Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ದಿಶಾ ಸಮಿತಿ ಸಭೆ

ರಾಯಚೂರು | ದಿಶಾ ಸಮಿತಿ ಸಭೆ

ಅಧಿಕಾರಿಗಳಿಗೆ ಜನ ಜೀವನದ ಕಾಳಜಿ ಇರಲಿ : ಜಿ.ಕುಮಾರ ನಾಯಕ

ವಾರ್ತಾಭಾರತಿವಾರ್ತಾಭಾರತಿ16 Jun 2025 7:22 PM IST
share
ರಾಯಚೂರು | ದಿಶಾ ಸಮಿತಿ ಸಭೆ

ರಾಯಚೂರು: ಜನ ಜೀವನದ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಇರಬೇಕು. ಈ ನಿಟ್ಟಿನಲ್ಲಿ ಬೇರೆ ಜಿಲ್ಲೆಗಳಿಗೆ ಮಾದರಿಯಾಗುವ ಹಾಗೆ ಪ್ರತಿಯೊಂದು ಯೋಜನೆಗಳು ಅಚ್ಚುಕಟ್ಟಾಗಿ ಅನುಷ್ಠಾನಗೊಳಿಸಲು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರು ಆಗಿರುವ ರಾಯಚೂರ ಲೋಕಸಭಾ ಸದಸ್ಯರಾದ ಜಿ.ಕುಮಾರ ನಾಯಕ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜೂ.16ರಂದು ನಡೆದ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಿಕಿತ್ಸೆ ಸಿಗುತ್ತಿಲ್ಲ ಅನ್ನುವ ಕಾರಣಕ್ಕೆ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಗರ್ಭಿಣಿಯರು ಸಾವಿಗೀಡಾಗುವ ಪ್ರಕರಣಗಳು ವರದಿಯಾಗಬಾರದು. ಈ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾಕಷ್ಟು ಮುಂಜಾಗ್ರತೆ ವಹಿಸಬೇಕು. ಜಿಲ್ಲಾ, ತಾಲೂಕು, ಹೋಬಳಿ, ಗ್ರಾಮಮಟ್ಟದ ಎಲ್ಲ ಕಡೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲಕ್ಕೆ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಶಿಶುಮರಣ ಮತ್ತು ತಾಯಿಮರಣ ಪ್ರಮಾಣವು ಶೂನ್ಯಕ್ಕಿಳಿಸಬೇಕು ಎಂದರು.

ಬಾಲ್ಯವಿವಾಹ ಪದ್ದತಿಯು ನಿಷೇಧವಿದ್ದರೂ ಇನ್ನು ಗ್ರಾಮೀಣ ಭಾಗದ ಅಲ್ಲಲ್ಲಿ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗುತ್ತಿವೆ. ಕಾನೂನು ಕ್ರಮಗಳನ್ನು ಬಿಗಿಗೊಳಿಸಿ ಈ ಪದ್ದತಿಯನ್ನು ತೊಲಗಿಸಬೇಕು. ಇದಕ್ಕೆ ಪ್ರೋತ್ಸಾಹಿಸುವವರನ್ನು ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಸೂಚನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ಇತ್ತೀಚೆಗೆ ಸಾರ್ವಜನಿಕರಲ್ಲಿ ಅಧಿಕ ರಕ್ತದೊತ್ತಡ, ಶುಗರ್ ಹೆಚ್ಚುತ್ತಿವೆ. ಈ ಬಗ್ಗೆ ಗ್ರಾಮಮಟ್ಟದ ವೈದ್ಯಾಧಿಕಾರಿಗಳು ಗಮನ ಹರಿಸಬೇಕು. ಗ್ರಾಮೀಣ ಜನರಲ್ಲಿ ಹೆಚ್ಚುತ್ತಿರುವ ಬಿಪಿ, ಶುಗರ್ ತಡೆಗಾಗಿ ಇದುವರೆಗೆ ಆರೋಗ್ಯ ಇಲಾಖೆ ಕೈಗೊಂಡ ಕ್ರಮದ ಬಗ್ಗೆ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಎಂಬಿಬಿಎಸ್ ಪದವೀಧರರು ಖಾಲಿ ಇರುವ ಹುದ್ದೆಗಳಿಗೆ ಬಾರದಿರಲು ಇರುವ ತೊಡಕುಗಳನ್ನು ಕೂಡಲೇ ಸರಿಪಡಿಸಲು ಕ್ರಮ ವಹಿಸಬೇಕು. ಜನತೆಗೆ ಸರಿಯಾದ ಚಿಕಿತ್ಸೆ ಸಿಗುವ ನಿಟ್ಟಿನಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಸಮರ್ಪಕ ಪ್ರಮಾಣದಲ್ಲಿ ಔಷಧಿ, ಸಲಕರಣೆಗಳು ಇರುವಂತೆ ನೋಡಿಕೊಳ್ಳಬೇಕು ಎಂದು ಸಂಸದರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಣ್ಣು ಪರೀಕ್ಷೆಗೆ ಒತ್ತು ಕೊಡಿ :

