Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಕಸಾಪ ಜಿಲ್ಲಾಧ್ಯಕ್ಷರ ವಿರುದ್ಧ...

ರಾಯಚೂರು: ಕಸಾಪ ಜಿಲ್ಲಾಧ್ಯಕ್ಷರ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Nov 2025 11:38 PM IST
share
ರಾಯಚೂರು: ಕಸಾಪ ಜಿಲ್ಲಾಧ್ಯಕ್ಷರ ವಿರುದ್ಧ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ

ರಾಯಚೂರು: ಕನ್ನಡ ಸಾಹಿತ್ಯ ಪರಿಷತ್ ರಾಯಚೂರು ಜಿಲ್ಲೆಯ ಅಧ್ಯಕ್ಷರಾದ ರಂಗಣ್ಣ ಪಾಟೀಲ ಅವರು ಕಳೆದ ಮೂರು ವರ್ಷಗಳಿಂದ ಯಾವುದೇ ಕನ್ನಡ ಕಾರ್ಯ ಕೈಗೊಂಡಿಲ್ಲ ಹಾಗೂ ಕಸಾಪ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಕನ್ನಡ ಭವನದ ಮುಂದೆ ರಂಗಣ್ಣ ಪಾಟೀಲ್ ವಿರುದ್ಧ ಬುದುವಾರದಂದು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳಿಗೆ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದರು.

ಪ್ರತಿಭಟನೆಯ ಸಂದರ್ಭದಲ್ಲಿ ಒಕ್ಕೂಟದ ಸಂಚಾಲಕರಾದ ಅಣ್ಣಪ್ಪ ಮೇಟಿಗೌಡ ಮಾತನಾಡಿ ಕಸಾಪ ಜಿಲ್ಲಾ ಅಧ್ಯಕ್ಷರು ಕಳೆದ ಮೂರು ವರ್ಷಗಳಿಂದ ಕಸಾಪ ಚಟುವಟಿಕೆಗಳಲ್ಲಿ ಸಂಪೂರ್ಣ ನಿಷ್ಕ್ರಿಯರಾಗಿದ್ದಾರೆ. ಒಂದು ಜಿಲ್ಲಾ ಸಮ್ಮೇಳನ ನಡೆದಿದ್ದು ಮೂರು ವರ್ಷಗಳಾದರೂ ಅದರ ಲೆಕ್ಕವನ್ನು ಇನ್ನೂ ತೋರಿಸಿಲ್ಲ. ಕನ್ನಡ ಭವನದ ಬಾಡಿಗೆ ಹಣದ ಲೆಕ್ಕವೂ ನೀಡಿಲ್ಲ. ವಾರ್ಷಿಕವಾಗಿ ಸರ್ಕಾರದಿಂದ ಬರುವ ಅನುದಾನದ ಹಣದ ಖರ್ಚು ವಿವರಗಳು ಸಾರ್ವಜನಿಕವಾಗಿ ಬಹಿರಂಗಪಡಿಸಲ್ಪಟ್ಟಿಲ್ಲ, ಜಿಲ್ಲೆಯಲ್ಲಿ ತಾಲೂಕು ಅಧ್ಯಕ್ಷರ ನೇಮಕದಲ್ಲಿ ಕಸಾಪ ಬೈಲಾ ಉಲ್ಲಂಘನೆ ಮಾಡಿ ಗೊಂದಲ ಸೃಷ್ಟಿ ಮಾಡಿದ್ದಾರೆ, ಕಸಾಪ ಹಣ ಪೋಲು ಮಾಡಿರುವ ಬಗ್ಗೆ ತನಿಖೆಯಾಗಬೇಕು ಹಾಗೂ ಕನ್ನಡ ಕಾರ್ಯಮಾಡದೇ ಇರುವುದರಿಂದ ಆಡಳಿತ ಅಧಿಕಾರಿಯನ್ನು ನೇಮಕ ಮಾಡಬೇಕು, ಜಿಲ್ಲಾಧ್ಯಕ್ಷರು ಹಾಕುವ ಯಾವುದೇ ಬೆದರಿಕೆಗೆ ಅಂಜುವವರಲ್ಲ ಕನ್ನಡದ ಅಸ್ಮಿತೆಯನ್ನು ಉಳಿಸುವ ನೆಲದಲ್ಲಿ ಹುಟ್ಟಿದವರು. ನಾವು ಕನ್ನಡ ಹೋರಾಟಕ್ಕೆ ಸದಾ ಸಿದ್ಧ ಎಂದು ಮೇಟಿಗೌಡ ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಾರುತಿ ಬಡಿಗೇರ್, ಇದುವರೆಗೂ ಜಿಲ್ಲೆಯಲ್ಲಿ ಯಾವುದೇ ಕಸಾಪ ಸರ್ವ ಸದಸ್ಯರ ಸಭೆ ನಡೆದಿಲ್ಲ. ಕಸಾಪ ಬೈಲಾ ಉಲ್ಲಂಘನೆ ಮಾಡಿ ತಾಲೂಕು ಅಧ್ಯಕ್ಷರ ನೇಮಕಾತಿಯಲ್ಲಿ ಗೊಂದಲ ಸೃಷ್ಟಿ ಮಾಡಿದ್ದಾರೆ. ದೇವದುರ್ಗ ತಾಲೂಕು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ಕಸಾಪ ಸಂಘಟನೆ ಅಸ್ತವ್ಯಸ್ತಗೊಂಡಿದ್ದು, ಕನ್ನಡ ಕಾರ್ಯಗಳು ಸಂಪೂರ್ಣ ಸ್ಥಗಿತಗೊಂಡಿವೆ” ಎಂದು ಆರೋಪಿಸಿದ್ದಾರೆ.

