Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬುಡ್ಗಾ ಅಲೆಮಾರಿ ಸಮುದಾಯಗಳ...

ರಾಯಚೂರು | ಬುಡ್ಗಾ ಅಲೆಮಾರಿ ಸಮುದಾಯಗಳ ಕಾಲೋನಿಗಳಲ್ಲಿ ಮೂಲಸೌಕರ್ಯ ಒದಗಿಸಲು ಮನವಿ

ವಾರ್ತಾಭಾರತಿವಾರ್ತಾಭಾರತಿ6 Nov 2025 5:48 PM IST
share
ರಾಯಚೂರು | ಬುಡ್ಗಾ ಅಲೆಮಾರಿ ಸಮುದಾಯಗಳ ಕಾಲೋನಿಗಳಲ್ಲಿ ಮೂಲಸೌಕರ್ಯ ಒದಗಿಸಲು ಮನವಿ

ರಾಯಚೂರು: ತಾಲೂಕಿನ ಮಮದಾಪುರ ಗ್ರಾಮಕ್ಕೆ ಹೊಂದಿಕೊಂಡಿರುವ ಹೊಸೂರು ಗ್ರಾಮದ ಸೀಮಾಂತರ ವ್ಯಾಪ್ತಿಗೆ ಒಳಪಟ್ಟ ಸಿ.ಎನ್ ಕಾಲೋನಿಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡ್ಗ ಜಂಗಮ ಅಲೆಮಾರಿ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಒ) ರಾಯಚೂರು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ರಾಯಚೂರು ತಾಲೂಕಿನ ತಹಶೀಲ್ದಾರ್ ಸುರೇಶ್ ವರ್ಮಾ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಿಎನ್ ಕಾಲೋನಿಯ ಜನರು ಕಳೆದ ಐದಾರು ವರ್ಷಗಳಿಂದ ಈ ಪ್ರದೇಶದಲ್ಲಿ ನೆಲೆಸಿದ್ದಾರೆ. ಇಂದಿಗೂ ಸರ್ಕಾರದಿಂದ ದೊರೆಯಬೇಕಾದ ಮೂಲಭೂತ ನಾಗರಿಕ ಸೌಲಭ್ಯಗಳು ದೊರೆತಿಲ್ಲ. ಹೇಗೋ ಕಷ್ಟಪಟ್ಟು ದುಡಿದು ಸಾಲಗಳನ್ನು ಮಾಡಿಕೊಂಡು ಒಂದು ಕಡೆ ನೆಲೆನಿಲ್ಲಬೇಕು ಎಂದು ಒಂದಿಷ್ಟು ಬದುಕಲು ಜಾಗವನ್ನು ಮಾಡಿಕೊಂಡಿದ್ದಾರೆ. ಆ ಜಾಗದಲ್ಲಿ ಗುಡಿಸಲು ಅಥವಾ ಶೆಡ್ ಗಳನ್ನು ಹಾಕಿಕೊಂಡು ಬದುಕುತ್ತಿದ್ದಾರೆ. ಆದರೆ ಶುದ್ಧ ಕುಡಿಯುವ ನೀರು, ವಿದ್ಯುತ್, ರಸ್ತೆ, ಆರೋಗ್ಯ ಸೌಲಭ್ಯಗಳು, ಶಿಕ್ಷಣದ ಸೌಲಭ್ಯಗಳು ಸೇರಿದಂತೆ ಮೊದಲಾದ ಅಗತ್ಯ ಸೌಲಭ್ಯಗಳು ಇಲ್ಲ.

ಸರ್ಕಾರವು ಅಲೆಮಾರಿ ಹಾಗೂ ಅರ್ಧ ಅಲೆಮಾರಿ ಜನಾಂಗಗಳ ಪುನರ್ವಸತಿ ಮತ್ತು ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿದೆ. ಬುಡ್ಗ ಜಂಗಮ ಸಮುದಾಯದವರಿಗೂ ಆ ಯೋಜನೆಗಳ ಅಡಿಯಲ್ಲಿ ಅಗತ್ಯ ಸೌಲಭ್ಯಗಳನ್ನು ಶೀಘ್ರದಲ್ಲಿ ಕಲ್ಪಿಸಿಕೊಡಬೇಕೆಂದು ಎಐಡಿವೈಒ ಸಂಘಟನೆ ಒತ್ತಾಯಿಸಿದೆ.

ಕೂಡಲೇ ಅಲೆಮಾರಿ ಬುಡ್ಗ ಜಂಗಮ ಜನರು ವಾಸಿಸುವ ಸ್ಥಳವನ್ನು ಪಂಚಾಯತ್‌ ವ್ಯಾಪ್ತಿ ಅಥವಾ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ತಂದು ನಾಗರಿಕ ಸೌಲಭ್ಯಗಳನ್ನು ನೀಡಬೇಕು. ಕೂಡಲೇ ಕುಡಿಯುವ ನೀರು, ವಿದ್ಯುತ್ ಮತ್ತು ರಸ್ತೆ ಸೌಲಭ್ಯ ಕಲ್ಪಿಸಬೇಕು. ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ವಿದ್ಯಾರ್ಥಿವೇತನ ಸೌಲಭ್ಯ ಒದಗಿಸಬೇಕು. ಹಿರಿಯರಿಗೆ ಪಿಂಚಣಿ ಹಾಗೂ ಆರೋಗ್ಯ ಸೌಲಭ್ಯ ನೀಡಬೇಕು. ವಿದ್ಯುತ್ ಕಂಬಗಳನ್ನು ಹಾಕಿ ಮನೆಮನೆಗೂ ವಿದ್ಯುತ್ ಸೌಲಭ್ಯವನ್ನು ಒದಗಿಸಬೇಕು ಒತ್ತಾಯಿಸಿದೆ.

ಈ ವೇಳೆ ಜಿಲ್ಲಾಧ್ಯಕ್ಷರಾದ ಚನ್ನಬಸವ ಜಾನೇಕಲ್, ಶಿವಪ್ಪ ಅಸ್ಕಿಹಾಳ್ ಹಿರಿಯರಾದ ವೀರೇಶ್ ಬಾಬು, ಮಹೇಂದ್ರ ಸಿಂಗ್, ಶಾಂತಗೌಡ ಸುಬೇದಾರ್, ರಂಗನಾಥ್, ಅಲೆಮಾರಿ ಸಮುದಾಯದ ವೆಂಕಟೇಶ್, ಅಂಬಣ್ಣ, ಜಾನ್, ಸರೋಜಮ್ಮ, ಶೃತಿ, ಜ್ಯೋತಿ, ನರಸಿಂಹ ಮುಂತಾದವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X