Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ರಾಯಚೂರು | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ...

ರಾಯಚೂರು | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ19 Sept 2025 6:10 PM IST
share
ರಾಯಚೂರು | ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಆಕ್ರೋಶ

ರಾಯಚೂರು: ಕಳೆದ ಮೂರು ದಿನಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಪ್ರವಾಸ ಕೈಗೊಂಡಿದ್ದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಜಿಲ್ಲೆಯಲ್ಲಿ ಲಕ್ಷಾಂತರ ಸಮಸ್ಯೆಗಳಿದ್ದರೂ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ದೊರಕುತ್ತಿಲ್ಲವೆಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಮಹಿಳಾ ಸ್ಪಂದನಾ ಕಾರ್ಯಕ್ರಮ, ಮಹಿಳಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಮತ್ತು ಪೋಷಣಾ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ನಂತರ ಅವರು ಮಾತನಾಡಿದರು.

ಜನರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದಾಗ, ಸಂಬಂಧಿಸಿದ ಅಧಿಕಾರಿಗಳು ಸ್ಥಳದಲ್ಲೇ ಇರದೇ ಇದ್ದುದು ಕಂಡು ಅವರಿಗೆ ಆಕ್ರೋಶ ಹುಟ್ಟಿತು. ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ, ಎಲ್ಲೆಡೆ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಅಧಿಕಾರಿಗಳು ಇದ್ದರು. ಆದರೆ ರಾಯಚೂರಿನಲ್ಲಿ ಮೂರು ದಿನಗಳಿಂದ ಪ್ರವಾಸ ಮಾಡುತ್ತಿದ್ದರೂ, ಜಿಲ್ಲಾಧಿಕಾರಿ, ಜಿಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಯಾವುದೇ ಸ್ಪಂದನೆ ನೀಡಿಲ್ಲ. ಸಮಸ್ಯೆಗಳಿಗೆ ಉತ್ತರಿಸಬೇಕಾದವರು ಸಭೆಗೆ ಹಾಜರಾಗದೇ ಇರುವುದರಿಂದ ಸಭೆ ಮೊಟಕುಗೊಳಿಸುವ ಪರಿಸ್ಥಿತಿ ಎದುರಾಗಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಗೀತಾ ಎಂಬುವವರು ಆಸ್ತಿಗೆ ಇ-ಖಾತೆ ನೀಡಲು ಮೂರು ವರ್ಷಗಳಿಂದ ಪಾಲಿಕೆಯಲ್ಲಿ ಅಲೆದಾಡುತ್ತಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಬಗೆಹರಿದಿಲ್ಲವೆಂದು ನಾಗಲಕ್ಷ್ಮೀ ಚೌಧರಿ ಉದಾಹರಣೆ ನೀಡಿದರು. “ಕ್ಷಣಾರ್ಧದಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳೂ ಮೂರು-ನಾಲ್ಕು ವರ್ಷಗಳಿಂದ ಬಾಕಿ ಉಳಿಯುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರಕ್ಕೆ ವರದಿ ಕಳುಹಿಸಿ, ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಸಿಂಧನೂರು ತಾಲೂಕಿನ ಮುಕ್ಕುಂದ ಗ್ರಾಮದ ಮಹಿಳೆಯೊಬ್ಬರು ತಮ್ಮ ಅಹವಾಲಿನಲ್ಲಿ, ಇಬ್ಬರು ಅಂಧ ಮಕ್ಕಳಿದ್ದರೂ ಜೀವನೋಪಾಯಕ್ಕೆ ಯಾವುದೇ ನೆರವು ದೊರಕುತ್ತಿಲ್ಲವೆಂದು ತಿಳಿಸಿದರು. ಅಂಗನವಾಡಿ ಸಹಾಯಕ ಹುದ್ದೆಗೆ ಅನುಕಂಪ ಆಧಾರದ ಮೇಲೆ ಅರ್ಜಿ ಸಲ್ಲಿಸಿದ್ದರೂ ತಿರಸ್ಕರಿಸಲಾಗಿದೆ. “ಮಕ್ಕಳನ್ನು ನೋಡಿಕೊಳ್ಳುವುದರ ಜೊತೆಗೆ ಕೂಲಿ ಕೆಲಸ ಮಾಡಬೇಕಾಗಿದೆ. ಊಟಕ್ಕೂ ತೊಂದರೆ ಆಗುತ್ತಿದೆ. ಗ್ರಾಮದಲ್ಲಿ ಯಾವುದಾದರೂ ಉದ್ಯೋಗದ ವ್ಯವಸ್ಥೆ ಮಾಡಿಸಬೇಕು” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನವೀನ್ ಕುಮಾರ, ಡಿಡಿಎಲ್‌ರ್ ಅಧಿಕಾರಿ ರೇಷ್ಮಾ, ಜಿಪಂ ಯೋಜನಾಧಿಕಾರಿ ಶರಣ ಬಸವ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X