Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಉತ್ಪಾದನಾ ವೆಚ್ಚದ ಅಧ್ಯಯನ...

ರಾಯಚೂರು | ಉತ್ಪಾದನಾ ವೆಚ್ಚದ ಅಧ್ಯಯನ ನಡೆಯಲಿ : ಡಾ.ಅಶೋಕ್ ದಳವಾಯಿ

ʼರೈತರ ಹಿತ ಚಿಂತನೆ ಸಂವಾದʼ

ವಾರ್ತಾಭಾರತಿವಾರ್ತಾಭಾರತಿ10 Jan 2025 10:14 PM IST
share
Photo of Program

ರಾಯಚೂರು : ಕೃಷಿ ಉತ್ಪಾದನೆಗಳ ಉತ್ಪಾದನಾ ವೆಚ್ಚವನ್ನು ಕೃಷಿ ವಿವಿಗಳ ಮೂಲಕ ಅಧ್ಯಯನ ಮಾಡಿ, ಸರಾಸರಿ ಉತ್ಪಾದನಾ ವೆಚ್ಚದ ಆಧಾರದ ಮೇಲೆ ರೈತರಿಗೆ ಸಿಗಬೇಕಾದ ಎಂಎಸ್ಪಿಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು ಕೃಷಿ ವೆಚ್ಚ ಮತ್ತು ಬೆಲೆ ಆಯೋಗದ ಧ್ಯೇಯವಾಗಿದೆ ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ.ಅಶೋಕ್ ಎಂ.ದಳವಾಯಿ ತಿಳಿಸಿದರು.

ನಗರದ ಕೃಷಿ ತಂತ್ರಜ್ಞಾನ ಸಂಸ್ಥೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತರ ಹಿತ ಚಿಂತನೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೃಷಿ ವೆಚ್ಚಕ್ಕೂ ಉತ್ಪಾದನಾ ವೆಚ್ಚಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಕೃಷಿ ವೆಚ್ಚವೆಂದರೇ ಒಂದು ಎಕರೆಗೆ ಎಷ್ಟು ಖರ್ಚಾಗುತ್ತದೆ ಎಂಬುವುದನ್ನು ತಿಳಿಸುತ್ತದೆ. ಈ ವೆಚ್ಚವು ಹಲವು ರಾಜ್ಯ ಹಾಗೂ ಜಿಲ್ಲೆಗಳಲ್ಲಿ ಆಯಾ ಪ್ರದೇಶದಲ್ಲಿರುವ ಕೂಲಿ, ಯಂತ್ರೋಪಕರಣಗಳ ವೆಚ್ಚಕ್ಕೆ ತಕ್ಕಂತೆ ವ್ಯತ್ಯಾಸಗಳನ್ನು ಹೊಂದಿರುತ್ತದೆ. ಆದರೆ ಎಂಎಸ್ಪಿ ಎಂಬುವುದು ಉತ್ಪಾದನಾ ವೆಚ್ಚದ ಮೇಲೆ ನಿರ್ಧಾರವಾಗಿದ್ದು, ಒಂದು ಕ್ವಿಂಟಲ್‌ಗೆ ಎಷ್ಟು ವೆಚ್ಚವಾಗುತ್ತದೆ ಎಂಬುದನ್ನು ತಿಳಿಸುತ್ತದೆ.

ಉತ್ಪಾದನಾ ವೆಚ್ಚದ ದೇಶದ ಸರಾಸರಿ ಪ್ರಮಾಣವನ್ನು ಗಣನೆಗೆ ತೆಗೆದುಕೊಳ್ಳುವುದರಿಂದ ಅನೇಕ ರಾಜ್ಯಗಳಲ್ಲಿರುವ ತಂತ್ರಜ್ಞಾನ, ವಾತಾವರಣ, ಇಳುವರಿ ಸೇರಿದಂತೆ ಇತರೆ ಕಾರಣಗಳಿಂದ ಪ್ರತಿಫಲಿಸುವುದಿಲ್ಲ. ಉತ್ಪಾದನಾ ವೆಚ್ಚ ಹೆಚ್ಚಿರುವ ರಾಜ್ಯಗಳಲ್ಲಿ ಎಂಎಸ್ಪಿ ರೈತರಿಗೆ ಲಾಭವಾಗುವುದಿಲ್ಲ ಎಂದರು.

ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಹನುಮಗೌಡ ಬೆಳಗುರ್ಕಿ ಮಾತನಾಡಿ, ರಾಜ್ಯದಲ್ಲಿ ಕೃಷಿ ವಲಯಕ್ಕೆ ಇಳುವರಿ ಹಾಗೂ ಬೆಲೆ ಗಂಡಾಂತರದಿಂದ ಹೊರಬಂದರೆ ಮಾತ್ರ ಕೃಷಿ ವಲಯ ಸಮೃದ್ಧವಾಗಿರುತ್ತದೆ. ಕೃಷಿ ವಲಯ ಹಾಗೂ ರೈತರಹಿತಕ್ಕಾಗಿ ಹಮ್ಮಿಕೊಂಡಿರುವ ಇಂದಿನ ಕಾರ್ಯಕ್ರಮದಲ್ಲಿ, ಜ್ಞಾನ, ಅನುಭವ, ಸಾಧನೆ ಹಾಗೂ ಸವಾಲುಗಳಿವೆ. ಕೃಷಿ ಬೆಲೆ ಆಯೋಗ ಎಂದರೆ ಕೇವಲ ಬೆಲೆ ಸಂಬಂಧಿಸಿದ ಆಯೋಗವಲ್ಲ. ಇದರಲ್ಲಿ ಕೃಷಿಯ ವಲಯಗಳಿಗೆ ಸಂಬಂಧಿಸಿದಂತೆ ಯಾವ ವಲಯಗಳಲ್ಲಿ ಯಾವ ಯಾವ ಬೆಲೆ ಬೆಳೆಯಬೇಕೆಂಬುವುದನ್ನು ಕೂಡ ಒಳಗೊಂಡಿದೆ ಎಂದರು.

ಐಎಸ್ಇಇ ದಕ್ಷಿಣ ವಲಯದ ಅಧ್ಯಕ್ಷ ಡಾ.ಜಿ.ಈಶ್ವರಪ್ಪ, ಕೃಷಿ ವಿವಿ ಬೆಂಗಳೂರಿನ ಮಾಜಿ ವಿಸ್ತರಣಾ ನಿರ್ದೇಶಕ ಡಾ.ವೀರಭದ್ರಯ್ಯ, ಕೃಷಿ ತಂತ್ರಜ್ಞರ ಸಂಸ್ಥೆ ಬೆಂಗಳೂರಿನ ಕಾರ್ಯದರ್ಶಿ ವೀರಣ್ಣ ಕಮತರ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಜಯಪ್ರಕಾಶ, ಕೃಷಿಕ ಸಮಾಜದ ಅಧ್ಯಕ್ಷ ಸಿದ್ಧಾರೆಡ್ಡಿ, ಕೃಷಿ ತಂತ್ರಜ್ಞರ ಸಂಸ್ಥೆಯ ಜಿಲ್ಲಾಧ್ಯಕ್ಷ ಆರ್.ಎ.ಪಾಟೀಲ್ ಸೇರಿದಂತೆ ಇತರರಿದ್ದರು.

ಈ ವೇಳೆ ಮೆಣಸಿನಕಾಯಿ ಬೆಳೆಗೆ ಬೆಂಬಲ ಬೆಲೆ, ತೊಗರಿ ಬೆಳೆಯನ್ನು ಗೋಡನ್ಗಳಲ್ಲಿ ಸಂಗ್ರಹಿಸಲು ಕ್ರಮ, ಬೀತ್ತನೆ ಬೀಜಗಳ ಉತ್ಪಾದನೆ ಹೆಚ್ಚಳಕ್ಕೆ ಕ್ರಮ, ನರ್ಸರಿ ಹಾಗೂ ರೈತರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ, ಭತ್ತಕ್ಕೆ ಉತ್ತಮ ಬೆಂಬಲ ಬೆಲೆ ನಿರ್ಧಾರ ಹಾಗೂ ಉತ್ತಮ ಮಾರುಕಟ್ಟೆಯ ವ್ಯವಸ್ಥೆ, ಕೆಳ ಭಾಗದ ರೈತರ ಹೊಲಗಳಿಗೆ ಸಮರ್ಪಕ ನೀರು ಒದಗಿಸಲು ಕ್ರಮದ ಕುರಿತು ವಿವಿಧ ರೈತರು ಆಯೋಗದ ಅಧ್ಯಕ್ಷರ ಜತೆ ಚರ್ಚಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X