Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಸಾಗರ: ಪ್ರೊ. ರಾಜೇಂದ್ರ ಚೆನ್ನಿ ಅವರಿಗೆ...

ಸಾಗರ: ಪ್ರೊ. ರಾಜೇಂದ್ರ ಚೆನ್ನಿ ಅವರಿಗೆ ರೆ|| ಫಾ. ಕಿಟೆಲ್ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ14 Jan 2024 3:05 PM IST
share
ಸಾಗರ: ಪ್ರೊ. ರಾಜೇಂದ್ರ ಚೆನ್ನಿ ಅವರಿಗೆ ರೆ|| ಫಾ. ಕಿಟೆಲ್ ಪ್ರಶಸ್ತಿ ಪ್ರದಾನ

ಸಾಗರ: ರೆ|| ಫಾ. ಕಿಟೆಲ್ ಸೂಕ್ಷ್ಮಮತಿ ಮತ್ತು ಸಾಮಾನ್ಯ ವ್ಯಕ್ತಿಯಾಗಿದ್ದರು. ಆ ಕಾಲದಲ್ಲಿ ಕನ್ನಡಿಗರು ವ್ಯವಹಾರಕ್ಕೆ ಬಳಸುತ್ತಿದ್ದ ಭಾಷೆ, ದೈನಂದಿನ ಬದುಕಿನಲ್ಲಿ ಬಳಕೆ ಮಾಡುತ್ತಿದ್ದ ಉಪ ಭಾಷೆಯನ್ನು ಗುರುತಿಸಿ ಅವರು ತಯಾರಿಸಿದ ನಿಘಂಟು ಒಂದು ಸಾಂಸ್ಕೃತಿಕ ಪಠ್ಯ ಇದ್ದಂತೆ ಎಂದು ಲೇಖಕ ಪ್ರೊ. ರಾಜೇಂದ್ರ ಚೆನ್ನಿ ಹೇಳಿದರು.

ಮಲೆನಾಡು ಸಿರಿ ಸಭಾಂಗಣದಲ್ಲಿ ಭಾನುವಾರ ಪರಸ್ಪರ ಸಾಹಿತ್ಯ ವೇದಿಕೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಅವರು ರೆ|| ಫಾ. ಕಿಟೆಲ್ ಪ್ರಶಸ್ತಿಯನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.

ಕ್ರೈಸ್ತ ಪಾದ್ರಿಗಳು ಕನ್ನಡ ಭಾಷೆ ಮತ್ತು ವಿದ್ವತ್ತಿಗೆ ನೀಡಿದ ಕೊಡುಗೆ ಅಪಾರವಾದದ್ದು. ಕನ್ನಡ ಸಾಹಿತ್ಯ ಪರಂಪರೆಯನ್ನು ಮುನ್ನಡೆಸುವಲ್ಲಿ ಅವರು ವಿವಿಧ ಹಂತದಲ್ಲಿ ತಮ್ಮದೇ ಕೊಡುಗೆ ನೀಡಿದ್ದಾರೆ. ಕಿಟೆಲ್ ಅವರು ಕನ್ನಡ ಭಾಷೆಗೆ ನೀಡಿದ ಕೊಡುಗೆ ಗಮನಾರ್ಹವಾದದ್ದು. ಕನ್ನಡ ಸಾಹಿತ್ಯ ಪರಂಪರೆಗೆ ತಮ್ಮದೇ ಕೃತಿಗಳನ್ನು ನೀಡುವ ಜೊತೆಗೆ ಅನೇಕ ಕೃತಿಗಳನ್ನು ಸಂಪಾದಿಸಿ ಕೊಟ್ಟಿದ್ದಾರೆ. ನಮ್ಮ ಶ್ರೀಮಂತ ಕಲೆ ಜಾನಪದದ ಬಗ್ಗೆ ಸಹ ಅವರು ಕೆಲಸ ಮಾಡಿದ್ದಾರೆ. ಅವರ ಹೆಸರಿನಲ್ಲಿ ಕೊಡುವ ಪ್ರಶಸ್ತಿ ಸ್ವೀಕರಿಸುತ್ತಿರುವುದು ನನಗೆ ಸಂತಸ ತಂದಿದೆ ಎಂದು ಹೇಳಿದರು.

