Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ರಾಯಚೂರು
  4. ಮೋದಿ ಸರಕಾರವನ್ನು ಪ್ರಶ್ನಿಸಿದವರಿಗೆ...

ಮೋದಿ ಸರಕಾರವನ್ನು ಪ್ರಶ್ನಿಸಿದವರಿಗೆ ದೇಶದ್ರೋಹಿ ಪಟ್ಟ : ಶಿವಸುಂದರ್

ಸಿಂಧನೂರಿನಲ್ಲಿ 11ನೇ ಮೇ ಸಾಹಿತ್ಯ ಮೇಳ, ‘ಐಕ್ಯ ಚಳವಳಿ; ಯಾತಕ್ಕಾಗಿ, ಯಾರ ಜೊತೆ’ ಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ18 May 2025 10:13 PM IST
share
ಮೋದಿ ಸರಕಾರವನ್ನು ಪ್ರಶ್ನಿಸಿದವರಿಗೆ ದೇಶದ್ರೋಹಿ ಪಟ್ಟ : ಶಿವಸುಂದರ್

ಸಿಂಧನೂರು (ರಾಯಚೂರು), : ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದ್ದು, ಮೋದಿ ಸರಕಾರವನ್ನು ಪ್ರಶ್ನಿಸಿದವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತದೆ. ವಿರೋಧ ಪಕ್ಷದ ನಾಯಕರಿಗೆ ಪ್ರಶ್ನಿಸುವ ಧೈರ್ಯವಿಲ್ಲ ಎಂದು ಚಿಂತಕ ಶಿವಸುಂದರ್ ಹೇಳಿದ್ದಾರೆ.

ಸಿಂಧನೂರು ನಗರದ ಸತ್ಯಗಾರ್ಡನ್‌ನಲ್ಲಿ ಹಮ್ಮಿಕೊಂಡಿರುವ 11ನೇ ಮೇ ಸಾಹಿತ್ಯ ಮೇಳದ ಎರಡನೇ ದಿನವಾದ ರವಿವಾರ ನಡೆದ ‘ಐಕ್ಯ ಚಳವಳಿ; ಯಾತಕ್ಕಾಗಿ, ಯಾರ ಜೊತೆ’ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮೋದಿಯನ್ನು ಚುನಾವಣೆಯಲ್ಲಿ ಸೋಲಿಸಲು ಅಸಾಧ್ಯ ಎಂಬ ಭಾವನೆ ಹಲವರಲ್ಲಿದೆ. ಆದರೆ ಎಲ್ಲರನ್ನೂ ಒಳಗೊಂಡ ಐಕ್ಯ ಹೋರಾಟದಿಂದ ಅವರನ್ನು ಸೋಲಿಸಬಹುದು ಎಂದು ಅವರು ಹೇಳಿದರು.

ಇಂದಿರಾಗಾಂಧಿಯ ಸಂದರ್ಭದ ತುರ್ತುಪರಿಸ್ಥಿತಿ ವಿರುದ್ಧ ಹೋರಾಡಿದವರು ವೀರರೆನಿಸಿಕೊಂಡರು. ಈಗ ಸರಕಾರದ ವಿರುದ್ಧ ಹೋರಾಡುವವರನ್ನು ದೇಶದ್ರೋಹಿಗಳಂತೆ ಬಿಂಬಿಸುತ್ತಿರುವುದು ದುರಂತ. ಜರ್ಮನಿಯ ಹಿಟ್ಲರ್ ಫ್ಯಾಸಿಸಂ ಮಾದರಿಯಲ್ಲಿ ಭಾರತದ ಪ್ರಭುತ್ವ ಫ್ಯಾಸಿಸ್ಟ್ ನೀತಿ ಅನುಸರಿಸುತ್ತಿದ್ದು, ಇದನ್ನು ವಿರೋಧ ಪಕ್ಷಗಳಿಗೂ ಹಿಮ್ಮೆಟ್ಟಿಸಲು ಆಗುತ್ತಿಲ್ಲ. ಆಡಳಿತ ಪಕ್ಷ ಆರೆಸ್ಸೆಸ್ ಸಂಚಿಗೆ ಒಳಗಾಗಿದೆ ಎಂದು ಅವರು ಹೇಳಿದರು.

