Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. Raichur | ಹರವಿ, ಹಿರೇಹಣಗಿ, ಕವಿತಾಳ...

Raichur | ಹರವಿ, ಹಿರೇಹಣಗಿ, ಕವಿತಾಳ ಪಟ್ಟಣಕ್ಕೆ ಉಜ್ವಲ್ ಕುಮಾರ ಭೇಟಿ; ಕಾಮಗಾರಿಗಳ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ7 Sept 2026 8:25 PM IST
share
Raichur | ಹರವಿ, ಹಿರೇಹಣಗಿ, ಕವಿತಾಳ ಪಟ್ಟಣಕ್ಕೆ ಉಜ್ವಲ್ ಕುಮಾರ ಭೇಟಿ; ಕಾಮಗಾರಿಗಳ ಪರಿಶೀಲನೆ

ರಾಯಚೂರು : ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವಾಣಿಜ್ಯ ವಿಭಾಗದ ಜಂಟಿ ಕಾರ್ಯದರ್ಶಿ ಹಾಗೂ ಸಂಪೂರ್ಣತಾ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಜಿಲ್ಲಾ ಪ್ರಭಾರಿ ಉಜ್ವಲ್ ಕುಮಾರ್ ಘೋಷ್ ಅವರು ಸೋಮವಾರ ಸಿರವಾರ ತಾಲ್ಲೂಕಿನ ಹರವಿ, ಹಿರೇಹಣಗಿ ಮತ್ತು ಕವಿತಾಳಕ್ಕೆ ಭೇಟಿ ನೀಡಿ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನವನ್ನು ಪರಿಶೀಲಿಸಿದರು.

ಮೊದಲಿಗೆ ಹರವಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಗರ್ಭಿಣಿಯರು ಹಾಗೂ ಗ್ರಾಮೀಣ ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನದಡಿ ಗರ್ಭಿಣಿಯರ ತಪಾಸಣೆ, ಹೆರಿಗೆ ಕೊಠಡಿ, ವಾರ್ಡ್, ಪ್ರಯೋಗಾಲಯ ಹಾಗೂ ದಾಖಲೆ ನಿರ್ವಹಣೆಯನ್ನು ಪರಿಶೀಲಿಸಿ, ಅಧಿಕ ರಕ್ತದೊತ್ತಡ ನಿಯಂತ್ರಣ ಕುರಿತು ಪರಿಣಾಮಕಾರಿ ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸುವಂತೆ ತಿಳಿಸಿದರು.

ಬಳಿಕ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಅಪೌಷ್ಟಿಕ ಮಕ್ಕಳ ಮೇಲ್ವಿಚಾರಣೆ, ಮೊಟ್ಟೆ ಹಾಗೂ ಪೌಷ್ಟಿಕ ಆಹಾರ ವಿತರಣೆ, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕಾಂಶ ಒದಗಿಸುವ ವ್ಯವಸ್ಥೆಯನ್ನು ಪರಿಶೀಲಿಸಿದರು. ಮಕ್ಕಳ ಹಾಜರಾತಿ ಹಾಗೂ ಅಂಗನವಾಡಿ ಕೇಂದ್ರದ ಮೂಲಸೌಕರ್ಯ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹರವಿಯಲ್ಲಿ ನಡೆಯುತ್ತಿರುವ ವಿಬಿಜಿ-ರಾಮ್ ಜಿ ಯೋಜನೆಯ ನಾಲಾ ಹೂಳೆತ್ತುವ ಕಾಮಗಾರಿಯನ್ನು ವೀಕ್ಷಿಸಿ, ಕೂಲಿಕಾರರೊಂದಿಗೆ ಸಂವಾದ ನಡೆಸಿದರು. ಉದ್ಯೋಗ ಖಾತ್ರಿ ಯೋಜನೆಯಡಿ ಪ್ರತಿ ಕುಟುಂಬಕ್ಕೆ 125 ದಿನಗಳ ಕೆಲಸ ನೀಡುವ ಉದ್ದೇಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸೂಚಿಸಿದರು. ಈ ವೇಳೆ ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ ಹಾಗೂ ಕಾಲುವೆ ಹೂಳೆತ್ತಲು ಯಂತ್ರ ಬಳಕೆಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.

ಹಿರೇಹಣಗಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮನೆ-ಮನೆಗೆ ನಳ ಸಂಪರ್ಕ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಪರಿಶೀಲಿಸಿ, ಗ್ರಾಮಸ್ಥರಿಂದ ಯೋಜನೆಯ ಅನುಷ್ಠಾನದ ಬಗ್ಗೆ ಮಾಹಿತಿ ಪಡೆದುಕೊಂಡರು.

ನಂತರ ಕವಿತಾಳದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಗಣಿತ ವಿಷಯ ಬೋಧನೆ ನಡೆಸಿದ ಅವರು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಬಿಸಿಯೂಟ, ಮೊಟ್ಟೆ ಹಾಗೂ ಹಾಲು ವಿತರಣೆ ಕುರಿತು ಮಾಹಿತಿ ಪಡೆದರು.

ಶಾಲೆಯ ಅಟಲ್ ಟಿಂಕರಿಂಗ್ ಲ್ಯಾಬ್ (ATL) ನಲ್ಲಿ ವಿದ್ಯಾರ್ಥಿಗಳು ಸಿದ್ಧಪಡಿಸಿದ್ದ ಸೆನ್ಸರ್, ಕ್ಯೂಆರ್ ಕೋಡ್, ಸ್ಮಾರ್ಟ್ ವಿದ್ಯಾಲಯ, ಮೆಕಾನಿಕಲ್ ಮಾದರಿಗಳು ಹಾಗೂ 3ಡಿ ಪ್ರಿಂಟರ್ ಯೋಜನೆಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ್ ಕಾಂದೂ, ಮುಖ್ಯ ಯೋಜನಾಧಿಕಾರಿ ಡಾ. ಟಿ. ರೋಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಂದಿತಾ ಎಂ.ಎನ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Raichur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X