Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು: ಮಾಜಿ ದೇವದಾಸಿಯರಿಗೆ ಉಚಿತ ಮನೆ...

ರಾಯಚೂರು: ಮಾಜಿ ದೇವದಾಸಿಯರಿಗೆ ಉಚಿತ ಮನೆ ನಿರ್ಮಿಸಲು ಅನಿರ್ಧಿಷ್ಠಾವಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ23 July 2026 12:00 AM IST
share
ರಾಯಚೂರು: ಮಾಜಿ ದೇವದಾಸಿಯರಿಗೆ ಉಚಿತ ಮನೆ ನಿರ್ಮಿಸಲು ಅನಿರ್ಧಿಷ್ಠಾವಧಿ ಧರಣಿ

ರಾಯಚೂರು: ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಮನೆಗಳ ನಿರ್ಮಾಣವನ್ನು ತ್ವರಿತವಾಗಿ ಪೂರ್ಣಗೊಳಿಸುವುದು, ಫಲಾನುಭವಿಗಳಿಂದ ವಸೂಲಿ ಮಾಡಲಾಗುತ್ತಿರುವ ರೂ.1 ಲಕ್ಷ ವಂತಿಗೆ ಹಣವನ್ನು ಕೈಬಿಟ್ಟು ಸರ್ಕಾರವೇ ಉಚಿತವಾಗಿ ಪುನರ್ವಸತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ನೇತೃತ್ವದಲ್ಲಿ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬುಧವಾರ ಧರಣಿ ಆರಂಭಿಸಿದ್ದಾರೆ.

ದೇವದಾಸಿ ವಿಮುಕ್ತ ಸಂಘಟನೆಯಿಂದ ನಿರಂತರ ಹೋರಾಟದ ಫಲವಾಗಿ ನಗರದ ಆಶಾಪುರ ರಸ್ತೆಯ ಕೇಂದ್ರಿಯ ವಿದ್ಯಾಲಯದ ಹಿಂಭಾಗದಲ್ಲಿರುವ ಸರ್ವೆ ನಂ.1403ರಲ್ಲಿ 206 ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿಗಾಗಿ 5 ಎಕರೆ ಜಮೀನು ಮಂಜೂರಾಗಿತ್ತು. 2019ರಲ್ಲಿ ಮನೆಗಳ ನಿರ್ಮಾಣ ಕಾರ್ಯ ಆರಂಭವಾದರೂ, ಏಳು ವರ್ಷಗಳಾದರೂ ಕೇವಲ 84 ಮನೆಗಳು ಮಾತ್ರ ಅಂತಿಮ ಹಂತ ತಲುಪಿದ್ದು, ಉಳಿದ 122 ಮನೆಗಳ ಕಾಮಗಾರಿ ಅತ್ಯಂತ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.

ಮನೆಗಳ ನಿರ್ಮಾಣ ವಿಳಂಬದಿಂದ ಅನೇಕ ಕುಟುಂಬಗಳು ಸಂಕಷ್ಟದಲ್ಲಿ ಬದುಕುತ್ತಿದ್ದು, ಕೆಲವು ಫಲಾನುಭವಿಗಳು ಮನೆ ಸಿಗುವ ಮುನ್ನವೇ ಮೃತಪಟ್ಟಿರುವುದು ವಿಷಾದನೀಯ. ಫಲಾನುಭವಿಗಳಿಂದ ವಸೂಲಿ ಮಾಡಲಾಗುತ್ತಿರುವ 1 ಲಕ್ಷ ರೂ. ವಂತಿಗೆ ಹಣವನ್ನು ರದ್ದುಪಡಿಸಿ ಸರ್ಕಾರವೇ ಉಚಿತ ಪುನರ್ವಸತಿ ಕಲ್ಪಿಸಬೇಕು. ಸರ್ವೆ ನಂ.1403ರಲ್ಲಿ ನಡೆಯುತ್ತಿರುವ ಮನೆಗಳ ನಿರ್ಮಾಣ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಲ್ಲ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದರು.

ದೇವದಾಸಿ ಮಹಿಳೆಯರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಜಾರಿಗೊಳಿಸಬೇಕು. ಮಾಜಿ ದೇವದಾಸಿ ಮಹಿಳೆಯರಿಗೆ ನೀಡಲಾಗುತ್ತಿರುವ ಮಾಸಿಕ ಸಹಾಯಧನವನ್ನು 2,000ರಿಂದ 6,000ಕ್ಕೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ದೇವದಾಸಿ ಕುಟುಂಬಗಳ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಕುಟುಂಬಕ್ಕೆ 5 ಎಕರೆ ಸಾಗುವಳಿಗೆ ಯೋಗ್ಯ ಭೂಮಿ ನೀಡಬೇಕು ಹಾಗೂ ಸ್ವಯಂ ಉದ್ಯೋಗಕ್ಕಾಗಿ 5 ಲಕ್ಷ ಸಹಾಯಧನದೊಂದಿಗೆ ಬ್ಯಾಂಕ್ ಸಾಲ ಸೌಲಭ್ಯ ಒದಗಿಸಬೇಕು. ಬೇಡಿಕೆಗಳು ಈಡೇರುವವರೆಗೆ ಅಹೋರಾತ್ರಿ ಅನಿರ್ದಿಷ್ಟ ಧರಣಿ ಮುಂದುವರಿಸುವುದಾಗಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷೆ ಹೆಚ್.ಪದ್ಮಾ, ಗೌರವಾಧ್ಯಕ್ಷ ಕೆ.ಜಿ.ವಿರೇಶ, ಮಹಾದೇವಿ, ಜಮಲಮ್ಮ, ಸಂತೋಷಮ್ಮ ಸರೋಜಮ್ಮ, ತಿಪ್ಪಮ್ಮ, ಜಮಲಮ್ಮ, ನಾಗಮ್ಮ, ನರಸಮ್ಮ, ಬಡೆಮ್ಮ, ಲಾಕಮ್ಮ, ಆನಂದ, ಹುಲಿಗೆಪ್ಪ, ರವಿ, ಬಸಂತಿ, ಭೀಮೇಶ ಸೇರಿದಂತೆ ಮಾಜಿ ದೇವದಾಸಿ ಮಹಿಳೆಯರು ಭಾಗವಹಿಸಿದರು.

Tags

RaichurDevadasis
share
ವಾರ್ತಾಭಾರತಿ
ವಾರ್ತಾಭಾರತಿ
Next Story
X