ರಾಯಚೂರು | ದ್ವಿಚಕ್ರ ವಾಹನಕ್ಕೆ KSRTC ಬಸ್ ಢಿಕ್ಕಿ : ಓರ್ವ ಸ್ಥಳದಲ್ಲೇ ಮೃತ್ಯು

ಮಾನ್ವಿ: ತಾಲೂಕಿನ ಕಪಗಲ್ ಗ್ರಾಮದ ಹೊರ ವಲಯದ ಪೆಟ್ರೋಲ್ ಬಂಕ್ ಸಮೀಪ ರವಿವಾರ ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯಗಳಾಗಿವೆ.
ಮೃತರನ್ನು ರಾಮಮೂರ್ತಿ ನೀರಮಾನ್ವಿ (40) ಎಂದು ಗುರುತಿಸಲಾಗಿದೆ. ಬಂದೆನವಾಜ್ ಎಂಬವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ.
ದ್ವಿಚಕ್ರ ವಾಹನಕ್ಕೆ ರಸ್ತೆ ಡಿವೈಡರ್ ದಾಟುತ್ತಿದ್ದ ವೇಳೆ ಮಾನ್ವಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ಕುರಿತು ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




