Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ...

ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಮ ನಿರ್ದೇಶನ : ಮುಂದುವರೆದ ಕಾಂಗ್ರೆಸ್ ಬಣಗಳ ನಡುವಿನ ಕಿತ್ತಾಟ

ಪಕ್ಷಕ್ಕಾಗಿ ದುಡಿದಿದ್ದೇವೆ ಪ್ರತಿಫಲವಾಗಿ ಅಧಿಕಾರ ಸಿಕ್ಕಿದೆ, ನಾವು ಶಾಸಕರ ಜೀತದಾಳುಗಳಲ್ಲ: ವೆಂಕಟೇಶ ರಾಗಲಪರ್ವಿ

ವಾರ್ತಾಭಾರತಿವಾರ್ತಾಭಾರತಿ10 Jun 2025 11:12 AM IST
share
ಸಿಂಧನೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಾಮ ನಿರ್ದೇಶನ : ಮುಂದುವರೆದ ಕಾಂಗ್ರೆಸ್ ಬಣಗಳ ನಡುವಿನ ಕಿತ್ತಾಟ

ರಾಯಚೂರು(ಸಿಂಧನೂರು): ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ದುಡಿದಿದ್ದೇವೆ ಇದಕ್ಕೆ ಪ್ರತಿಫಲವಾಗಿ ಅಧಿಕಾರ ಸಿಕ್ಕಿದೆ. ಬೊಟ್ಟು ಮಾಡುವ ಅವಶ್ಯಕತೆಯಿಲ್ಲ, ನಾವು ಶಾಸಕರ ಜೀತದಾಳುಗಳಲ್ಲ ಎಂದು ಕಾಂಗ್ರೆಸ್ ಪಕ್ಷದ ಎಸ್.ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ನಾಯಕ ರಾಗಲಪರ್ವಿ ತಿಳಿಸಿದರು.

ಸಿಂಧನೂರು ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಶಾಸಕ ಹಂಪನಗೌಡರ ಜೊತೆ ಗುರುತಿಸಿಕೊಂಡು ಪಕ್ಷಕ್ಕಾಗಿ ದುಡಿದಿದ್ದೇನೆ, ಹಾಗೆ ಅವರ ಗೆಲುವಿಗಾಗಿ ಸಹ ಶ್ರಮಿಸಿದ್ದೇನೆ, ರಾಗಲಪರ್ವಿ ಹೋಬಳಿಯಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಕಾರಣ ಪಕ್ಷದ ವತಿಯಿಂದ ನನ್ನ ಪತ್ನಿಗೆ ಮೀಸಲಾತಿ ಆಧಾರದ ಮೇಲೆ ಟಿಕೆಟ್ ಸಿಕ್ಕಿ‌ ಗೆಲುವು ಸಾಧಿಸಿದ್ದೇವೆ. ಮೀಸಲಾತಿ ಮೇಲೆ ನನ್ನ ಪತ್ನಿ ತಾಲೂಕು ಪಂಚಾಯತ್‌ ಅಧ್ಯಕ್ಷರಾದರು. ಧಡೇಸೂಗೂರು ಯುನುಸ್ ಪಾಷಾ ಅವರ ತಾಯಿಯು ಸಹ ಅಧ್ಯಕ್ಷರಾಗಿ ಕೆಲಸ ಮಾಡಿದರು. ನಾವು ಪಕ್ಷಕ್ಕಾಗಿ ದುಡಿದಿದ್ದೇವೆ ಅಧಿಕಾರ ಅನುಭವಿಸಿದ್ದೇವೆ ಎಂದು ಶಾಸಕ ಹಂಪನಗೌಡ ಬೆಂಬಲಿಗರಿಗೆ ತಿರುಗೇಟು ನೀಡಿದರು.

ಪಕ್ಷಕ್ಕಾಗಿ ದುಡಿದ ಕಾರಣಕ್ಕೆ ಪಕ್ಷ ನಮ್ಮನ್ನು ಗುರುತಿಸಿದೆ ಹೊರತು ನಾವು ಅವರಂತೆ ಪಕ್ಷ ವಿರೋಧಿ ಚಟುವಟಿಕೆ ಕೆಲಸ ಮಾಡಿಲ್ಲ. ಹಿಂದೆ ನಡೆದ ಎಲ್ಲಾ ಲೋಕಸಭಾ ಚುನಾವಣೆಗಳಲ್ಲಿ ಶಾಸಕರು ಮತ್ತು ಅವರ ಬೆಂಬಲಿಗರು ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡಿದ್ದು ಗೊತ್ತಿದೆ ಎಂದು ಅವರು ಆರೋಪಿಸಿದರು.

