Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ...

ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ : ಕಥೆ–ಕವನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ29 Jun 2026 7:42 PM IST
share
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ : ಕಥೆ–ಕವನ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ಘೋಷಣೆ

ರಾಯಚೂರು: ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಪತ್ರಕರ್ತರ ಕಥೆ ಹಾಗೂ ಕವನ ಸ್ಪರ್ಧೆಯ ಫಲಿತಾಂಶವನ್ನು ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್ ಪ್ರಕಟಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರಿಂದ ಸ್ಪರ್ಧೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಆಯ್ಕೆಯಾದ ಕೃತಿಗಳು ಸಾಹಿತ್ಯ ಮತ್ತು ಪತ್ರಿಕೋದ್ಯಮದ ಸೃಜನಶೀಲತೆಯನ್ನು ಅನಾವರಣಗೊಳಿಸಿವೆ ಎಂದು ತಿಳಿಸಿದರು.

ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ಚಿತ್ರದುರ್ಗದ ಪ್ರಜಾವಾಣಿ ಪತ್ರಿಕೆಯ ಸಹಾಯಕ ವರದಿಗಾರ ಕೆ.ಪಿ. ಓಂಕಾರಮೂರ್ತಿ ಅವರ “ಡೆಡ್ ಲೈನ್” ಕಥೆ ಪ್ರಥಮ ಸ್ಥಾನ ಪಡೆದಿದೆ. ಮೈಸೂರಿನ ದಿ ಟೈಮ್ಸ್ ಆಫ್ ಇಂಡಿಯಾ ವಿಶೇಷ ವರದಿಗಾರ ಶ್ರೀನಿವಾಸ ಎಂ. ಅವರ “ನಿಧನ ವಾರ್ತೆ” ಕಥೆಗೆ ದ್ವಿತೀಯ ಹಾಗೂ ಉದಯವಾಣಿ ರಾಯಚೂರು ಹಿರಿಯ ಜಿಲ್ಲಾ ವರದಿಗಾರ ಸಿದ್ದಯ್ಯಸ್ವಾಮಿ ಕುಕನೂರು ಅವರ “ಪ್ರೆಸಿಡೆಂಟ್ ಶಂಕ್ರ” ಕಥೆಗೆ ತೃತೀಯ ಸ್ಥಾನ ಲಭಿಸಿದೆ.

ತೀರ್ಪುಗಾರರ ವಿಶೇಷ ಮೆಚ್ಚುಗೆಗೆ ಪ್ರಜಾವಾಣಿಯ ಡಾ. ಶರಣಪ್ಪ ಅನಾಹೊಸೂರು ಅವರ “ನಮ್ಮ ಹುಡು”, ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ನ ಬಸವರಾಜ ಭೋಗಾವತಿ ಅವರ “ಕಪ್ಪು ಬಣ್ಣದ ಬೂಟು” ಹಾಗೂ ಉದಯವಾಣಿಯ ಹಿರಿಯ ಉಪಸಂಪಾದಕ ಅನಿಲ್ ಕುಮಾರ ಕೈರಂಗಳ ಅವರ “ಹಪ್ಪಳ ಸ್ವಾಮಿ” ಕಥೆಗಳು ಪಾತ್ರವಾಗಿವೆ.

ರಾಜ್ಯ ಮಟ್ಟದ ಕವನ ಸ್ಪರ್ಧೆಯಲ್ಲಿ ಶ್ರೀನಿವಾಸ ಎಂ. ಅವರ “ಮುಸ್ಸಂಜೆಯ ಕಥೆಗಳು” ಕವನ ಪ್ರಥಮ ಸ್ಥಾನ ಪಡೆದಿದೆ. ಹಿರಿಯ ಪತ್ರಕರ್ತ ಶಂಕರ ಪಾಗೋಜಿ ಅವರ “ಧರ್ಮ ಧಳ್ಳುರಿ” ಹಾಗೂ ಬಿಟಿವಿ ರಾಯಚೂರು ಜಿಲ್ಲಾ ವರದಿಗಾರ ಚಂದಪ್ಪ ದೊರನಹಳ್ಳಿ ಅವರ “ಹೆತ್ತವ್ವನ ಸೆರಗಿನ ಚಪ್ಪರ” ಕವನಗಳು ಜಂಟಿಯಾಗಿ ದ್ವಿತೀಯ ಸ್ಥಾನ ಪಡೆದಿವೆ. ಕೊಪ್ಪಳ ಜಿಲ್ಲೆಯ ಉಮಾಶಂಕರ ಹಿರೇಮಠ ಯಲಬುರ್ಗಾ ಅವರ “ಅಂಧಭಕ್ತರು” ಕವನ ತೃತೀಯ ಸ್ಥಾನ ಗಳಿಸಿದೆ.