ಒಕ್ಕೂಟದ ಸದಸ್ಯರಾದ ಎಂ.ಆರ್. ಬೇರಿ ಮಾತನಾಡಿ, "ಈ ನಮ್ಮ ಹೋರಾಟ ಕಸಾಪ ಹಾಗೂ ಕನ್ನಡದ ವಿರುದ್ದ ಅಲ್ಲ ಭ್ರಷ್ಟಾಚಾರ ಮಾಡಿದವರ ವಿರುದ್ಧ ಎಂದರು.

“ಜಿಲ್ಲಾ ಕಸಾಪ ಕಲಾವಿದರು, ಸಾಹಿತಿಗಳು, ಸಂಘಟಕರು ಹಾಗೂ ಕನ್ನಡಪರ ಹೋರಾಟಗಾರರನ್ನು ಮರೆತಿದೆ. ಹೇಳಿಕೊಳ್ಳುವಂತೆ ಒಂದು ಜಿಲ್ಲಾ ಸಮ್ಮೇಳನ ಹೊರತುಪಡಿಸಿ ಯಾವುದೇ ಚಟುವಟಿಕೆ ನಡೆದಿಲ್ಲ. ಶೀಘ್ರ ಕ್ರಮ ಕೈಗೊಂಡು ಕನ್ನಡ ಚಟುವಟಿಕೆಗಳನ್ನು ಪುನಃ ಚೇತರಿಸಬೇಕೆಂದು ನಮ್ಮ ಆಶಯವಾಗಿದೆ” ಎಂದು ಜಾನ್ ವೇಸ್ಲಿ ಹೇಳಿದರು.

ಕಾಸಪ್ಪ ಜಿಲ್ಲಾ ಘಟಕಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ನೀಡಿಲ್ಲ ಹಾಗೂ ಮಹಿಳೆಯರಿಗೆ ಯಾವುದೇ ಗೌರವ ಸನ್ಮಾನವನ್ನು ಕೂಡ ಮಾಡದೆ ಮಹಿಳೆಯರನ್ನು ಕಡೆಗಾಣಿಸುವಂತಹ ಕೆಲಸ ಮಾಡಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಜಿಲ್ಲಾಧ್ಯಕ್ಷ ರಂಗಣ್ಣ ಪಾಟೀಲ್ ಕೂಡಲೇ ರಾಜೀನಾಮೆ ಕೊಡಬೇಕು, ಅವರ ವಿರುದ್ಧ ತನಿಖೆ ಆಗಲೇಬೇಕು ಎಂದು ವಿಜಯರಾಣಿ ಒತ್ತಾಯಿಸಿದರು.

ಈ ಸಂದರ್ಭ ಅಂಬಾಜಿ ರಾವು, ವಿಜಯರಾಣಿ, ಆನಂದ್ ಸ್ವಾಮಿ, ರಾಜಶೇಖರ್ ಮಾಚರ್ಲಾ, ಮಸೂದ್ ಅಲಿ, ವಂಶಿಕೃಷ್ಣ, ಮೌನೇಶ್ ವಡವಟ್ಟಿ,ಮಹೇಶ್, ಸಂಗಮೇಶ್, ಬಸವರಾಜ್, ವೆಂಕಟೇಶ್,ಕೃಷ್ಣ, ಆಂಜನೇಯ, ಕುರುಬದೊಡ್ಡಿ, ರಾಮಕೃಷ್ಣ ಪ್ರಸಾದ್, ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X