Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಮಹಿಳೆಯರ ಸುರಕ್ಷೆ,...

ರಾಯಚೂರು | ಮಹಿಳೆಯರ ಸುರಕ್ಷೆ, ಭದ್ರತೆಗಾಗಿ ನಾನು ಸದಾ ಸಿದ್ದ : ಡಾ.ನಾಗಲಕ್ಷ್ಮೀ ಚೌದರಿ

ವಾರ್ತಾಭಾರತಿವಾರ್ತಾಭಾರತಿ28 Jan 2026 12:12 AM IST
share
ರಾಯಚೂರು | ಮಹಿಳೆಯರ ಸುರಕ್ಷೆ, ಭದ್ರತೆಗಾಗಿ ನಾನು ಸದಾ ಸಿದ್ದ : ಡಾ.ನಾಗಲಕ್ಷ್ಮೀ ಚೌದರಿ
"ಹೆಣ್ಣು ಮಕ್ಕಳು ಧೈರ್ಯವಾಗಿ ಸಮಸ್ಯೆ ಎದುರಿಸಬೇಕು"

ರಾಯಚೂರು: ಹೆಣ್ಣು ಮಕ್ಕಳು ಯಾವುದೇ ಸಮಸ್ಯೆಗಳು ಎದುರಾದರೂ ಧೈರ್ಯವಾಗಿ ಎದುರಿಸಬೇಕು. ಗುಣಮಟ್ಟದ ಶಿಕ್ಷಣದ ಜೊತೆಗೆ ಸಂಘಟಿತರಾದಾಗ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ತಾವೇ ಕಂಡುಕೊಳ್ಳಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಹೇಳಿದರು.

ಸೋಮವಾರ ದೇವದುರ್ಗ ಪಟ್ಟಣದ ಅಲ್ಪಸಂಖ್ಯಾತ ಇಲಾಖೆ, ಪೊಲೀಸ್ ಠಾಣೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಪಟ್ಟಣದ ಅಲ್ಪಸಂಖ್ಯಾತ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು, ಅಲ್ಲಿ ಮೂಲಸೌಕರ್ಯಗಳ ಕೊರತೆ, ಗುಣಮಟ್ಟದ ಊಟದ ವ್ಯವಸ್ಥೆ ಇಲ್ಲದಿರುವುದು, ಬೆಂಚ್–ಚೇರ್, ಡೈನಿಂಗ್ ಟೇಬಲ್ ಹಾಗೂ ಸರಿಯಾದ ನಾಮಫಲಕಗಳಿಲ್ಲದಿರುವುದಕ್ಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ವಿದ್ಯಾರ್ಥಿನಿಯರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ನಾಮಫಲಕಗಳಲ್ಲಿ ಮೇಲಾಧಿಕಾರಿಗಳ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಹಾಕಿ, ಯಾವುದೇ ಸಮಸ್ಯೆ ಬಂದರೂ ತಕ್ಷಣ ಸ್ಪಂದಿಸುವಂತೆ ಸೂಚಿಸಿದರು.

ಪೊಲೀಸ್ ಠಾಣೆಗೆ ಭೇಟಿ :

ದೇವದುರ್ಗ ಪೊಲೀಸ್ ಠಾಣೆಗೆ ಭೇಟಿ ನೀಡಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ಪರಿಶೀಲನೆ ನಡೆಸಿದ ಅವರು, ಯಾವುದೇ ಮಹಿಳೆ ಸಮಸ್ಯೆ ಹೇಳಿಕೊಳ್ಳಲು ಬಂದರೆ ಪೊಲೀಸರು ತಕ್ಷಣ ಸ್ಪಂದಿಸಬೇಕು ಎಂದರು.

ತಪ್ಪು ಮಾಡದವರು ಭಯಪಡುವ ಅಗತ್ಯವಿಲ್ಲ. ತಪ್ಪು ಮಾಡಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಮಹಿಳೆಯರು ಭಯವಿಲ್ಲದೆ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿ ರಕ್ಷಣೆ ಪಡೆಯಬೇಕು ಎಂದು ತಿಳಿಸಿದರು.