ಕವನ ವಿಭಾಗದಲ್ಲಿ ಭೀಮಸೇನರಾವ್ ಕೆ. ಕುಲಕರ್ಣಿ ವಾರ್ ಅವರ “ನಾಡದೇವಿ ನಿನ್ನ ನೆನೆದು”, ಅನಿಲ್ ಕುಮಾರ ಕೈರಂಗಳ ಅವರ “ಭಾವುಕರಾಗುವ ಮುನ್ನ” ಹಾಗೂ ಬಸವರಾಜ ಕೆ.ಜಿ. ದಾವಣಗೆರೆ ಅವರ “ಸಾವೇ ಇಲ್ಲದ ಪ್ರೀತಿಗಾಗಿ” ಕವನಗಳು ತೀರ್ಪುಗಾರರ ಮೆಚ್ಚುಗೆಗೆ ಪಾತ್ರವಾಗಿವೆ.

ಕಥಾ ಸ್ಪರ್ಧೆಯ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳು ಕ್ರಮವಾಗಿ ₹10,000, ₹7,000 ಹಾಗೂ ₹3,000 ಆಗಿದ್ದು, ಕವನ ಸ್ಪರ್ಧೆಯ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳು ಕ್ರಮವಾಗಿ ₹5,000, ₹3,000 ಹಾಗೂ ₹2,000 ನಿಗದಿಪಡಿಸಲಾಗಿದೆ. ತೀರ್ಪುಗಾರರ ಮೆಚ್ಚುಗೆ ಪಡೆದ ಪ್ರತಿಯೊಂದು ಕಥೆ ಹಾಗೂ ಕವನಕ್ಕೂ ₹1,000 ನಗದು ಬಹುಮಾನ ನೀಡಲಾಗುವುದು ಎಂದು ವಿಜಯ ಜಾಗಟಗಲ್ ತಿಳಿಸಿದರು.

ಖ್ಯಾತ ಕಥೆಗಾರ ಮಹಾಂತೇಶ ನವಲಕಲ್ ಕಥಾ ವಿಭಾಗದ ತೀರ್ಪುಗಾರರಾಗಿ ಹಾಗೂ ಹಿರಿಯ ಪತ್ರಕರ್ತ-ಕವಿ ತುರುವೀಹಾಳ ಚಂದ್ರು ಕವನ ವಿಭಾಗದ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದ್ದಾರೆ.

ಸ್ಪರ್ಧೆಯ ವಿಜೇತರಿಗೆ ಆಗಸ್ಟ್ ತಿಂಗಳ ಕೊನೆಯ ವಾರದಲ್ಲಿ ನಡೆಯಲಿರುವ ರಾಯಚೂರು ರಿಪೋರ್ಟರ್ಸ್ ಗಿಲ್ಡ್‌ನ ಬೆಳ್ಳಿ ಮಹೋತ್ಸವ ಸಮಾರಂಭದಲ್ಲಿ ಬಹುಮಾನ ಪ್ರದಾನ ಮಾಡಿ ಗೌರವಿಸಲಾಗುವುದು. ಅಲ್ಲದೆ, ಪ್ರಶಸ್ತಿ ವಿಜೇತ ಹಾಗೂ ಆಯ್ಕೆಯಾದ ಇತರೆ ಉತ್ತಮ ಕಥೆ-ಕವನಗಳನ್ನು ಸಂಕಲಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೊಷ್ಟಿಯಲ್ಲಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ಹೂಗಾರ್, ಜಂಟಿ ಕಾರ್ಯದರ್ಶಿ ಶ್ರೀಕಾಂತ್ ಸಾವೂರ್, ಕಾರ್ಯಕರ್ಣಿ ಸದ್ಯಸರಾದ ಚನ್ನಬಸವ ಬಾಗಲವಾಡ, ಖಾನ್ ಸಾಬ್ ಮೊಮೀನ್, ಆನಂದ್ ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X