Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಬಾಲಕಿಯ ಅತ್ಯಾಚಾರ ಖಂಡಿಸಿ...

ರಾಯಚೂರು | ಬಾಲಕಿಯ ಅತ್ಯಾಚಾರ ಖಂಡಿಸಿ ಬೃಹತ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ7 Feb 2025 3:48 PM IST
share
Photo of Protest

ರಾಯಚೂರು : ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಂಗುಡ್ಡಿ ಗ್ರಾಮದ ಬಾಲಕಿಯ ಅತ್ಯಾಚಾರ ಘಟನೆ ಖಂಡಿಸಿ ಮಾನ್ವಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರಗತಿಪರ, ದಲಿತಪರ, ವಿದ್ಯಾರ್ಥಿಪರ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಮಾನ್ವಿ ತಾಲೂಕಿನ ಪೋತ್ನಾಳ ಗ್ರಾಮದ ಮುದ್ದಂಗುಡ್ಡಿ ಬಾಲಕಿಯ ಮೇಲಿನ ಮೇಲೆ ಪೈಶಾಚಿಕ ಕೃತ್ಯ ನಡೆದಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ರಾಜ್ಯದಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಕಲ್ಕತ್ತಾ, ದೆಹಲಿ, ಬಿಹಾರ, ಉತ್ತರಪ್ರದೇಶ ಹೀಗೆ ಹಲವೆಡೆ ಅತ್ಯಾಚಾರ ಪ್ರಕರಣ ಘಟನೆಗಳು ಬೆಳಕಿಗೆ ಬರುತ್ತಿದ್ದವು, ರಾಜ್ಯದಲ್ಲಿ ಘಟನೆಗಳನ್ನು ಖಂಡಿಸಿ ಪ್ರತಿಭಟಿಸಿದ್ದೇವೆ. ಆ ಘಟನೆಗಳು ಮಾಸುವ ಮುನ್ನವೇ ರಾಜ್ಯದಲ್ಲಿ ಇಂತಹ ಘಟನೆಗಳು ದಿನೇ ದಿನೇ ಹೆಚ್ಚುತ್ತಿವೆ. ಅತ್ಯಾಚಾರಿಗಳನ್ನು ಬಂಧಿಸುವ ಬದಲು ಎನ್ಕೌಂಟರ್ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರಶಾಂತ ಜಾಗೀರ್ ಪನ್ನೂರು ಮಾತನಾಡಿ, ತಾಲೂಕಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ನಾಯಿಕೊಡೆಯಂತೆ ತಲೆ ಎತ್ತಿದ್ದು, ಆದರೆ ಸರಕಾರದ ಸುತ್ತೋಲೆಗಳ ಪ್ರಕಾರ ಶಿಕ್ಷಣ ಸಂಸ್ಥೆಗಳನ್ನು ನಡೆಸದೇ ಬೇಕಾಬಿಟ್ಟಿಯಾಗಿ ಶಾಲೆಗಳನ್ನು ನಡೆಸುತ್ತಿದ್ದಾರೆ. ಅತ್ಯಾಚಾರಕ್ಕೆ ಪರೋಕ್ಷವಾಗಿ ಕಾರಣರಾದ ಶಾಲೆಯ ಮುಖ್ಯಸ್ಥ ರಾಜು ತಾಳಿಕೋಟಿ ಇವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

ಜನಸೇವಾ ಫೌಂಡೇಶನ್ ಅಧ್ಯಕ್ಷ ಜಾವೀದ್ ಖಾನ್ ಮಾತನಾಡಿ, ಕಳೆದ ವಾರ ಸಿಂಧನೂರಿನಲ್ಲಿ ಒಂದು ಕಾಲೇಜು ವಿದ್ಯಾರ್ಥಿನಿಗೆ ಒಬ್ಬ ಕಾಮುಕ ಕತ್ತು ಕೊಯ್ದು ಕೊಲೆ ಮಾಡಿದ್ದ ಅದು ಮಾಸುವ ಮುನ್ನವೇ ನಮ್ಮ ಮಾನವಿ ತಾಲೂಕಿನಲ್ಲಿ ಇಂತ ಘಟನೆ ನಡೆದಿದೆ, ಇದಕ್ಕೆ ಕಾರಣರಾದ ಶಿವನಗೌಡ ಕಂದೆ ಲಿಂಗಪ್ಪಗೌಡ ಮುದ್ದಂಗುದ್ದಿ ಹಾಗೂ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದರು.

ರೈತ ಸಂಘದ ತಾಲೂಕು ಅಧ್ಯಕ್ಷ ಹೊಳೆಯಪ್ಪ ಊಟಕನೂರ್ ಮಾತನಾಡಿ, ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯ ಪರವಾನಿಗೆಯನ್ನು ರದ್ದು ಪಡಿಸಬೇಕು ಹಾಗೂ ಆತ್ಯಾಚಾರಕ್ಕೆ ಒಳಗಾಗಿರುವ ಮಗುವಿಗೆ ಶಿಕ್ಷಣ ಸಂಸ್ಥೆಯಿಂದ 25 ಲಕ್ಷ ರೂ.ಗಳನ್ನು ಪರಿಹಾರವಾಗಿ ಕೊಡಬೇಕು, ಸರ್ಕಾರದಿಂದ ಅತ್ಯಾಚಾರಕ್ಕೆ ಒಳಗಾದ ಮಗುವಿಗೆ 1ಕೋಟಿ ರೂ. ಪರಿಹಾರ ಕಲ್ಪಿಸಿಕೊಟ್ಟು, ಮಗುವಿಗೆ ಮುಂದಿನ ದಿನಗಳಲ್ಲಿ ಸರಕಾರಿ ಕೆಲಸ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ರಾಜು ಸಂಗಪ್ಪ ಪಿರಂಗಿ ಹಾಗೂ ಗ್ರೇಡ್-2 ತಹಶೀಲ್ದಾರ್ ಅಬ್ದುಲ್ ವಾಹಿದ್ ಮನವಿ ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಫಾದರ್ ಡಾನ್ ಪ್ರೇಮ್ ಲೋಬೊ, ದಲಿತ ಹೋರಾಟಗಾರರಾದ ಲಕ್ಷ್ಮಣ್ ಜಾನೇಕಲ್, ಆಕಾಶ್ ಮ್ಯಾಕ್ಸಿ, ಆಂಜನೇಯ ನಸಲಾಪುರ್, ಪಂಪಾಪತಿ, ಹಡಪದ, ರಮೇಶ ನಾಯಕ್, ಪ್ರಭು, ಚಂದ್ರು ಜಗ್ಗಿ ಸಂಗಾಪುರ್ ಸೇರಿದಂತೆ ಎಲ್ಲಾ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X