ರಾಯಚೂರು | ಪದ್ಮ ಶ್ರೇಣಿಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2026ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳಿಂದ ಪದ್ಮಶ್ರೇಣಿಯ ಪ್ರಶಸ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮ ಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ಗಣರಾಜ್ಯೋತ್ಸವದ ಹಿಂದಿನ ದಿನದಂದು ಕೇಂದ್ರ ಸರ್ಕಾರದಿಂದ ಪ್ರಕಟಿಸಲಾಗುವುದು. ಕ್ಷೇತ್ರಗಳಲ್ಲಿ ಶ್ರೇಷ್ಠತೆಗೊಳಿಸಿ ಅಸಾಧರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಗುತ್ತದೆ.
ಕಲೆ ಕ್ಷೇತ್ರ : ಜನಪ್ರಿಯ ಕಲೆ, ಸಂಗೀತ, ಚಿತ್ರಕಲೆ, ವಾಸ್ತುಶಿಲ್ಪಾ, ಶಿಲ್ಪಕಲೆ, ಚಲನಚಿತ್ರ, ಛಾಯಾಗ್ರಹಣ ಇತರೆ.
ಸಮಾಜ ಕಾರ್ಯ ಕ್ಷೇತ್ರ: ಸಮಾಜ ಸೇವೆ, ಧರ್ಮಾರ್ಥ ಸೇವೆ, ಸಮುದಾಯ ಯೋಜನೆಯ ನಿಮಿತ್ತದ ಕೊಡುಗೆ ಒಳಗೊಂಡಂತೆ.
ಸಾರ್ವಜನಿಕ ವ್ಯವಹಾರ: ಕಾನೂನು ಮತ್ತು ಸಾರ್ವಜನಿಕ ಜೀವನ, ರಾಜಕೀಯ, ವಿಜ್ಞಾನ, ತಾಂತ್ರಿಕ, ತಂತ್ರಜ್ಞಾನ ಮತ್ತು ಇತರೆ.
ಗೌರವಾನ್ವಿತ ವೃತ್ತಿ: ಬಾಹ್ಯಾಕಾಶ, ಇಂಜಿನೀಯರಿಂಗ್, ಅಣುವಿಜ್ಞಾನ, ಮಾಹಿತಿ ತಂತ್ರಜ್ಞಾನ, ಸಂಶೋದನೆ ಇತ್ಯಾದಿ.
ವ್ಯಾಪರ ಮತ್ತು ಕೈಗಾರಿಕೆ: ಬ್ಯಾಂಕಿಂಗ್, ಆರ್ಥಿಕ ಚಟುವಟಿಕೆ, ಮ್ಯಾನೇಜಮೆಂಟ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ವಾಣಿಜ್ಯ ಒಳಗೊಂಡಂತೆ ಇತ್ಯಾದಿ.
ವೈದ್ಯಕೀಯ: ವೈದ್ಯಕೀಯ ಸಂಶೋಧನೆ, ಆಯುರ್ವೇದದಲ್ಲಿ ಕುಶಲತೆ, ಹೋಮಿಯೋಪತಿ, ಸಿದ್ದ, ಆಲೋಪತಿ, ನ್ಯಾಚುರೋಪತಿ ಇತ್ಯಾದಿ.
ಸಾಹಿತ್ಯ ಮತ್ತು ಶಿಕ್ಷಣ: ಪತ್ರಿಕೋದ್ಯಮ, ಬೋಧನೆ, ಪುಸ್ತಕ ಬರೆಯುವಿಕೆ, ಸಾಹಿತ್ಯ, ವೈದ್ಯ, ಶಿಕ್ಷಣ, ಅಭಿವೃದ್ಧಿ, ಶಿಕ್ಷಣ ಸುಧಾರಣೆ ಇತ್ಯಾದಿ.
ನಾಗರೀಕ ಸೇವೆ: ಆಡಳಿತದಲ್ಲಿ ಸರ್ಕಾರಿ ನೌಕರರು ಸಾಧಿಸಿರುವ ಶ್ರೇಷ್ಠತೆ, ವ್ಯಾಪರ ಮತ್ತು ಕೈಗಾರಿಕೆ: ಬ್ಯಾಂಕಿಂಗ್, ಆರ್ಥಿಕ ಚಟುವಟಿಕೆ, ಮ್ಯಾನೇಜಮೆಂಟ್, ಪ್ರವಾಸೋದ್ಯಮ ಅಭಿವೃದ್ಧಿ ಮತ್ತು ವಾಣಿಜ್ಯ ಒಳಗೊಂಡಂತೆ ಇತ್ಯಾದಿ.
ನಾಗರೀಕ ಸೇವೆ : ಆಡಳಿತದಲ್ಲಿ ಸರ್ಕಾರಿ ನೌಕರರು ಸಾಧಿಸಿರುವ ಶ್ರೇಷ್ಠತೆ.
ಕ್ರೀಡೆ : ಕ್ರೀಡೆ, ಅಥ್ಲೆಟಿಕ್ಸ್, ಸಾಹಸ ಕ್ರೀಡೆ ಮತ್ತು ಯೋಗ, ಇತ್ಯಾದಿ.
ಕ್ಷೇತ್ರಗಳು : ಮಾನವ ಹಕ್ಕುಗಳ ಸಂರಕ್ಷಣೆ, ಭಾರತದ ಸಂಸ್ಕೃತಿಯ ಪ್ರಚಾರ, ಪರಿಸರ ಸಂರಕ್ಷಣೆ ಮತ್ತು ವನ್ಯಮೃಗ ಸಂರಕ್ಷಣೆ ಕ್ಷೇತ್ರಗಳಲ್ಲಿ ನೀಡಬಹುದಾದ ಪದ್ಮ ಶ್ರೇಣಿಯ ಪ್ರಶಸ್ತಿಗಳಿಗೆ ಜೂ.12ರ ಸಂಜೆ 5.30ಗಂಟೆಯೊಳಗಾಗಿ ನಮೂನೆಯಲ್ಲಿ ವಿವರವಾದ ವರದಿಯನ್ನು ಸಾಫ್ಟ್ ಪ್ರತಿಯನ್ನು ಇ-ಮೇಲ್ ವಿಳಾಸ: dkc.raichur@gmail.com ಮತ್ತು ಹಾರ್ಡ್ ಪ್ರತಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರ ರಾಯಚೂರು ಇವರಿಗೆ ಕಳುಹಿಸಿಕೊಡಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