ಪುಲ್ವಾಮ ದಾಳಿಯ ಸಂದರ್ಭದಲ್ಲಿ ಸರಕಾರವನ್ನು ಗಟ್ಟಿ ಧ್ವನಿಯಲ್ಲಿ ವಿರೋಧಿಸದ ಫಲವಾಗಿ ಪಹಲ್ಗಾಮ್ ದಾಳಿ ನಡೆಯಿತು. ಆದರೆ ಈಗಲೂ ಆಡಳಿತ ವೈಫಲ್ಯದ ಬಗ್ಗೆ ಪ್ರಶ್ನಿಸಬೇಕಾಗಿದ್ದ ವಿರೋಧ ಪಕ್ಷಗಳು ಸುಮ್ಮನಿರುವುದು ದುರಂತ ಎಂದರು.

ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಮಾತನಾಡಿ, ದೇಶದಲ್ಲಿ ಅಸಮಾನತೆ ನಿವಾರಣೆ ಮಾಡಬೇಕಾದರೆ ಕಾರ್ಪೊರೇಟ್ ಮನೋಭಾವನೆಯ ಜನಪ್ರತಿನಿಧಿಗಳು ಸದನಗಳಲ್ಲಿ, ಸಂಸತ್‌ನಲ್ಲಿ ಇರಬಾರದು. ಭೂ ಸಂತ್ರಸ್ಥರು, ಸಾಮಾನ್ಯರು ಅಲ್ಲಿರಬೇಕು. ಬಿಜೆಪಿ, ಆರೆಸ್ಸೆಸ್‌ನವರು ದೇಶದಲ್ಲಿ ವಿಷಬೀಜ ಬಿತ್ತುತ್ತಿದ್ದಾರೆ ಎಂದರು.

ಸಿಪಿಐಎಂ ಕಲಬುರಗಿ ಜಿಲ್ಲಾ ಘಟಕದ ಕಾರ್ಯದರ್ಶಿ ಕೆ.ನೀಲಾ ಮಾತನಾಡಿ, ಕಾಂಗ್ರೆಸ್, ಬಿಜೆಪಿ ಭಿನ್ನವಾಗಿಲ್ಲ. ಅನೇಕರು ಮುಖವಾಡ ಧರಿಸಿದ್ದಾರೆ. ಚುನಾವಣೆ ವ್ಯವಸ್ಥೆಯಿಂದ ಫ್ಯಾಸಿಸಂನ್ನು ಸೋಲಿಸಲು ಸಾಧ್ಯವಿಲ್ಲ. ಕೋಮುವಾದ ಮತ್ತು ಮೂಲಭೂತವಾದ ಎರಡೂ ಜನಸಾಮಾನ್ಯರ ಹಿತಕ್ಕೆ ಮಾರಕವಾಗಿವೆ. ಕಾರ್ಮಿಕ, ಶೋಷಿತ ವರ್ಗ ಜಾಗೃತವಾಗಬೇಕು ಎಂದರು.

ರೈತ ಮುಖಂಡ ಚಾಮರಸ ಮಾಲಿ ಪಾಟೀಲ್, ಎಐಸಿಸಿಟಿಯು ರಾಜ್ಯ ಸಂಚಾಲಕ ಕ್ಲಿಪ್ಟನ್ ಡಿ.ರೊಝಾರಿಯೋ ಮಾತನಾಡಿದರು.

ನಾಗೇಗೌಡ ಕಿಲಾರ, ಪೀರ್ ಬಾಷಾ, ಅಮೀನ್ ಪಾಷಾ ದಿದ್ದಿಗಿ, ನಾಗರೆಡ್ಡಿ ದೇವರಮನಿ, ಬಸವಲಿಂಗಪ್ಪನಗನೂರು, ತಾಯಪ್ಪ, ಬಿ.ಕೆ.ಪೂಜಾರ್ ಉಪಸ್ಥಿತರಿದ್ದರು. ಕೆ.ಪಿ.ಸುರೇಶ್ ಗೋಷ್ಠಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X