ರಾಯಚೂರು | ಸಿಡಿಲಿನಿಂದ ಮೃತಪಟ್ಟ ಕುಟುಂಬದವರಿಗೆ ಶಾಸಕರಿಂದ ಸಾಂತ್ವನ : 5 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

ರಾಯಚೂರು: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ಧಲ್ ಅವರು ಆ.15ರಂದು ರಾಯಚೂರು ಗ್ರಾಮೀಣ ಕ್ಷೇತ್ರ ವ್ಯಾಪ್ತಿಯ ಯರಗೇರಾ ಗ್ರಾಮಕ್ಕೆ ಭೇಟಿ ನೀಡಿದರು.
ಗ್ರಾಮದ ಭವಾನಿ ಕುಟುಂಬದವರ ಮನೆಗೆ ತೆರಳಿ, ಸಿಡಿಲು ಬಡಿದು ಮೃತಪಟ್ಟ ಭವಾನಿ ಕುಟುಂಬದವರಿಗೆ ಶಾಸಕರು ಇದೆ ವೇಳೆ ಸಾಂತ್ವನ ಹೇಳಿದರು. ಕುಟುಂಬದ ಭವಾನಿ ಗಂಡ ನಾಗರಾಜ ಯರಗೇರಾ ಅವರಿಗೆ ಇದೆ ವೇಳೆ ಶಾಸಕರು 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರು, ಗ್ರಾಮದ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮ ನಿರ್ದೇಶಿತ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.
Next Story





