Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ವ್ಯಕ್ತಿ ಮುಖ್ಯವಲ್ಲ...

ರಾಯಚೂರು | ವ್ಯಕ್ತಿ ಮುಖ್ಯವಲ್ಲ ವ್ಯಕ್ತಿಯ ಸಾಧನೆ ಮುಖ್ಯ : ಶಾಂತಮಲ್ಲ ಶಿವಾಚಾರ್ಯ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ9 Feb 2025 7:16 PM IST
share
Photo of Program

ರಾಯಚೂರು: ವ್ಯಕ್ತಿ ಮುಖ್ಯವಲ್ಲ ವ್ಯಕ್ತಿಯ ಸಾಧನೆ ಮುಖ್ಯ, ವ್ಯಕ್ತಿಗೆ ಸಾವಿದೆ, ಸಾಹಿತ್ಯಕ್ಕೆ ಸಾವಿಲ್ಲ ಎಂದು ರಾಯಚೂರಿನ ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೋಟೆ ಅಧ್ಯಯನ ಸಮತಿ ರಾಯಚೂರುಗಳ ಸಂಯುಕ್ತಾಶ್ರಯದಲ್ಲಿ ಇಂದು ಆಯೋಜಿಸಿದ್ದ ಲಕ್ಷ್ಮೀದೇವಿ ಶಾಸ್ತ್ರಿ ಅವರು, ಸಂಪಾದಿಸಿದ್ದ ಮರೆಯಲಾಗದ ಸಂಶೋಧಕ ದುರ್ಗಾ ಜಗದೀಶ ಮತ್ತು ದುರ್ಗಾ ಜಗದೀಶರ ಸಂಶೋಧನೆಗಳು ಎರಡು ಕೃತಿಗಳು ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ಇಂದಿನ ಕಾಲದಲ್ಲಿ ಸಣ್ಣ ಸಣ್ಣ ಸಾಹಿತಿಗಳ ಪುಸ್ತಕವನ್ನು ಹೊರ ತರುವುದಕ್ಕೆ ಸಾಧ್ಯವಾಗುತ್ತಿಲ್ಲ. ಪರಂತು ತಾಲೂಕು ಸಾಹಿತ್ಯ ಪರಿಷತ್ತು ಹಾಗೂ ಕೋಟೆ ಅಧ್ಯಯನ ಸಮಿತಿಯವರು ಸಾಹಿತಿಗಳ ಪುಸ್ತಕವನ್ನು ಲೋಕಾರ್ಪಣೆ ಮಾಡಿ ಸಾಹಿತ್ಯಗಳ ಬೆಳವಣಿಗೆಗೆ ಮುಂದಾಗುತ್ತಿದ್ದಾರೆ ಎಂದರು.

ದುರ್ಗಾ ಜಗದೀಶ್ ಅವರ ಸಂಶೋಧನಾ ಬರಹಗಳು ಇಂದು ಪುಸ್ತಕ ರೂಪದಲ್ಲಿ ಲೋಕಾರ್ಪಣೆ ಆಗಿದ್ದು, ಅವರ ಆತ್ಮ ಖುಷಿ ಪಟ್ಟಿದೆ ಎಂದರು.

ಕೃತಿಗಳ ಲೋಕಾರ್ಪಣೆ ಮಾಡಿ ಮಾತನಾಡಿದ ರಾಯಚೂರು ಕೋಟೆ ಅಧ್ಯಯನ ಸಮಿತಿಯ ಗೌರವಾಧ್ಯಕ್ಷ ಜಯಣ್ಣ, ಸಾಹಿತ್ಯ ವಲಯದಲ್ಲಿ ಅನೇಕ ಸಾಹಿತಿಗಳು, ಬರಹಗಾರರು ತಮ್ಮ ಬರಹಗಳ ಮೂಲಕ ಸಮಾಜಕ್ಕೆ ಪರಿಚಿತರಾಗುತ್ತಿದ್ದಾರೆ, ದುರ್ಗಾ ಜಗದೀಶ ಅವರು ಕೂಡ ಸರಳ ವ್ಯಕ್ತಿತ್ವದ ವ್ಯಕ್ತಿಯಾಗಿ, ಸಂಶೋಧಕನಾಗಿ ಅನೇಕ ಲೇಖನಗಳನ್ನು ಪತ್ರಿಕೆಯಲ್ಲಿ ಪ್ರಕಟಿಸಿದ್ದರು. ಅವರಿಲ್ಲದಿದ್ದರೂ ಈಗ ಅವರ ಸಂಶೋಧನೆಗಳು ಹೊರ ತರುವ ಕೆಲಸ ಮಾಡಿದ್ದು ಶ್ಲಾಘನೀಯ.

