ರಾಯಚೂರು ತಾಲ್ಲೂಕಿನ ವಿವಿಧ ಗ್ರಾ.ಪಂಗಳಿಗೆ ಜಿಲ್ಲಾ ಪಂಚಾಯತ್ ಸಿಇಒ ಭೇಟಿ

ರಾಯಚೂರು: ತಾಲ್ಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಜಲಬಂಡಾ ಗ್ರಾಮದ ಸಾಮಾಜಿಕ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿರುವ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕೆಲಸ ಮಾಡುತ್ತಿರುವ ಕೂಲಿಕಾರರ ಆರೋಗ್ಯದ ಹಿತದೃಷ್ಟಿಯಿಂದ ಕುಡಿಯುವ ನೀರು, ನೆರಳು ಹಾಗೂ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನು ಪಂಚಾಯಿತಿಯಿಂದ ಕಡ್ಡಾಯವಾಗಿ ಕಲ್ಪಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಪಿಡಿಒಗಳಿಗೆ ಸೂಚಿಸಿದರು.
ಅವರು ಇಂದು ಬಿಜನಗೇರಾ ಹಾಗೂ ಮಿಟ್ಟಿಮಲ್ಕಾಪುರ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.
ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿರುವ ಕೂಲಿಕಾರರಿಗೆ ಅಗತ್ಯ ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಹೇಳಿದರು.
ನಂತರ ಬಿಜನಗೇರಾ ಹಾಗೂ ಮಿಟ್ಟಿಮಲ್ಕಾಪುರ ಗ್ರಾಮಗಳಲ್ಲಿ ನಿರ್ಮಾಣವಾಗುತ್ತಿರುವ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ವೀಕ್ಷಿಸಿದರು.
ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಬೇಡಿಕೆ ವಹಿ, ಓಎಚ್ಟಿ ಟ್ಯಾಂಕ್ಗಳ ಪ್ರತಿ ತಿಂಗಳು ಸ್ವಚ್ಛತೆ, ಎಫ್ಟಿಕೆ ಕಿಟ್ ಮೂಲಕ ನೀರಿನ ಪರೀಕ್ಷೆಗಳನ್ನು ನಿಯಮಿತವಾಗಿ ನಡೆಸುವ ಬಗ್ಗೆ ಸೂಚನೆ ನೀಡಿದರು.
ತೆರಿಗೆ ವಸೂಲಾತಿ, ಕೆಲಸದ ಬೇಡಿಕೆ ಹಾಗೂ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.
ಜಲಜೀವನ ಮಿಷನ್ ಯೋಜನೆಯಡಿ ಮನೆಮನೆಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಬೇಕು ಎಂದು ನಿರ್ದೇಶನ ನೀಡಿದರು.
ಇದೇ ವೇಳೆ ನರೇಗಾ ಕೂಲಿಕಾರರೊಂದಿಗೆ ಚರ್ಚಿಸಿ, ಪ್ರತಿಯೊಬ್ಬರೂ ವಿಮೆ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ವೇಳೆ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಚಂದ್ರಶೇಖರ ಪವಾರ್, ಕಾರ್ಯನಿರ್ವಾಹಕ ಅಭಿಯಂತರು ನಿರ್ಮಿತ ಕೇಂದ್ರ ಶ್ರೀ ಮೊಹನ, ಸಹಾಯಕ ನಿರ್ದೇಶಕರು (ಗ್ರಾ.ಉ) ಶ್ರೀ ಹನುಮಂತ, ಸಹಾಯಕ ಅಭಿಯಂತರರು (ಗ್ರಾ.ಕು&ನೀ), ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಎಡಿಪಿಸಿ, ಡಿಎಮ್ಐಎಸ್, ಡಿಐಇಸಿ, ಟಿಸಿ, ಟಿಎ ಹಾಗೂ ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.






