ್ಲಿಸಿದ್ದರು, ಈ ಎಲ್ಲಾ ಪ್ರಕರಣಗಳು ಗಂಭೀರವಾಗಿ ಪರಿಗಣಿಸಲಾಗಿದೆ. ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಆಗಿರುವ ನಷ್ಟ ತಪ್ಪಿಸಲು ಸರ್ಕಾರ ವಿಶೇಷ ನ್ಯಾಯಾಲಯದ ಮೂಲಕ ಪ್ರಕರಣಗಳ ಇತ್ಯಾರ್ಥಕ್ಕೆ ಪ್ರಯತ್ನಿಸಲಿದೆ ಎಂದು ತಿಳಿಸಿದರು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಧಾನಿ ಮೋದಿ ಅವರಿಗೆ ಹತ್ತಿರದಲ್ಲಿ ಇದ್ದಾರೆ. ರಾಯಚೂರಿಗೆ ಏಮ್ಸ್ ಮಂಜೂರು ಮಾಡಲು ಪ್ರಯತ್ನಿಸಬಹುದಾಗಿದೆ. ಅದನ್ನು ಬಿಟ್ಟು ಸಮಿತಿ ವರದಿ ಸಲ್ಲಿಸಬೇಕು ಎಂದು ಕಾಲಹರಣ ಮಾಡುತ್ತಿದ್ದಾರೆ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡುವಂತೆ ಬಿಜೆಪಿಯ ಒಬ್ಬ ಶಾಸಕರೂ ಮಾತನಾಡಿಲ್ಲ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ 5 ಸಾವಿರ ಕೋಟಿ ರೂ. ಕೊಡುತ್ತದೆ. ಸಂವಿಧಾನ ಬದ್ಧವಾಗಿ ಕೇಂದ್ರ ಸರ್ಕಾರವೂ ಶೇ.50ರಷ್ಟು ಪಾಲು ಕೊಡಬೇಕು ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಶಾಸಕರಾದ ರಾಜು ಕಾಗೆ ಸೇರಿದಂತೆ ಕೆಲವರು ಮಾಧ್ಯಮಗಳ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಈಗಷ್ಟೇ ಗೊತ್ತಾಗಿದೆ ಎಲ್ಲಾ ಶಾಸಕರನ್ನೂ ಕರೆದು ಅವರೊಂದಿಗೆ ಚರ್ಚಿಸಿ ಅವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X