ರಾಯಚೂರಿನ ಸಾಹಿತಿಗಳಾದ ಚನ್ನಬಸವ ಹಿರೇಮಠ ಅವರು ದುರ್ಗಾ ಜಗದೀಶ ಅವರ ಸಂಶೋಧನೆ ಕೃತಿ ಪರಿಚಯಿಸಿ ಮಾತನಾಡುತ್ತಾ, ರಾಯಚೂರು ಜಿಲ್ಲೆಯಲ್ಲಿ ಇಂದಿನವರೆಗೂ ಒಬ್ಬ ಗಟ್ಟಿಯಾದ ಜಾನಪದ ತಜ್ಞ ಹುಟ್ಟಿಲ್ಲ. ಇಂದು ಕಣ್ಮರೆಯಾಗಿ ಹೋಗುತ್ತಿರುವ ಲೇಖನಗಳನ್ನು ದುರ್ಗಾ ಜಗದೀಶ ಅವರು ತಮ್ಮ ಲೇಖನಗಳಲ್ಲಿ ಅಳವಡಿಸಿ ಸಮಾಜಕ್ಕೆ ತಮ್ಮ ಬರವಣಿಗೆಯ ಮೂಲಕ ಕೊಟ್ಟಿದ್ದಾರೆ. ಒಬ್ಬ ಸಂಶೋಧಕನು ಸರಳ ಬರವಣಿಗೆಯನ್ನು ಹೊಂದಿರಬೇಕು, ರಾಯಚೂರು ಜಿಲ್ಲೆಗೆ ದುರ್ಗಾ ಜಗದೀಶ ಅವರ ಪುಸ್ತಕಗಳು ಕೈ ತುತ್ತು ಇದ್ದ ಹಾಗೆ, ತನ್ನ ಆಸಕ್ತಿದಾಯಕ ವಿಷಯಗಳನ್ನು ಸಹೃದಯದವರೊಂದಿಗೆ ಹಂಚಿಕೊಳ್ಳುತ್ತಿದ್ದರು ಎಂದು ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಅವರು ಮರೆಯಲಾಗದ ಸಂಶೋಧಕ ದುರ್ಗ ಜಗದೀಶ ಕೃತಿಯನ್ನು ಮಂಜುನಾಥ ಐಲಿ ಪರಿಚಯಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ವೆಂಕಟೇಶ ಬೇವಿನಬೆಂಚಿವಹಿಸಿದರು.

ಕಾರ್ಯಕ್ರಮದಲ್ಲಿ ಕೃತಿಕಾರರಾದ ಲಕ್ಷ್ಮೀದೇವಿ ಶಾಸ್ತ್ರಿ, ಶರಣಮ್ಮ ದುರ್ಗಾ ಜಗದೀಶ್, ವಿಶ್ವನಾಥ ಶಾಸ್ತ್ರಿ ಸೇರಿದಂತೆ ಇತರರು ವೇದಿಕೆ ಮೇಲೆ ಇದ್ದರು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳಾದ ಅಯ್ಯಪಯ್ಯ ಹುಡಾ ,ಆಂಜನೇಯ ಜಾಲಿಬೆಂಚಿ, ರೇಖಾ ಬಡಿಗೇರ್, ಹಫೀಜುಲ್ಲಾ, ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಕೋಟೆ ಅಧ್ಯಯನ ಸಮಿತಿ ಸದಸ್ಯರು ಮತ್ತು ದುರ್ಗಾ ಜಗದೀಶ್ ಅವರ ಕುಟುಂಬ ಅಭಿಮಾನಿಗಳು ಇದ್ದರು. ಶ್ರೀದೇವಿ ದುರ್ಗ ಪ್ರಾರ್ಥಿಸಿದರು, ವೈಶಾಲಿ ಪಾಟೀಲ ನಿರೂಪಿಸಿದರು. ಡಾ. ಬಿ ವಿಜಯರಾಜೇಂದ್ರ ಸ್ವಾಗತಿಸಿದರು, ರಾವುತರಾವ್ ಬರೂರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X