Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ...

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ ಯಾರಿಗೆ? ರಾಯಚೂರಿನಲ್ಲಿ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ

ಬಾವಸಲಿ, ರಾಯಚೂರುಬಾವಸಲಿ, ರಾಯಚೂರು31 May 2026 2:28 PM IST
share
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನ ಯಾರಿಗೆ? ರಾಯಚೂರಿನಲ್ಲಿ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ

ರಾಯಚೂರು : ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯಂತೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪಮುಖ್ಯಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಸ್ಥಾನಕ್ಕೇರಲು ಸಜ್ಜಾಗಿದ್ದಾರೆ. ಈ ಮಧ್ಯೆ ಜಿಲ್ಲೆಯಲ್ಲಿ ಸಚಿವ ಸ್ಥಾನದ ಚರ್ಚೆ ಗರಿಗೆದರಿದೆ.

ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದ ಪೈಕಿ 4 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನವರೇ ಶಾಸಕರಿದ್ದು, ನಾಲ್ವರು ವಿಧಾನ ಪರಿಷತ್ ಸದಸ್ಯರಿದ್ದಾರೆ. ಸಿದ್ದರಾಮಯ್ಯ ಸಂಪುಟದಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಹಾಲಿ ಸಚಿವ ಎನ್.ಎಸ್.ಬೋಸರಾಜು ಅವರು ಡಿ.ಶಿವಕುಮಾರ್‌ ಸಂಪುಟದಲ್ಲಿಯೂ ಮುಂದುವರೆಯುವ ಆಸೆ ಇಟ್ಟುಕೊಂಡಿದ್ದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಮುಖ್ಯವಾಗಿ ಕಾಂಗ್ರೆಸ್ ನ ನಾಲ್ವರು ಶಾಸಕರೂ ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಇವರಲ್ಲಿ ಹಿರಿಯ ಶಾಸಕರಾದ (ಐದು ಬಾರಿ ಶಾಸಕರಾಗಿದ್ದಾರೆ) ಸಿಂಧನೂರು ಕ್ಷೇತ್ರದ ಹಂಪನಗೌಡ ಬಾದರ್ಲಿ ಅವರು ಮುಂಚೂಣಿಯಲ್ಲಿದ್ದಾರೆ. ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡಿದರೆ ಹಿರಿತನದ ಆಧಾರದಲ್ಲಿ ಇವರಿಗೆ ಸ್ಥಾನ ನೀಡಬಹುದು ಎಂದು ಹೇಳಲಾಗುತ್ತಿದೆ.

ಹಂಪನಗೌಡ ಬಾದರ್ಲಿ ಅವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ಕೊನೆ ಕ್ಷಣದಲ್ಲಿ ಎಂಎಲ್‌ಸಿ ಎನ್.ಎಸ್.ಬೋಸರಾಜು ಅವರಿಗೆ ಸಚಿವ ಸ್ಥಾನ ಸಿಕ್ಕಿತ್ತು.

ಇವರಲ್ಲದೆ ಜಿಲ್ಲೆಯ‌ ನಾಲ್ವರು ಕಾಂಗ್ರೆಸ್‌‌‌ ಶಾಸಕರ ಪೈಕಿ ಎಲ್ಲರೂ ಒಂದಕ್ಕಿಂತ ಹೆಚ್ಚು ಬಾರಿ ಶಾಸಕರಾಗಿದ್ದು, ಸಚಿವ‌ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.

ಹಂಪಯ್ಯ ನಾಯಕ ಸಾಹುಕಾರ್ : ಮಾನ್ವಿ ಕ್ಷೇತ್ರದ ಹಾಲಿ ಶಾಸಕರಾಗಿರುವ ಹಂಪಯ್ಯ ನಾಯಕ ಸಾಹುಕಾರ್ ಅವರು ಕಾಂಗ್ರೆಸ್ ನಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಹಿರಿಯರಾದ ಇವರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಎಸ್ ಟಿ ಕೋಟಾದಲ್ಲಿ ಸ್ಥಾನ ನೀಡಬೇಕು ಎಂದು ಹೈಕಮಾಂಡ್ ಮಟ್ಟದಲ್ಲಿ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬಸನಗೌಡ ದದ್ದಲ್ : ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಸತತ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬಸನಗೌಡ ದದ್ದಲ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಇವರು ಎಸ್‌ಟಿ ಕೋಟಾದಡಿ ಸಚಿವ ಸ್ಥಾನ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಪ್ರಸ್ತುತ ಸಂಪುಟ ದರ್ಜೆಯ ವಾಲ್ಮೀಕಿ ಅಭಿವೃದ್ಧಿ ನಿಮಗದ ಅಧ್ಯಕ್ಷರೂ ಆಗಿರುವ ದದ್ದಲ್ ತೆರೆಮರೆಯಲ್ಲಿ ಸಚಿವ ಸ್ಥಾನದ ಕಸರತ್ತು ನಡೆಸುತ್ತಿದ್ದಾರೆ.

