ರಾಯಚೂರು | ನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸವರಾಜ ರೆಡ್ಡಿ ನಿಧನ

ರಾಯಚೂರು : ನಗರ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಜಿ.ಬಸವರಾಜ ರೆಡ್ಡಿ (67) ಸೋಮವಾರ ರಾತ್ರಿ ಅನಾರೋಗ್ಯದಿಂದ ನಿಧನರಾದರು.
ಮೃತರು, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಸಹೋದರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮುನ್ನೂರು ಕಾಪು ಸಮಾಜದ ರುದ್ರ ಭೂಮಿಯಲ್ಲಿ ಅವರ ಅಂತ್ಯ ಸಂಸ್ಕಾರ ನೇರೆವೇರಿಸಲಾಯಿತು.
ಬಸವರಾಜ ರೆಡ್ಡಿ ಅವರು ಜಿಲ್ಲಾ ಪಂಚಾಯತಿಯ ಸದಸ್ಯರಾಗಿ, ನಗರಸಭೆಯ ವಿರೋಧ ಪಕ್ಷದ ನಾಯಕರಾಗಿ ರಾಜಕೀಯ ಕ್ಷೇತ್ರದಲ್ಲಿ ವಿವಿಧ ಹುದ್ದೆ ಅಲಂಕರಿಸಿದ್ದರು ಹಾಗೂ ಉದ್ಯಮ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದರು. ಕಾಂಗ್ರೆಸ್ ನಾಯಕರು, ಮುನ್ನೂರು ಕಾಪು ಸಮಾಜದ ಮುಖಂಡರು ಸಂತಾಪ ಸೂಚಿಸಿದ್ದಾರೆ.
Next Story





