Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಆರೆಸ್ಸೆಸ್ ನಿಂದ ದೇಶಕ್ಕೆ ಕೊಡುಗೆ ಶೂನ್ಯ...

ಆರೆಸ್ಸೆಸ್ ನಿಂದ ದೇಶಕ್ಕೆ ಕೊಡುಗೆ ಶೂನ್ಯ : ವಿಧಾನ ಪರಿಷತ್ ಸದಸ್ಯ ವಸಂತಕುಮಾರ

ವಾರ್ತಾಭಾರತಿವಾರ್ತಾಭಾರತಿ14 Oct 2025 1:44 PM IST
share
ಆರೆಸ್ಸೆಸ್ ನಿಂದ ದೇಶಕ್ಕೆ ಕೊಡುಗೆ ಶೂನ್ಯ : ವಿಧಾನ ಪರಿಷತ್ ಸದಸ್ಯ ವಸಂತಕುಮಾರ

ರಾಯಚೂರು: ಸರಕಾರಿ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆಗಳನ್ನು ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರೆದಿರುವ ಪತ್ರ ಸಮಾಂಜಸವಾಗಿದ್ದು, ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಹೇಳಿದರು.

ಅವರಿಂದು ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಆರೆಸ್ಸೆಸ್ ಈ ದೇಶದಲ್ಲಿ ಅನೇಕ ಕೋಮುಗಲಭೆ ಸೃಷ್ಟಿಗೆ ಕಾರಣವಾಗಿದೆ. ಹಿಂದೂ ರಾಷ್ಟ್ರ ನಿರ್ಮಾಣ ಮಾಡಬೇಕು ಎಂಬ ಅಜೆಂಡಾದಿಂದ ಆರೆಸ್ಸೆಸ್ ಸ್ಥಾಪನೆ ಆಗಿದೆ. ನೂರು ವರ್ಷ ಸಂಭ್ರಮಾಚರಣೆ ಮಾಡುತ್ತಿರುವ ಆರೆಸ್ಸೆಸ್ ನ ಕೊಡುಗೆ ಈ ದೇಶಕ್ಕೆ ಶೂನ್ಯ ಎಂದರು.

ಭಾರತ ಪ್ರಜಾಪ್ರಭುತ್ವ ದೇಶ. ಇಲ್ಲಿ ಎಲ್ಲಾ ಸಮಾಜದವರ ಭಾವನೆ ಒಂದೇ. ಆದರೆ ಆರೆಸ್ಸೆಸ್ ಮಾತ್ರ ಅನ್ಯ ಧರ್ಮದ ಹೆಸರಲ್ಲಿ ಸಮಾಜದ ಸ್ವಸ್ಥ ಹಾಳು ಮಾಡುತ್ತದೆ ಎಂದರು.

ಈ ದೇಶದ ಸ್ವತಂತ್ರ ಹೋರಾಟದಲ್ಲಿ ಆರೆಸ್ಸೆಸ್ ಪಾತ್ರವೇನು? ಆರೆಸ್ಸೆಸ್ ಈ ದೇಶದ ಯುವಜನತೆಯಲ್ಲಿ ವಿಷಬೀಜ ಬಿತ್ತುತ್ತಿದೆ. ಈ ಹಿನ್ನಲೆಯಲ್ಲಿ ತಮಿಳುನಾಡು ಸರ್ಕಾರ ಅಲ್ಲಿ ಆರೆಸ್ಸೆಸ್ ಅನ್ನು ಸರಕಾರಿ ಸ್ಥಳದಲ್ಲಿ ನಿಷೇಧ ಮಾಡಿದೆ. ಪ್ರಿಯಾಂಕ್‌ ಖರ್ಗೆ ಅವರು ಬರೆದ ಪತ್ರದ ಬಗ್ಗೆ ಬಿಜೆಪಿ ಪರಿಪೂರ್ಣವಾಗಿ ಅರಿತುಕೊಂಡು ಟೀಕೆ ಮಾಡಬೇಕು ಎಂದು ಕಿಡಿಕಾಡಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಅವರು ಧಮ್ಮು ತಾಕತ್ತು ಇದ್ದಾರೆ ಆರೆಸ್ಸೆಸ್ ನಿಷೇದ ಮಾಡುವಂತೆ ಹೇಳಿಕೆ ನೀಡಿರುವುದಾದರೆ. 1948 ರಲ್ಲಿ ವಲ್ಲಭಬಾಯಿ ಪಟೇಲ್, ಇಂದಿರಾ ಗಾಂಧಿ ಅವರು ತುರ್ತು ಪರಿಸ್ಥಿತಿಯಲ್ಲಿ ಆರೆಸ್ಸೆಸ್ ನಿಷೇಧ ಮಾಡಿದ್ದರು. ಈ ಬಗ್ಗೆ ಆರ್.ಅಶೋಕ್‌ ಅವರು ಪರಾಮರ್ಶೆ ಮಾಡಿಕೊಳ್ಳಬೇಕೆಂದು ಎಂದು ಹೇಳಿದರು.

1969ರಲ್ಲಿ ಕೋಮು ಗಲಭೆ, 1971ರಲ್ಲಿ ತಲಿಚೇರಿ ಗೋಮು ಗಲಭೆ, 1979 ಜೆಮ್ ಶೇಡ್ ಕೋಮು ಗಲಭೆ ಹಾಗೂ 1982 ಕನ್ಯಾಕುಮಾರಿನಲ್ಲಿ ಕ್ರಿಶ್ಚಿಯನ್ ಸಮುದಾಯದ ಮೇಲೆ ನಡೆದ ಕೋಮುಗಲಭೆಗೆ ಆರೆಸ್ಸೆಸ್ ಕಾರಣಿಭೂತಿಯಾಗಿದೆ ಎಂದು ದಾಖಲೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಅವರು ಆರೋಪಿಸಿದರು.

100 ವರ್ಷದ ಸಂಭ್ರಮದಲ್ಲಿ ಕೇವಲ ಇವರ ಸಾಧನೆ ಮಹಾತ್ಮ ಗಾಂಧಿ ಕೊಲೆ, ಬಾಬ್ರಿ ಮಸೀದಿ ಧ್ವಂಸ ಹಾಗೂ ಕೋಮುಗಲಭೆ ಸೃಷ್ಟಿಸುವುದು ಇವರ ನೂರು ವರ್ಷದ ಬಹುದೊಡ್ಡ ಸಾಧನೆಯ ಸಂಭ್ರಮ ಎಂದು ಟೀಕಿಸಿದರು.

ಈ‌ವೇಳೆ ಜಿಲ್ಲಾಧ್ಯಕ್ಷ ಬಸವರಾಜ ಪಾಟಿಲ ಇಟಗಿ, ಮಾಧ್ಯಮ ವಕ್ತಾರ ಡಾ.ರಜಾಕ್ ಉಸ್ತಾದ್, ಅಬ್ದುಲ್ ಕರೀಮ್, ಮತ್ತಿತರರು ಇದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X