Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. 208 ಕಳ್ಳತನ ಪ್ರಕರಣ ಭೇದಿಸಿದ ರಾಯಚೂರು...

208 ಕಳ್ಳತನ ಪ್ರಕರಣ ಭೇದಿಸಿದ ರಾಯಚೂರು ಪೊಲೀಸರು : 4.02 ಕೋಟಿ ರೂ. ಮೌಲ್ಯದ ಸ್ವತ್ತು ಮಾಲಕರಿಗೆ ಹಸ್ತಾಂತರ

ವಾರ್ತಾಭಾರತಿವಾರ್ತಾಭಾರತಿ29 July 2026 5:10 PM IST
share
208 ಕಳ್ಳತನ ಪ್ರಕರಣ ಭೇದಿಸಿದ ರಾಯಚೂರು ಪೊಲೀಸರು : 4.02 ಕೋಟಿ ರೂ. ಮೌಲ್ಯದ ಸ್ವತ್ತು ಮಾಲಕರಿಗೆ ಹಸ್ತಾಂತರ

ರಾಯಚೂರು : ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣಗಳನ್ನು ಭೇದಿಸಿದ ಪೊಲೀಸರು, ಆರೋಪಿಗಳಿಂದ ವಶಪಡಿಸಿಕೊಂಡ ಸುಮಾರು 4.02 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ಮೂಲ ಮಾಲಕರಿಗೆ ಹಸ್ತಾಂತರಿಸಿದರು.

2026ರ ಜ.1ರಿಂದ ಜೂ.30ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 208 ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, 4,02,61,421 ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು ಕಾನೂನುಬದ್ಧ ಪ್ರಕ್ರಿಯೆ ಪೂರ್ಣಗೊಳಿಸಿದ ಬಳಿಕ ಮಾಲೀಕರಿಗೆ ಹಿಂತಿರುಗಿಸಲಾಗಿದೆ.

ದರೋಡೆ, ಸರಗಳ್ಳತನ, ಮನೆ ಕಳ್ಳತನ, ವಾಹನ ಕಳವು ಹಾಗೂ ಜಾನುವಾರು ಕಳವು ಸೇರಿದಂತೆ ವಿವಿಧ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದು, ಚಿನ್ನಾಭರಣ, ಬೆಳ್ಳಿಯಾಭರಣ, ನಗದು, ನಾಲ್ಕು ಚಕ್ರ ಹಾಗೂ ದ್ವಿಚಕ್ರ ವಾಹನಗಳು, ಲ್ಯಾಪ್‌ಟಾಪ್, ಮೊಬೈಲ್ ಫೋನ್‌ಗಳು, ಕಾಪರ್ ವೈರ್, ಬ್ಯಾಟರಿಗಳು ಸೇರಿದಂತೆ ವಿವಿಧ ಮೌಲ್ಯದ ವಸ್ತುಗಳನ್ನು ಪತ್ತೆಹಚ್ಚಲಾಗಿದೆ.

ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ. ಹರ್ಷ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ, ನ್ಯಾಯಾಲಯದ ಅನುಮತಿ ಪಡೆದು ಸಂಬಂಧಪಟ್ಟ ದೂರುದಾರರು ಹಾಗೂ ವಾರಸುದಾರರಿಗೆ ಸ್ವತ್ತುಗಳನ್ನು ಹಸ್ತಾಂತರಿಸಲಾಯಿತು.

24 ಗಂಟೆಯಲ್ಲೇ ಕಾರು ದರೋಡೆ ಪ್ರಕರಣ ಭೇದನೆ :

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕ ಡಾ. ಹರ್ಷ ಪಿ.ಎಸ್., ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ 15.13 ಲಕ್ಷ ರೂ. ಮೌಲ್ಯದ ಕಾರು ದರೋಡೆ ಪ್ರಕರಣವನ್ನು ಕೇವಲ 24 ಗಂಟೆಯೊಳಗೆ ಭೇದಿಸಿ ಐವರು ಆರೋಪಿಗಳನ್ನು ಬಂಧಿಸಿ ಸಂಪೂರ್ಣ ಕಳುವಿನ ಮಾಲನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಯಾಪಲದಿನ್ನಿ, ಮಾನ್ವಿ, ಬಳಗಾನೂರು, ಸಿಂಧನೂರು, ಲಿಂಗಸುಗೂರು ಹಾಗೂ ರಾಯಚೂರು ಪಶ್ಚಿಮ ಪೊಲೀಸ್ ಠಾಣೆಗಳ ಅಧಿಕಾರಿಗಳು ಸಿಸಿ ಕ್ಯಾಮೆರಾ ದೃಶ್ಯಾವಳಿ, ಬೆರಳಚ್ಚು, ಟೋಲ್‌ಗೇಟ್ ಮಾಹಿತಿ ಸೇರಿದಂತೆ ಅತ್ಯಾಧುನಿಕ ತಾಂತ್ರಿಕ ತನಿಖೆಯ ನೆರವಿನಿಂದ ಹಲವು ಗಂಭೀರ ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ ಎಂದರು.

ಸೈಬರ್ ಅಪರಾಧಗಳ ವಿರುದ್ಧವೂ ಪರಿಣಾಮಕಾರಿ ಕಾರ್ಯಾಚರಣೆ ನಡೆಸಲಾಗಿದ್ದು, 42.43 ಲಕ್ಷ ರೂ. ಗೂ ಅಧಿಕ ಹಣವನ್ನು ಸಂತ್ರಸ್ತರಿಗೆ ಮರಳಿಸಲಾಗಿದೆ. ಅಲ್ಲದೆ, ಕೇಂದ್ರ ಸರ್ಕಾರದ CEIR ಪೋರ್ಟಲ್ ಮೂಲಕ ಪತ್ತೆಯಾದ 77 ಕಳೆದುಹೋದ ಮೊಬೈಲ್ ಫೋನ್‌ಗಳನ್ನು ಸಹ ಅವುಗಳ ಮಾಲೀಕರಿಗೆ ಹಸ್ತಾಂತರಿಸಲಾಗಿದೆ.

ಅಪರಾಧ ನಿಯಂತ್ರಣ ಹಾಗೂ ಸಾರ್ವಜನಿಕರ ಆಸ್ತಿ ರಕ್ಷಣೆಗೆ ಜಿಲ್ಲಾ ಪೊಲೀಸ್ ಇಲಾಖೆ ಬದ್ಧವಾಗಿದ್ದು, ಮುಂದೆಯೂ ಇದೇ ರೀತಿಯ ಪರಿಣಾಮಕಾರಿ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅವರು ಹೇಳಿದರು.

ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣಾಂಗ್ಶು ಗಿರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಾಂತವೀರ, ಪಶ್ಚಿಮ ಪೊಲೀಸ್ ಠಾಣೆಯ ಸಿಪಿಐ ಉಮೇಶ್ ಕಾಂಬ್ಳೆ, ಪಿಎಸ್ಐ ಮಂಜುನಾಥ ಸೇರಿದಂತೆ ವಿವಿದ ಠಾಣೆಯ ಪೊಲೀಸ್‌‌ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Tags

theft casespoliceRaichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X