ರಾಯಚೂರು | ಪತಿಯ ಕತ್ತು ಹಿಸುಕಿ ಕೊಲೆ ಪ್ರಕರಣ: ಪತ್ನಿಗೆ ಜೀವಾವಧಿ ಶಿಕ್ಷೆ

ರಾಯಚೂರು : ಪತಿ ಮಲಗಿದಾಗ ಕತ್ತು ಹಿಸುಕಿ ಕೊಲೆ ಮಾಡಿದ ಆರೋಪಿ ಪತ್ನಿಗೆ ಲಿಂಗಸೂಗೂರು ತಾಲೂಕಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು ಶುಕ್ರವಾರ ಜೀವಾವಧಿ ಶಿಕ್ಷೆ , 30 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಲಿಂಗಸೂಗೂರು ತಾಲೂಕಿನ ರೋಡಲಬಂಡಾ ಕ್ಯಾಂಪ್ (ಯುಕೆಪಿ) ವಸತಿ ಗೃಹದಲ್ಲಿ 2018ರ ಜುಲೈ 18ರಂದು ರಾತ್ರಿ 11:30 ಗಂಟೆ ಸುಮಾರಿಗೆ ಪತಿ ಮಹಾಂತೇಶ ಮಲಗಿದಾಗ ಪತ್ನಿ ಸರಸ್ವತಿ ಕತ್ತು ಹಿಸುಕಿ ಹತ್ಯೆ ಮಾಡಿದ್ದರು ಎನ್ನಲಾಗಿದೆ.
ಈ ಸಂಬಂಧ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಂದಿನ ಲಿಂಗಸೂಗುರು ಸಿಪಿಐ ವಿ.ಎಸ್.ಹಿರೇಮಠ ನ್ಯಾಯಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣವನ್ನು ವಿಚಾರಣೆ ನಡೆಸಿದ ರಾಯಚೂರು, ಲಿಂಗಸೂಗುರು ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ಇಂದು ತೀರ್ಪು ನೀಡಿದರು.
ಸರಕಾರಿ ಅಭಿಯೋಜಕ ಎ.ಗಡಕರಿ ವಾದ ಮಂಡಿಸಿದ್ದರು. ಲಿಂಗಸೂಗುರು ಠಾಣೆಯ ಪಿ.ಸಿ. ನಿಂಗಯ್ಯ ನ್ಯಾಯಾಲಯಕ್ಕೆ ಸಾಕ್ಷಿದಾರರನ್ನು ಹಾಜರುಪಡಿಸಿದ್ದರು.





