Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ರಸ್ತೆ ಇಲ್ಲದೇ ಐದನಾಳರ್...

ರಾಯಚೂರು | ರಸ್ತೆ ಇಲ್ಲದೇ ಐದನಾಳರ್ ದೊಡ್ಡಿ ಜನರ ಪರದಾಟ

ವಾರ್ತಾಭಾರತಿವಾರ್ತಾಭಾರತಿ17 Sept 2025 8:56 PM IST
share
ರಾಯಚೂರು | ರಸ್ತೆ ಇಲ್ಲದೇ ಐದನಾಳರ್ ದೊಡ್ಡಿ ಜನರ ಪರದಾಟ

ರಾಯಚೂರು: ಜಿಲ್ಲೆಯ ಲಿಂಗಸುಗೂರ ತಾಲೂಕಿನ ಗುಂತಗೋಳ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಐದನಾಳರ್ ದೊಡ್ಡಿಯಲ್ಲಿ ವಾಸಿಸುವ ಜನರು ಹಲವು ವರ್ಷಗಳಿಂದ ಸುರಕ್ಷಿತ ರಸ್ತೆಯಿಲ್ಲದೇ ಪರದಾಡುತ್ತಿದ್ದಾರೆ. ಮೂಲಭೂತ ಸೌಕರ್ಯವಿಲ್ಲದೆ ಕಾಲುದಾರಿ ಮೂಲಕ ಹಳ್ಳ ದಾಟಿ ಹೋಗುವುದು ಇವರ ದಿನಚರಿಯಾಗಿಯೇ ಮಾರ್ಪಟ್ಟಿದೆ.

ಗುಂತಗೋಳ ಗ್ರಾಮದಿಂದ 6 ಕಿ.ಮೀ. ದೂರದಲ್ಲಿರುವ ಈ ದೊಡ್ಡಿಯಲ್ಲಿ ಹಾಲುಮತ ಸಮಾಜದ 80ಕ್ಕೂ ಹೆಚ್ಚು ಜನರು ವಾಸಮಾಡುತ್ತಿದ್ದಾರೆ. ಪಡಿತರ ಚೀಟಿಯುಳ್ಳವರು ನ್ಯಾಯಬೆಲೆ ಅಂಗಡಿಯಿಂದ ಆಹಾರ ಸಾಮಗ್ರಿಗಳನ್ನು ತರಲು ಆರು ಕಿಲೋಮೀಟರ್ ನಡೆದುಕೊಂಡೇ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ. ರಾತ್ರಿ ವೇಳೆ ಹಾವು-ಚೋಳ ಭೀತಿಯಿಂದ ದಾರಿಯಲ್ಲಿ ಓಡಾಡುವುದು ಇನ್ನಷ್ಟು ಕಷ್ಟಕರವಾಗಿದೆ.

ಮಳೆ ಬಂದರೆ ಹಳ್ಳ ತುಂಬಿ ಹರಿಯುವುದರಿಂದ ಗ್ರಾಮಕ್ಕೆ ಹೋಗುವ ದಾರಿಯೇ ಮುಚ್ಚಿಹೋಗುತ್ತದೆ. ಹಳ್ಳಕ್ಕೆ ಗುಮ್ಮಿ ಹಾಕಿ ರಸ್ತೆ ಕಲ್ಪಿಸಬೇಕು ಎಂದು ಗ್ರಾಮಸ್ಥರು ಗ್ರಾಮ ಪಂಚಾಯತ್‌ ಅಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದರೂ, ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದೊಡ್ಡಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದಾರೆ. ಆದರೆ ಮಳೆ ಬಂದಾಗ ಹಳ್ಳ ದಾಟಲಾಗದೆ ಹಲವಾರು ದಿನಗಳವರೆಗೆ ಶಾಲೆಗೆ ಹಾಜರಾಗದೇ ಮನೆಯಲ್ಲಿ ಉಳಿಯಬೇಕಾದ ಪರಿಸ್ಥಿತಿ ಉಂಟಾಗಿದೆ. ಇದರಿಂದ ಅವರ ಶಿಕ್ಷಣವೇ ಹಾಳಾಗುತ್ತಿದೆ.

ನಾವು ಇಲ್ಲಿಯ ತನಕ ಬಂದವರಿಗೆ ಮತ ಹಾಕುತ್ತಾ ಬಂದಿದೀವಿ. ದಾರಿ ಕೊಡಿ ಎಂದು ಕೇಳಿದರೂ ಯಾರೂ ಮಾಡಿ ಕೊಡಲಿಲ್ಲ. ಮುಂದೆ ಯಾವುದೇ ಚುನಾವಣೆ ಬರಲಿ, ನಾವು ಮತದಾನ ಮಾಡುವುದಿಲ್ಲ. ಬದಲಾಗಿ ಹೋರಾಟಕ್ಕೆ ಮುಂದಾಗುತ್ತೇವೆ.

-ಬೀರಪ್ಪ ಕುರುಬರ್, ಐದನಾಳರ್ ದೊಡ್ಡಿ (ಗುಂತಗೋಳ)

ಮಳೆ ಬಂದು ಹಳ್ಳ ತುಂಬಿದರೆ ನಮ್ಮ ಮಕ್ಕಳಿಗೆ ಶಾಲೆಗೆ ಹೋಗಲಾಗುವುದಿಲ್ಲ. ಪರೀಕ್ಷೆ ಇದ್ದರೂ ಮನೆಯಲ್ಲಿ ಕೂರಬೇಕಾಗುತ್ತದೆ. ನಾವು ಜೀವನ ಪೂರ್ತಿ ಗೋಳಾಟದಲ್ಲೇ ಕಳೆದಿದ್ದೇವೆ. ಮಕ್ಕಳನ್ನು ಓದಿಸಲು ಬಯಸುತ್ತೇವೆ. ನಮಗೆ ಕನಿಷ್ಠ ದಾರಿ ಸೌಲಭ್ಯ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.

-ಬಸಮ್ಮ, ಐದನಾಳರ್ ದೊಡ್ಡಿ (ಗುಂತಗೋಳ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X