Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಜೋಳ ಖರೀದಿ ಬಾಕಿ ಹಣ ಪಾವತಿಗೆ...

Raichur | ಜೋಳ ಖರೀದಿ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ16 Jun 2026 9:54 PM IST
share
Raichur | ಜೋಳ ಖರೀದಿ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ
ರಸಗೊಬ್ಬರ ಕೊರತೆ ನಿವಾರಣೆ, ಕಳಪೆ ಬೀಜ ಮಾರಾಟ ನಿಯಂತ್ರಣಕ್ಕೆ ಒತ್ತಾಯ

ರಾಯಚೂರು: ಜೋಳ ಖರೀದಿ ಬಾಕಿ ಹಣವನ್ನು ತಕ್ಷಣ ಪಾವತಿಸುವುದು, ರಸಗೊಬ್ಬರ ಕೊರತೆಯನ್ನು ನಿವಾರಿಸುವುದು ಹಾಗೂ ಕಳಪೆ ಬೀಜಗಳ ಮಾರಾಟ ನಿಯಂತ್ರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ನಗರದ ಹೊರವಲಯದಲ್ಲಿರುವ ನೂತನ ಜಿಲ್ಲಾಡಳಿತ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

ರೈತರಿಂದ ಖರೀದಿಸಲಾದ ಜೋಳದ ಹಣವನ್ನು ಸರ್ಕಾರ ಇನ್ನೂ ಪಾವತಿಸಿಲ್ಲ. ಜಿಲ್ಲೆಯ ಶೇ.85ರಷ್ಟು ರೈತರಿಗೆ ಹಣ ಬಾಕಿಯಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಮಸ್ಯೆ ಬಗೆಹರಿದಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲೆಯಲ್ಲಿ 12.50 ಲಕ್ಷ ಕ್ವಿಂಟಾಲ್ ಜೋಳ ಖರೀದಿಸಲಾಗಿದ್ದು, ಸುಮಾರು 10.50 ಲಕ್ಷ ಕ್ವಿಂಟಾಲ್ ಜೋಳದ ಹಣ ಇನ್ನೂ ರೈತರಿಗೆ ಸಂದಾಯವಾಗಿಲ್ಲ. ಮುಂಗಾರು ಆರಂಭವಾಗಿರುವ ಹಿನ್ನೆಲೆಯಲ್ಲಿ ಬೀಜ ಮತ್ತು ರಸಗೊಬ್ಬರ ಖರೀದಿಸಲು ರೈತರ ಬಳಿ ಹಣದ ಕೊರತೆ ಉಂಟಾಗಿದ್ದು, ಬಡ್ಡಿ ಸಾಲದ ಮೊರೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ಹತ್ತಿ ಖರೀದಿಸಿದ ರೈತರಿಗೆ ಒಂದು ವಾರದೊಳಗೆ ಹಣ ಪಾವತಿಸಿದ ಸರ್ಕಾರ, ಜೋಳ ಖರೀದಿಯ ಹಣ ಬಿಡುಗಡೆ ಮಾಡದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ಇದೇ ವೇಳೆ ಜಿಲ್ಲೆಯಾದ್ಯಂತ ರಸಗೊಬ್ಬರ ಕೊರತೆ ಉಂಟಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.

ಯಾದಗಿರಿ ಜಿಲ್ಲೆಯಲ್ಲಿ ಎಕರೆವಾರು ರಸಗೊಬ್ಬರ ವಿತರಣೆಗೆ ಕ್ರಮ ಕೈಗೊಂಡಿರುವಂತೆ, ರಾಯಚೂರು ಜಿಲ್ಲೆಯಲ್ಲೂ ಎಲ್ಲ ರೈತರಿಗೆ ಸಮರ್ಪಕವಾಗಿ ರಸಗೊಬ್ಬರ ದೊರೆಯುವ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು. ರಸಗೊಬ್ಬರ ಖರೀದಿಯೊಂದಿಗೆ ಇತರೆ ಉತ್ಪನ್ನಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸುವ ಪದ್ಧತಿಯನ್ನು ತಕ್ಷಣ ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

29 ಸಾವಿರ ರೂ. ಮೌಲ್ಯದ ರಸಗೊಬ್ಬರ ಖರೀದಿಸುವ ರೈತರು ಹೆಚ್ಚುವರಿಯಾಗಿ 9,257 ರೂ. ಮೌಲ್ಯದ ಇತರೆ ಗೊಬ್ಬರಗಳನ್ನು ಖರೀದಿಸಬೇಕೆಂಬ ಷರತ್ತು ವಿಧಿಸಲಾಗುತ್ತಿದೆ. ರೈತರ ಮೇಲಿನ ಈ ಹೆಚ್ಚುವರಿ ಹೊರೆಯನ್ನು ಜಿಲ್ಲಾಡಳಿತ ತಡೆಯಬೇಕು ಎಂದು ಮನವಿ ಮಾಡಿದರು.

ನೀರಾವರಿ ಪ್ರದೇಶಗಳ ಮುಖ್ಯ ಹಾಗೂ ಉಪಕಾಲುವೆಗಳಲ್ಲಿ ಸಮರ್ಪಕವಾಗಿ ಹೂಳು ತೆರವು ಮತ್ತು ಸ್ವಚ್ಛತಾ ಕಾರ್ಯ ನಡೆಯದಿರುವುದರಿಂದ ಮುಂದಿನ ದಿನಗಳಲ್ಲಿ ನೀರಾವರಿ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಆದ್ದರಿಂದ ಕಾಲುವೆಗಳ ಸ್ವಚ್ಛತಾ ಕಾಮಗಾರಿಯನ್ನು ತಕ್ಷಣ ಕೈಗೊಳ್ಳಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.

ಪ್ರತಿಭಟನೆಯ ಬಳಿಕ ರೈತ ಸಂಘದ ಮುಖಂಡರು ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವ ಅಧ್ಯಕ್ಷ ಚಾಮರಸ ಮಾಲಿ ಪಾಟೀಲ, ಯಂಕಪ್ಪ ಕಾರಬಾರಿ, ದೊಡ್ಡ ಬಸನಗೌಡ, ಸೂಗುರಯ್ಯ ಆರ್.ಎಸ್. ಮಠ, ಪ್ರಭಾಕರ ಪಾಟೀಲ ಇಂಗಳದಾಳ, ಬಸವರಾಜ ಮಾಲಿಪಾಟೀಲ, ಬೂದಯ್ಯ ಸ್ವಾಮಿ, ಚಾಮರಾಜ ಜಾನೇಕಲ್, ಸಿದ್ದಯ್ಯಸ್ವಾಮಿ, ಲಿಂಗನಗೌಡ, ಬಾಲಾಜಿ ಸೇರಿದಂತೆ ರೈತರು ಪಾಲ್ಗೊಂಡಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X