ಬಸನಗೌಡ ತುರ್ವಿಹಾಳ : ಖಾದಿ ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರೂ ಆಗಿರುವ ಮಸ್ಕಿ ಕ್ಷೇತ್ರದ ಶಾಸಕ ಆರ್ ಬಸನಗೌಡ ತುರ್ವಿಹಾಳ ಅವರು ಎರಡು ಬಾರಿ ಶಾಸಕರಾಗಿದ್ದಾರೆ. ಇವರು ಎಸ್ ಟಿ ಕೋಟಾದಲ್ಲಿ ಸಚಿವ ಸ್ಥಾನ ನೀಡಿದರೆ ತಮಗೆ ಆದ್ಯತೆ ನೀಡಬೇಕು ಎಂದು ಹೈಕಮಾಂಡ್ ಗೆ ಮನವಿ ಮಾಡಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.

ಎ.ವಸಂತಕುಮಾರ : ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಪಕ್ಷಕ್ಕಾಗಿ ಅನೇಕ ವರ್ಷ ದುಡಿದಿದ್ದು, ತಮಗೂ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡಬೇಕು ಎಂದು ಮನವಿ ಮಾಡಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

ವಸಂತ ಕುಮಾರ ಎಸ್ ಸಿ ಕೋಟಾದಡಿ ಸಚಿವ ಸ್ಥಾನ ನೀಡಬೇಕು ಎಂದು ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಆದರೆ ಇದುವರೆಗೆ ಬಹಿರಂಗವಾಗಿ ಹೇಳಿಕೆ ನೀಡಿಲ್ಲ. ಇವರು ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಬಸನಗೌಡ ಬಾದರ್ಲಿ: ಏತನ್ಮಧ್ಯೆ ಸಿಂಧನೂರು ತಾಲೂಕಿನವರಾದ ಎಂಎಲ್ ಸಿ ಬಸನಗೌಡ ಬಾದರ್ಲಿ ಅವರು ಡಿ.ಕೆ ಶಿವಕುಮಾರ ಅವರ ಆಪ್ತರಾಗಿದ್ದು, ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಕಾಂಗ್ರೆಸ್ ಯುವ ಘಟಕದ ಮುಂಚೂಣಿ ನಾಯಕರಲ್ಲಿ ಒಬ್ಬರಾಗಿರುವ ಇವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಆಕಾಂಕ್ಷಿಯಾಗಿ ಬಂಡಾಯ ಎದ್ದಿದ್ದರು. ಬಳಿಕ ಪಕ್ಷ ಅವರಿಗೆ ಚುನಾವಣೆ ಬಳಿಕ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಸಮಾಧಾನ ಪಡಿಸಿ ಎಂಎಲ್ ಸಿ ಮಾಡಿದ್ದರು. ಹಾಲಿ ಶಾಸಕ ಹಾಗೂ ತಾತನವರಾದ ಹಂಪನಗೌಡ ಗೌಡ ಬಾದರ್ಲಿಗೆ ಸೆಡ್ಡು ಹೊಡೆದು ಸಚಿವ ಸ್ಥಾನ ಪಡೆದರೂ ಆಶ್ಚರ್ಯವಿಲ್ಲ. ಪಕ್ಷದ ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತಾರೆ ಎನ್ನುವುದು ಕಾದು ನೋಡಬೇಕಿದೆ.

ಸಚಿವ ಸ್ಥಾನ ಹಂಚಿಕೆಯಲ್ಲಿ ಕೇವಲ ಜಿಲ್ಲೆ ಮಾತ್ರವಲ್ಲ, ಜಾತಿ ಸಮೀಕರಣ, ವೈಯಕ್ತಿಕ ವರ್ಚಸ್ಸು ಕೆಲಸ ಮಾಡಲಿದ್ದು ಆದ್ದರಿಂದ ಸಚಿವಕಾಂಕ್ಷಿಗಳು ದಿಲ್ಲಿ ಹಾಗೂ ರಾಜ್ಯ ನಾಯಕರ ದುಂಬಾಲು ಬಿದ್ದಿದ್ದಾರೆ.

Tags

RaichurCongress
share
ಬಾವಸಲಿ, ರಾಯಚೂರು
ಬಾವಸಲಿ, ರಾಯಚೂರು
Next Story
X