ಈ ಹಿಂದೆ ಹಂಪನಗೌಡರ ಜೊತೆಗೆ ಇದ್ದೆ, ಈಗ ಬಸನಗೌಡ ಬಾದರ್ಲಿಯವರ ಜೊತೆಗೆ ಇದ್ದೇನೆ, ಇದರಲ್ಲಿ ತಪ್ಪೇನಿದೆ. ಅವರು ಕೂಡ ಕಾಂಗ್ರೆಸ್ ಪಕ್ಷದವರಲ್ಲವೇ? ನಾನು ಎಲ್ಲಿದ್ದರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುವೆ ಹೊರತು ಎಂದು ಕೂಡ ಪಕ್ಷ ವಿರೋಧಿ ಕೆಲಸವನ್ನು ಮಾಡಿಲ್ಲ. ನಾವೇನು ಸಾಯುವ ತನಕ ಹಂಪನಗೌಡರ ಜೊತೆ ಜೀತ ಮಾಡಿಕೊಂಡೆ ಇರಬೇಕಾ? ಅವರು ಹೇಳಿದಂತೆ ಕೇಳಬೇಕಾ? ಅವರ ಹತ್ತಿರ ನಮಗೆ ಸರಿ ಕಾಣಿಸಲಿಲ್ಲ. ಬಸನಗೌಡ ಬಾದರ್ಲಿಯವರ ಬೆಂಬಲಿಗನಾದೆ, ಇಲ್ಲಿ ನನಗೆ ಸರಿ ಕಾಣದಿದ್ದರೆ ಬೇರೆ ಕಡೆ ಹೋಗುತ್ತೇನೆ ಇದು ನನ್ನ ವೈಯಕ್ತಿಕ ಸ್ವಾತಂತ್ರ್ಯ ಎಂದರು.

ಸರ್ಕಾರದ ವಿವಿಧ ನೇಮಕಾತಿ ವಿಚಾರದಲ್ಲಿ ಶಾಸಕ ಹಂಪನಗೌಡರು ತಲೆ ಕೆಡಿಸಿಕೊಳ್ಳದೆ ಸುಮ್ಮನೆ ಇದ್ದರು. ಬಸನಗೌಡರು ತಮ್ಮ ಬೆಂಬಲಿಗರ ನಾಮ ನಿರ್ದೇಶನ ಮಾಡುವಂತೆ ಸರ್ಕಾರಕ್ಕೆ ಪತ್ರ ನೀಡಿದ ಮೇಲೆಯೇ ಹಂಪನಗೌಡರು ಹೋರಾಡಿ ತಮ್ಮ ಬೆಂಬಲಿಗರಿಗೆ ನಾಮ ನಿರ್ದೇಶನ ಮಾಡಿಸಿದರು. ಬಸನಗೌಡ ಬಾದರ್ಲಿ ಪತ್ರ ಕೊಡದೆ ಇದ್ದರೆ, ಇಲ್ಲಿಯ ತನಕ ಯಾವುದೇ ನಾಮ ನಿರ್ದೇಶನವು ಕೂಡ ಆಗುತ್ತಿರಲಿಲ್ಲ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ಶಿವಕುಮಾರ ಜವಳಿ, ಶರಣಯ್ಯಸ್ವಾಮಿ ಕೋಟೆ, ಯೂನೀಷ್ ಪಾಷಾ ಧಡೇಸೂಗೂರು, ದಾದಪೀರ್, ಖಾಜಾ ಹುಸೇನ್ ರೌಡಕುಂದ, ಅಮರೇಶ ಗಿರಿಜಾಲಿ, ಯಂಕನಗೌಡ ಗೀಣೀವಾರ, ವೀರರಾಜ, ಹಬೀಬ್, ಹೊನ್ನನಗೌಡ ಬೆಳಗುರ್ಕಿ, ವೀರೇಶ ಉಪ್ಪಲದೊಡ್ಡಿ, ಹನುಮೇಶ್ ಕರ್ನಿ, ಸೇರಿದಂತೆ ಅನೇಕರಿದ್ದರು.

ಸುಡಾ ನಾಮ ನಿರ್ದೇಶನದಲ್ಲಿ ಶಾಸಕರು ತಮ್ಮ ಸಹೋದರನ ಮಗ ಬಾಬುಗೌಡರನ್ನು ಬಿಟ್ಟು ಬೇರೆ ಯಾರಿಗಾದರೂ ನಾಮ ನಿರ್ದೇಶನ ಮಾಡಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರನ್ನು ಬಿಟ್ಟು, ತಮ್ಮ ಮನೆಯ ಸದಸ್ಯ ಬಾಬುಗೌಡರನ್ನೇ ನಾಮ ನಿರ್ದೇಶನ ಮಾಡಿದ್ದಕ್ಕೆ ನಮ್ಮ ವಿರೋಧವಿದೆ ಅಷ್ಟೆ, ಜೊತೆಗಿರುವ ನರೇಂದ್ರನಾಥ ಯಾವಾಗ ಪಕ್ಷದ ಧ್ವಜ ಹಿಡಿದು ಪಕ್ಷ ಕಟ್ಟಿದ್ದಾರೆ ಹೇಳಲಿ ಎಂದು ತಿಳಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X