ಮಾಹಿತಿ ಕೊರತೆಯಿಂದಾಗಿ ರೈತರಿಗೆ ಯಾವ ಮಣ್ಣಿನಲ್ಲಿ ಯಾವ ಬಗೆಯ ಬಿತ್ತನೆ ಬೀಜ ಬಿತ್ತನೆ ಮಾಡಬೇಕು ಎಂಬುದು ತಿಳಿಯುವುದಿಲ್ಲ. ರಾಯಚೂರು ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರೈತರ ಮಧ್ಯೆ ಸರಿಯಾದ ಸಮನ್ವಯ ಇಲ್ಲದ ಕಾರಣ ರೈತರು ಖಾಸಗಿ ಕೇಂದ್ರಗಳತ್ತ ಮುಖ ಮಾಡುವಂತಾಗಿದೆ. ಇದು ತಪ್ಪಬೇಕು. ಕೃಷಿ ಅಧಿಕಾರಿಗಳು ರೈತರ ಬಳಿ ಹೋಗಬೇಕು. ಬಿತ್ತನೆ ಬೀಜ, ರಸಗೊಬ್ಬರದ ಬಗ್ಗೆ ರೈತರಿಗೆ ಸರಿಯಾದ ಮಾಹಿತಿ ನೀಡಬೇಕು. ಮಣ್ಣಿನ ಪರೀಕ್ಷೆಯನ್ನು ನಿಯಮಿತವಾಗಿ ನಡೆಸಬೇಕು ಎಂದು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

ತಳಿಗಳ ಬಗ್ಗೆ ತಿಳಿವಳಿಕೆ ನೀಡಿ :

ಅಧಿಕಾರಿಗಳು ತೋಟಗಾರಿಕಾ ಬೆಳೆಗಳ ವಿವಿಧ ತಳಿಗಳ ಬಗ್ಗೆ ರೈತರಿಗೆ ಮಾಹಿತಿ ನೀಡುತ್ತಿಲ್ಲ. ಇದುವರೆಗೆ ಬಹುತೇಕ ರೈತರಿಗೆ ಇಲಾಖೆಯಿಂದ ಸಹಾಯಧನ ಸಮರ್ಪಕವಾಗಿ ತಲುಪಿಲ್ಲ ಎಂದು ಸಂಸದರು ತೋಟಗಾರಿಕಾ ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಮಾವಿನ ಹಣ್ಣಿನ ಉತ್ಪಾದನಾ ಪ್ರಮಾಣವು ರಾಯಚೂರು ಜಿಲ್ಲೆಯಲ್ಲೆ ಏಕೆ ಕಡಿಮೆ ಆಗಿದೆ ಎಂದು ಪ್ರಶ್ನಿಸಿದ ಸಂಸದರು, ಜಿಲ್ಲೆಯಲ್ಲಿನ ಮಾವು ಬೆಳೆಗಾರರನ್ನು ಗುರುತಿಸಬೇಕು. ಇಲ್ಲಿ ಬೆಳೆದ ಮಾವನ್ನು ಬೇರೆ ರಾಜ್ಯಗಳಿಗೆ ಸಾಗಿಸಲು ಪೂರಕವಾದ ರಸ್ತೆ ಸೌಕರ್ಯ ಜಿಲ್ಲೆಯಲ್ಲಿದೆ ಎಂದು ತಿಳಿಸಿ ಅವರಿಗೆ ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕು ಎಂದು ನಿರ್ದೇಶನ ನೀಡಿದರು.

ರೈತರಿಗೆ ಸ್ಪಂದಿಸಿ :

ಈಗ ಜಿಲ್ಲೆಯ ಎಲ್ಲಾ ಕಡೆಗಳಲ್ಲಿ ಮಳೆ ಸುರಿದಿದೆ. ಹೀಗಾಗಿ ರೈತರಿಗೆ ಸಕಾಲಕ್ಕೆ ಬಿತ್ತನೆಗೆ ಅನುಕೂಲವಾಗುವಂತೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಿಗುವಂತೆ ಕೃಷಿ ಇಲಾಖೆಯ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ರಸಗೊಬ್ಬರ ಕೊರತೆ ಏನಾದರು ಕಂಡು ಬಂದಲ್ಲಿ ಈ ಬಗ್ಗೆ ವರದಿ ಮಾಡಬೇಕು ಎಂದು ಸಚಿವರಾದ ಎನ್.ಎಸ್.ಬೋಸರಾಜು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯೋಜನೆಗಳ ಪ್ರಯೋಜನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಿ :

ಕೃಷಿ ಇಲಾಖೆಯ ನಾನಾ ಯೋಜನೆಗಳ ಪ್ರಯೋಜನವು ಅರ್ಹರಿಗೆ ತಲುಪಬೇಕು. ಫಲಾನುಭವಿಗಳ ಆಯ್ಕೆ ವೇಳೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ಆಯಾ ಯೋಜನೆಗಳ ಅನುಕೂಲತೆಯು ಅರ್ಹರಾದ ಎಲ್ಲರಿಗೂ ತಲುಪುವಂತಾಗಬೇಕು ಎಂದು ಮಾನವಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿಳಂಬಕ್ಕೆ ಅವಕಾಶ ನೀಡಬೇಡಿ :

ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ಕ್ಷೇತ್ರಗಳು ವರ್ಷದಿಂದ ವರ್ಷಕ್ಕೆ ಬಲವರ್ಧನೆಯಾಗಬೇಕು. ಹಾಗಾದಲ್ಲಿ ರೈತರ, ಸಾರ್ವಜನಿಕರ ಬಾಳು ಹಸನಾಗುವುದು. ಈ ದಿಶೆಯಲ್ಲಿ ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶ ಮಾಡಿಕೊಡಬಾರದು ಎಂದು ವಿಧಾನ ಪರಿಷತ್ ಶಾಸಕರಾದ ಎ.ವಸಂತಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ದಿಶಾ ಸಮಿತಿಯ ಸದಸ್ಯರು, ಜಿಲ್ಲಾಧಿಕಾರಿಗಳಾದ ನಿತೀಶ್ ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪುಟ್ಟಮಾದಯ್ಯ, ಜಿಲ್ಲಾ ಪಂಚಾಯತ್ ಸಿಇಓ ರಾಹುಲ್ ತುಕಾರಾಮ ಪಾಂಡ್ವೆ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟೋಣಿ ಮತ್ತು ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X