ಸಾಹಿತ್ಯದ ಜೊತೆ ನಾವು ಪರಿಸರದ ಬಗ್ಗೆ ಸಹ ಗಮನ ಹರಿಸಬೇಕಾಗಿದೆ. ಪಶ್ಚಿಮಘಟ್ಟದ ಬಗ್ಗೆ ನಮ್ಮ ನಿರ್ಲಿಪ್ತತೆ ಸಹಿಸಲು ಸಾಧ್ಯವಿಲ್ಲ. ಅನೇಕ ಹೋರಾಟದ ನಡುವೆಯೂ ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕಳಿಸುತ್ತೇವೆ ಎನ್ನುವ ಚರ್ಚೆ ಪ್ರಾರಂಭವಾಗಿರುವುದು ದುರದೃಷ್ಟಕರ. ಅಭಿವೃದ್ದಿ ಎನ್ನುವ ಕೆಟ್ಟ ಕನಸು, ಹುಚ್ಚಿಗೆ ನಾವು ಬಲಿಪಶುವಾಗಿದ್ದೇವೆ. ಕನ್ನಡದ ವಿದ್ವತ್ ಸಂಪಾದನೆ ಜೊತೆಗೆ ಆಯಾ ಕಾಲದ ಸಾಂಸ್ಕೃತಿಕ, ಪರಿಸರ ಪ್ರಶ್ನೆಗೆ ಉತ್ತರ ಕಂಡು ಕೊಳ್ಳುತ್ತಾ ನಾವು ಮುನ್ನಡೆಯಬೇಕಾಗಿದೆ ಎಂದರು.

ಪರಸ್ಪರ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷ ಡಾ. ಜಿ.ಎಸ್.ಭಟ್ಟ ಮಾತನಾಡಿ, ಕನ್ನಡ ಸಾಹಿತ್ಯ ಕ್ಷೇತ್ರದ ಅಭಿವೃದ್ದಿಗೆ ಹಲವರು ನೀಡಿದ ಕೊಡುಗೆ ಸ್ಮರಣೀಯವಾದದ್ದು. ನಮ್ಮ ಆಡುಭಾಷೆ ಅತ್ಯಂತ ಸೊಗಸು. ಕನ್ನಡದಲ್ಲಿ ಉಪ ಭಾಷೆ ಬೇರೆ ಬೇರೆ ಆಯಾಮಗಳಲ್ಲಿ ಬರುತ್ತದೆ. ಇವನ್ನೆಲ್ಲಾ ಬಳಸಿಕೊಂಡು ಕನ್ನಡವನ್ನು ಅಭಿವೃದ್ದಿಪಡಿಸಿಕೊಂಡು ಬರುತ್ತಿದ್ದೇವೆ. ಭಾವೈಕ್ಯತೆ, ಸಾಮಾಜಿಕ ಕಳಕಳಿ ಹಾಗೂ ಕನ್ನಡ ಸಾಹಿತ್ಯ ರಚನೆ ಸಂಶೋಧನೆಗಳಲ್ಲಿ ತೊಡಗಿಸಿಕೊಂಡವರನ್ನು ಪರಸ್ಪರ ಸಾಹಿತ್ಯ ವೇದಿಕೆ ಕಳೆದ ನಾಲ್ಕು ವರ್ಷಗಳಿಂದ ಗುರುತಿಸಿ ಪ್ರಶಸ್ತಿ ನೀಡುತ್ತಾ ಬರುತ್ತಿದೆ. ಈ ಸಾಲಿನಲ್ಲಿ ಎಫ್. ಕಿಟಲ್ ಪ್ರಶಸ್ತಿಯನ್ನು ಪ್ರೊ. ರಾಜೇಂದ್ರ ಚೆನ್ನಿ, ಅಕ್ಕಮಹಾದೇವಿ ಪ್ರಶಸ್ತಿಯನ್ನು ಡಾ.ಸಬಿತಾ ಬನ್ನಾಡಿ, ಸಂತ ಶಿಶುನಾಳ ಶರೀಫ ಪ್ರಶಸ್ತಿಯನ್ನು ರಾಯಚೂರಿನ ಕವಿ ಆರಿಫ್ ರಾಜಾ ಅವರಿಗೆ ನೀಡುವ ಮೂಲಕ ಪರಸ್ಪರ ಸಾಹಿತ್ಯ ವೇದಿಕೆ ಅರ್ಹರನ್ನು ಗುರುತಿಸಿ ಅವರನ್ನು ಗೌರವಿಸುವ ಸಂಪ್ರದಾಯವನ್ನು ಮುನ್ನಡೆಸಿಕೊಂಡು ಬಂದಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕವಿ ಅಂಕಣಗಾರ್ತಿ ಡಾ. ಸಬಿತಾ ಬನ್ನಾಡಿ ಅವರಿಗೆ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಕನ್ನಡ ಭಾಷಾ ಪತ್ರಿಕೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ಪರಸ್ಪರ ಸಾಹಿತ್ಯ ವೇದಿಕೆಯ ಅಧ್ಯಕ್ಷ ಡಾ. ಸರ್ಫ್ರಾಜ್ ಚಂದ್ರಗುತ್ತಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಾಹಿತಿ ಡಾ. ನಾ.ಡಿಸೋಜ, ವೇದಿಕೆಯ ದತ್ತಾತ್ರೇಯ ಬೊಂಗಾಳೆ, ಗಣಪತಿ ಎಸ್.ಎಂ., ಎಂ.ಸಿ.ವೀರಪ್ಪ ಇನ್ನಿತರರು ಹಾಜರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X