ರಾಯಚೂರು : ಸ್ವಾತಂತ್ರ್ಯ ದಿನಾಚರಣೆ; ಉಸ್ತುವಾರಿ ಸಚಿವರಿಂದ ಧ್ವಜಾರೋಹಣ

ರಾಯಚೂರು: ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ನುಡಿದಂತೆ ನಡೆಯುತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಯೋಜನೆಗಳು ತಲುಪಿಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಅಜಯಸಿಂಗ್ ಹೇಳಿದರು.
80 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನಡೆಸಿದ ಬಳಿಕ ಮಾತನಾಡಿದ ಸಚಿವರು, ರಾಜ್ಯದಲ್ಲಿ ತೀವ್ರ ಬರ ಆವರಿಸಿದ್ದು ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ 29 ರಷ್ಟು ಕೊರತೆಯಾಗಿದೆ. ಸಿಂಧನೂರು, ಅರಕೇರ,ದೇವದುರ್ಗ, ಮಸ್ಕಿ ಯಲ್ಲಿ ಬಹಳ ಕೊರತೆಯಾಗಿದೆ. ಜಿಲ್ಲೆಯಲ್ಲಿ 5 ಲಕ್ಷ ಹೆಕ್ಟರ್ ಪ್ರದೇಶ ಬಿತ್ತನೆ ಗುರಿಇತ್ತು. ಕೇವಲ 2.36 ಲಕ್ಷ ಬಿತ್ತನೆಯಾಗಿದೆ. ಬೆಳೆ ಹಾನಿಯ ಬಗ್ಗೆ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ವೀಕ್ಷಣೆ ಮಾಡಿ ರೈತರ ಸಮಸ್ಯೆ ಆಲಿಸಿದ್ದೇವೆ ಶೀಘ್ರವೇ ಸರ್ಕಾರಕ್ಕೆ ವರದಿ ಸಲ್ಲಿಸಿ ಪರಿಹಾರ ಕೊಡಿಸಲಾಗುವುದು ಎಂದರು.
ಬರ ನಿರ್ವಹಣೆಗೆ ಸರ್ಕಾರ ಮುಂದಾಗಿದ್ದು ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲಾಡಳಿತದ ಪಿ.ಡಿ ಖಾತೆಯಲ್ಲಿ ₹4 ಕೋಟಿ ಅನುದಾನ ಲಭ್ಯವಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಪ್ರತಿ ತಾಲೂಕಿಗೆ 1 ಲಕ್ಷ ತುರ್ತು ಪರಿಹಾರ ಬಿಡುಗಡೆಯಾಗಿದೆ. ಕಲಬುರಗಿಯಲ್ಲಿ ನಡೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು ಜಿಲ್ಲೆಗೆ ಒಟ್ಟು 11 ಕೋಟಿ ಜಿಲ್ಲೆಗೆ ಘೋಷಣೆ ಮಾಡಿದ್ದು ಈಗಾಗಲೇ 5 ಕೋಟಿ ಬಿಡುಗಡೆಯಾಗಿದ್ದು, ಉಳಿದ ಹಣ ಬಿಡುಗಡೆ ಮಾಡಲಾಗುತ್ತದೆ ಎಂದರು.
ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ಎಂಎಲ್ ಸಿ ಎ.ವಸಂತಕುಮಾರ, ಜಿಲ್ಲಾಧಿಕಾರಿ ಪೂವಿತಾ ಎಸ್, ಜಿ.ಪಂ ಸಿಇಒ ಈಶ್ವರ ಕುಮಾರ ಕಾಂದು, ಎಸ್ ಪಿ ಅರುಣಾಂಗ್ಷುಗಿರಿ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.