ಪೊಕ್ಸೊ ಪ್ರಕರಣವೊಂದರ ಕುರಿತು ಯುವತಿಯ ತಾಯಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಡಾ. ನಾಗಲಕ್ಷ್ಮೀ, ಪೊಲೀಸರ ಸ್ಪಂದನೆ ಬಗ್ಗೆ ಮಾಹಿತಿ ಪಡೆದರು. ಇದಕ್ಕೆ ಪ್ರತಿಕ್ರಿಯಿಸಿದ ಯುವತಿಯ ತಾಯಿ, ಪಿಐ ಮಂಜುನಾಥ ಅವರು ನಿರಂತರವಾಗಿ ರಕ್ಷಣೆ ಮತ್ತು ಸಹಕಾರ ನೀಡುತ್ತಿದ್ದಾರೆ. ಇಂತಹ ಅಧಿಕಾರಿಗಳಿಂದ ನಮಗೆ ನ್ಯಾಯ ಸಿಗುತ್ತದೆ ಎಂದು ಹೇಳಿದರು.

ಪಿಐ ಮಂಜುನಾಥ ಹಾಗೂ ದೇವದುರ್ಗ ಪೊಲೀಸ್ ಇಲಾಖೆ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ವಿಶ್ವಾಸ ಗಳಿಸುತ್ತಿದ್ದಾರೆ ಎಂದು ಡಾ. ನಾಗಲಕ್ಷ್ಮೀ ಶ್ಲಾಘಿಸಿದರು.

ಸರ್ಕಾರಿ ಆಸ್ಪತ್ರೆ ಪರಿಶೀಲನೆ :

ನಂತರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ಅವರು, ರೋಗಿಣಿಯರ ಬಳಿ ನೇರವಾಗಿ ಹೋಗಿ ಸಮಸ್ಯೆಗಳನ್ನು ಕೇಳಿದರು. ವೃದ್ಧರು ಹಾಗೂ ಮಹಿಳೆಯರಿಗೆ ಮೊದಲ ಆದ್ಯತೆ ನೀಡಬೇಕು. ಆಸ್ಪತ್ರೆಯಲ್ಲಿ ಔಷಧಿ ಲಭ್ಯವಿಲ್ಲದಿದ್ದರೆ ಹೊರಗಡೆ ತರಿಸಿ ನೀಡಬೇಕು, ರೋಗಿಗಳನ್ನು ಕಳುಹಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬಾಣಂತಿಯರಿಗೆ ಊಟ, ಹಾಲು, ಮೊಟ್ಟೆ ನೀಡುವ ವಿಚಾರವಾಗಿ ಬಂದ ಆರೋಪಗಳ ಕುರಿತು ಸ್ಪಷ್ಟತೆ ನೀಡಿದ ಅವರು, ನೇರವಾಗಿ ವಿಚಾರಿಸಿದಾಗ ಮಹಿಳೆಯರು ಸೌಲಭ್ಯ ದೊರಕುತ್ತಿದೆ ಎಂದು ತಿಳಿಸಿದ್ದಾರೆ ಎಂದರು.

ಜನನಿ ಸುರಕ್ಷಾ ಯೋಜನೆಯಡಿ ತಜ್ಞರಿಲ್ಲದ ಕಾರಣ ರಿಮ್ಸ್‌ಗೆ ರೆಫರ್ ಮಾಡುವ ಸಂದರ್ಭದಲ್ಲಿ, ಬಡ ರೋಗಿಗಳಿಗೆ ಆಂಬುಲೆನ್ಸ್ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಆಸ್ಪತ್ರೆಯೇ ಮಾಡಬೇಕು. ತಾಯಿ ಮತ್ತು ಮಗು ಸುರಕ್ಷಿತವಾಗುವವರೆಗೂ ಒಂದೂ ರೂಪಾಯಿ ಖರ್ಚಾಗಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಶುಚಿತ್ವದ ಕೊರತೆ ಹಾಗೂ ಮಹಿಳಾ ಶೌಚಾಲಯಗಳಲ್ಲಿ ಕೋತಿಗಳ ಸಮಸ್ಯೆ ಇರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಇಂತಹ ಸಮಸ್ಯೆಗಳು ತಾಲೂಕು ಆಸ್ಪತ್ರೆಯಲ್ಲಿ ಇರಬಾರದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀದೇವಿ ನಾಯಕ, ತಹಶೀಲ್ದಾರ್ ನಾಗಮ್ಮ ಕಟ್ಟಿಮನಿ, ಪಿಐ ಮಂಜುನಾಥ, ತಾಲೂಕು ವೈದ್ಯಾಧಿಕಾರಿ ಡಾ. ಬನೇಶ್ ಗಬ್ಬೂರು, ಸಿಡಿಪಿಓ ಅನೀಲ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X