ರಾಯಚೂರು | ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಮನವಿ
ರಾಯಚೂರು : ಜಿಲ್ಲೆಯ ನೂರಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯ ಕೊರತೆ ಹಾಗೂ ರಕ್ತ ಹೀನತೆ ಹಾಗೂ ಅಪೌಷ್ಟಿಕತೆ ಮುಕ್ತಗೊಳಿಸಿ ಸರಕಾರ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು ಎಂದು ರಾಜ್ಯ ಮಹಿಳಾ ಒಕ್ಕೂಟ ವತಿಯಿಂದ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಸಲ್ಲಿಸಿದರು.
ರಾಜ್ಯ ಮಹಿಳಾ ಒಕ್ಕೂಟವು ರಾಯಚೂರು ಜಿಲ್ಲೆಯ ಸುಮಾರು 100 ಕ್ಕಿಂತ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಸಮೀಕ್ಷೆ ಮಾಡಿದೆ. ಈ ಜಿಲ್ಲೆಯನ್ನು ರಕ್ತಹೀನತೆ ಮತ್ತು ಅಪೌಷ್ಟಿಕತೆಯಿಂದ ಮುಕ್ತಗೊಳಿಸಲು ನಾವು ಕಳೆದ 3 ವರ್ಷಗಳಿಂದ ಅಭಿಯಾನವನ್ನು ನಡೆಸುತ್ತಿದ್ದೇವೆ ಆದರೆ ಸರಕಾರ ಮುಕ್ತಗೊಳಿಸಲು ಯಾವುದೇ ಸಹಕರಿಸುತ್ತಿಲ್ಲ ಎಂದು ಆರೋಪಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಸುಸಜ್ಜಿತ ಕಟ್ಟಡಗಳಿಲ್ಲ, ಹೆಚ್ಚು ಅಂಗನವಾಡಿ ಕೇಂದ್ರಗಳು ಖಾಸಗಿ ಕಟ್ಟಡದಲ್ಲಿ ನಡೆಯುತ್ತಿವೆ. ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಇಲ್ಲದೆ ಅಂಗನವಾಡಿ ಕೇಂದ್ರಗಳು ಅಸ್ವಚ್ಛತೆಯಿಂದ ಕೂಡಿವೆ ಎಂದು ಆಗ್ರಹಿಸಿದರು.
ಕೂಡಲೇ ಸರಕಾರ ಅಂಗನವಾಡಿ ಕೇಂದ್ರಗಳನ್ನು ಬಲಪಡಿಸಬೇಕು ಹಾಗೂ ಮೂಲಭೂತ ಸೌಕರ್ಯ ಒದಗಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಒತ್ತಾಯಿಸಿದರು.
ಈ ವೇಳೆ ಗುರುರಾಜ, ವಿದ್ಯಾ ಪಾಟೀಲ್, ಚಂದ್ರಕಲಾ, ಮಲ್ಲಮ್ಮ, ಹನುಮೇಶ್, ಸಾವಿತ್ರಮ್ಮ, ರೇಣುಕಾ , ರಾಧಾ , ಬಸಮ್ಮ ಉಡುಮ ಗಲ್, ಇನ್ನಿತರರು ಹಾಜರಿದ್ದರು.