Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ‘ಬುದ್ಧ ಪ್ರಜ್ಞಾ ಮಕ್ಕಳ...

Raichur | ‘ಬುದ್ಧ ಪ್ರಜ್ಞಾ ಮಕ್ಕಳ ಮೈತ್ರಿ–2026’ ಉತ್ಸವ ಕಾರ್ಯಕ್ರಮ

ಬುದ್ಧ–ಬಸವ–ಅಂಬೇಡ್ಕರ್ ಚಿಂತನೆಗಳ ಸಂದೇಶ

ವಾರ್ತಾಭಾರತಿವಾರ್ತಾಭಾರತಿ14 Sept 2026 5:17 PM IST
share
Raichur | ‘ಬುದ್ಧ ಪ್ರಜ್ಞಾ ಮಕ್ಕಳ ಮೈತ್ರಿ–2026’ ಉತ್ಸವ ಕಾರ್ಯಕ್ರಮ

ರಾಯಚೂರು: ಮಕ್ಕಳಲ್ಲಿ ಜ್ಞಾನ, ವೈಚಾರಿಕತೆ, ಸೃಜನಶೀಲತೆ, ಮಾನವೀಯತೆ ಹಾಗೂ ಸಮಾನತೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾದ ‘ಬುದ್ಧ ಪ್ರಜ್ಞಾ ಮಕ್ಕಳ ಮೈತ್ರಿ–2026’ ಉತ್ಸವದ ಎರಡನೇ ದಿನವೂ ಮಕ್ಕಳ ಪ್ರತಿಭೆ, ವೈಚಾರಿಕ ಚಿಂತನೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆ ಗಮನ ಸೆಳೆಯಿತು.

ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ ಹಾಗೂ ಲುಂಬಿನಿ ಸಭಾಂಗಣ–ಧಮ್ಮ ಸಂಸತ್‌ನಲ್ಲಿ rವಾರ ನಡೆದ ಕಾರ್ಯಕ್ರಮಕ್ಕೆ ಬುದ್ಧವಂದನೆ, ತ್ರಿಶರಣ ಪಠಣ ಹಾಗೂ ದೀಪಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಸಂತೋಷ ನಂದಿನಿ ದೀಪಜ್ಯೋತಿ ಬೆಳಗಿಸಿದರೆ, ಷಣ್ಮುಖಪ್ಪ, ಮಾತೆ ಗೌತಮಿ ಹಾಗೂ ಧಮ್ಮಚಾರಿಗಳು ಬುದ್ಧ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು.

ಉತ್ಸವದ ಪ್ರಮುಖ ಆಕರ್ಷಣೆಯಾಗಿ ಮಕ್ಕಳೇ ವೇದಿಕೆ ನಿರೂಪಣೆ ನಡೆಸಿದರು. ಬುದ್ಧನ ಧಮ್ಮ ಹಾಗೂ ಮಾನವೀಯ ಮೌಲ್ಯಗಳ ಕುರಿತು ಮಕ್ಕಳು ಇಂಗ್ಲಿಷ್‌ನಲ್ಲಿ ಆತ್ಮವಿಶ್ವಾಸದಿಂದ ಮಾತನಾಡಿ ನೆರೆದಿದ್ದವರ ಮೆಚ್ಚುಗೆ ಪಡೆದರು. ಮಕ್ಕಳ ನಿರೂಪಣೆ, ವಿಚಾರ ಮಂಡನೆ ಮತ್ತು ಸಾಂಸ್ಕೃತಿಕ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದವು.

ಮೈಸೂರು, ಕಲಬುರಗಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ರಾಯಚೂರು ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಿಂದ ಆಗಮಿಸಿದ್ದ ಮಕ್ಕಳು ವೈವಿಧ್ಯಮಯ ವೇಷಭೂಷಣಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.

ಮಧ್ಯಾಹ್ನ ನಡೆದ ಕಾರ್ಯಕ್ರಮದಲ್ಲಿ ‘ಬುದ್ಧ ಬೆಳಕು’ ನಾಟಕ ಸೇರಿದಂತೆ ಹಲವು ಸಾಂಸ್ಕೃತಿಕ ಪ್ರದರ್ಶನಗಳು ನಡೆದವು. ಮಕ್ಕಳ ಪ್ರತಿಭೆಗೆ ವೇದಿಕೆ ಕಲ್ಪಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ ಬೆಳೆಸುವ ಪ್ರಯತ್ನವೂ ನಡೆಯಿತು.

ಉತ್ಸವದಲ್ಲಿ ಮಕ್ಕಳಿಗೆ ಬುದ್ಧನ ಧಮ್ಮ, ಬಸವಣ್ಣನವರ ಕಾಯಕ–ದಾಸೋಹ ತತ್ವ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಶಿಕ್ಷಣ ಮತ್ತು ಸ್ವಾಭಿಮಾನದ ಚಿಂತನೆಗಳನ್ನು ಪರಿಚಯಿಸುವ ಕಾರ್ಯಕ್ರಮಗಳು ಆಯೋಜಿಸಲಾಯಿತು. ಸಮಾಜದಲ್ಲಿ ಸಹೋದರತ್ವ, ಕರುಣೆ ಹಾಗೂ ಮಾನವೀಯ ಮೌಲ್ಯಗಳನ್ನು ಬಿತ್ತುವ ಆಶಯ ಕಾರ್ಯಕ್ರಮದ ಮೂಲಕ ವ್ಯಕ್ತವಾಯಿತು.

ಈ ವೇಳೆ ಪಶುವೈದ್ಯಕೀಯ ಇಲಾಖೆಯ ಷಣ್ಮುಖಪ್ಪ ಮಾತನಾಡಿ, ರಾಯಚೂರಿನಲ್ಲಿ ಮೊದಲ ಬಾರಿಗೆ ಶೋಷಿತ ಹಾಗೂ ಸ್ವಾಭಿಮಾನಿ ಸಮಾಜಗಳ ಮಕ್ಕಳಿಗಾಗಿ ಎರಡು ದಿನಗಳ ಕಾಲ ನಡೆಯುತ್ತಿರುವ ಈ ಉತ್ಸವ ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದರು. ಅಂಬೇಡ್ಕರ್ ಅವರ ಆದರ್ಶಗಳು ಹಾಗೂ ಸಾಮಾಜಿಕ ಪರಿವರ್ತನೆಯ ಚಿಂತನೆಗಳನ್ನು ಮಕ್ಕಳಿಗೆ ಪರಿಚಯಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಭಂತೆ ಸಂಘಪಾಲ್, ಧಮ್ಮಚಾರಿ ನರಸಿಂಹಲು, ದೇವಯ್ಯ (ಮೈಸೂರು), ಮೇಲ್ಕೋಡಿ ಮಹಾದೇವ ಸ್ವಾಮಿ ಹಾಗೂ ಸಂಗಡಿಗರು ಎರಡು ದಿನಗಳ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ವಿಚಾರ ವಿಕಾಸ ವೇದಿಕೆಯ ಜಿಲ್ಲಾಧ್ಯಕ್ಷ ಬಿ.ಎ. ದೊಡ್ಡಮನಿ, ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾಧ್ಯಕ್ಷ ವಿಜಯ ಪ್ರಸಾದ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X