Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಸುಪ್ರೀಂ ಕೋರ್ಟ್ ತೀರ್ಪು ಕಡೆಗಣಿಸಿ...

ಸುಪ್ರೀಂ ಕೋರ್ಟ್ ತೀರ್ಪು ಕಡೆಗಣಿಸಿ ಕೇಂದ್ರದ ಶಾಸನ

ವಾರ್ತಾಭಾರತಿವಾರ್ತಾಭಾರತಿ26 Dec 2023 9:03 AM IST
share
ಸುಪ್ರೀಂ ಕೋರ್ಟ್ ತೀರ್ಪು ಕಡೆಗಣಿಸಿ ಕೇಂದ್ರದ ಶಾಸನ

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ಲೋಕಸಭೆಯಲ್ಲಿ ಇರುವ ಬಹುಮತವನ್ನೇ ಬಳಸಿಕೊಂಡು ನಿರಂಕುಶ ಸರ್ವಾಧಿಕಾರದತ್ತ ಸಾಗಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಸಾಂವಿಧಾನಿಕ ಸಂಸ್ಥೆಗಳನ್ನು ಹಂತ ಹಂತವಾಗಿ ನಿಷ್ಕ್ರಿಯ ಗೊಳಿಸಿ ಅವುಗಳ ಸ್ವಾಯತ್ತತೆಯನ್ನು ನಿರರ್ಥಕಗೊಳಿಸಿ ಅವುಗಳ ಮೇಲೆ ಹಿಡಿತ ಸಾಧಿಸಲು ಹೊರಟಿದೆ. ಮುಖ್ಯ ಚುನಾವಣಾ ಆಯುಕ್ತರ ನೇಮಕಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸಂಸತ್ತಿನಲ್ಲಿ ಅನುಮೋದನೆ ಪಡೆದ ವಿಧೇಯಕವಂತೂ ಸುಪ್ರೀಂ ಕೋರ್ಟ್ ತೀರ್ಪನ್ನೂ ಕಾಲ ಕಸವನ್ನಾಗಿ ಮಾಡಿದೆ. ತನ್ನ ನಿರಂಕುಶಾಧಿಕಾರಕ್ಕೆ ಯಾವುದೇ ಅಡ್ಡಿ ಎದುರಾಗಬಾರದೆಂಬ ಅದರ ವರ್ತನೆ ಆತಂಕಕಾರಿಯಾಗಿದೆ.

ಸಂಸತ್ತಿನಲ್ಲಿರುವ ಬಹುಮತವನ್ನು ಬಳಸಿಕೊಂಡು ಪ್ರತಿಪಕ್ಷ ಸದಸ್ಯರನ್ನು ಹೊರಗೆ ಹಾಕಿ ಈಗಾಗಲೇ ಅತ್ಯಂತ ಮಹತ್ವದ ವಿಧೇಯಕಗಳಿಗೆ ಅಂಗೀಕಾರ ಪಡೆಯಲಾಗಿದೆ. ಪ್ರತಿಪಕ್ಷಗಳನ್ನು ಮಾತ್ರವಲ್ಲ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಮುಖ್ಯ ಚುನಾವಣಾ ಆಯುಕ್ತರ ನೇಮಕ ಕುರಿತ ವಿಧೇಯಕವನ್ನೂ ಅಂಗೀಕರಿಸಿಕೊಳ್ಳಲಾಗಿದೆ.ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಆಯುಕ್ತರ ಆಯ್ಕೆ ಪ್ರಕ್ರಿಯೆಯಿಂದ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಡುವ ವಿಧೇಯಕವನ್ನು ಪ್ರತಿಪಕ್ಷ ಸದಸ್ಯರನ್ನು ಅಮಾನತು ಮಾಡಿ ಅವರ ಅನುಪಸ್ಥಿತಿಯಲ್ಲಿ ಲೋಕಸಭೆಯಲ್ಲಿ ಮಂಡಿಸಿ ಕಳೆದ ವಾರ ಅಂಗೀಕಾರ ಪಡೆಯಲಾಗಿದೆ. ಈಗ ರಾಷ್ಟ್ರಪತಿಗಳು ಅಂಕಿತ ಹಾಕುವುದೊಂದೇ ಬಾಕಿ ಉಳಿದಿದೆ. ಈ ವಿಧೇಯಕ ಕಾನೂನಾಗಿ ಜಾರಿಯಾದರೆ ಚುನಾವಣಾ ಆಯೋಗದ ಆಯುಕ್ತರ ನೇಮಕ ಸಂಪೂರ್ಣವಾಗಿ ಕೇಂದ್ರ ಸರಕಾರದ ನಿಯಂತ್ರಣಕ್ಕೆ ಬರಲಿದೆ. ವಾಸ್ತವವಾಗಿ ಪ್ರಧಾನಮಂತ್ರಿ, ಸಂಸತ್ತಿನ ಪ್ರತಿಪಕ್ಷ ನಾಯಕ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯವರನ್ನು ಒಳಗೊಂಡ ಸಮಿತಿಯ ಶಿಫಾರಸಿನ ಮೇರೆಗೆ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಆಯುಕ್ತರ ನೇಮಕಾತಿ ನಡೆಯಬೇಕೆಂದು ಸುಪ್ರೀಂ ಕೋರ್ಟ್ ಮಾರ್ಚ್ 2ರಂದು ನೀಡಿದ ತೀರ್ಪಿಗೆ ವಿರುದ್ಧವಾಗಿ ಹೊಸ ಕಾನೂನನ್ನು ಸರಕಾರ ತಂದಿದೆ.

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇಬ್ಬರು ಚುನಾವಣಾ ಆಯುಕ್ತರ ನೇಮಕ ಪ್ರಕ್ರಿಯೆ ಪಾರದರ್ಶಕ ವಾಗಿರಬೇಕೆಂಬುದು ಸುಪ್ರೀಂ ಕೋರ್ಟ್ ಆಶಯವಾಗಿತ್ತು. ಈ ಕುರಿತಂತೆ ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಸುದೀರ್ಘ ವಿಚಾರಣೆ ನಡೆಸಿ ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ತೀರ್ಪು ನೀಡಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇಬ್ಬರು ಆಯುಕ್ತರ ನೇಮಕ ಕಡ್ಡಾಯವಾಗಿ ಪ್ರಧಾನಮಂತ್ರಿ, ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಶಿಫಾರಸಿನಂತೆ ನಡೆಯ ಬೇಕೆಂದು ಸೂಚಿಸಿತು. ಈ ತೀರ್ಪು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಚಾರಿತ್ರಿಕ ತೀರ್ಪು ಎಂದು ವರ್ಣಿಸಲಾಗಿತ್ತು. ಆದರೆ ಮೋದಿ ಸರಕಾರ ಸುಪ್ರೀಂ ಕೋರ್ಟ್ ತೀರ್ಪಿಗೆ ಸವಾಲು ಹಾಕುವಂತೆ ತನ್ನ ಇಷ್ಟದಂತೆ ವಿಧೇಯಕ ಮಂಡಿಸಿ ಸಂಸತ್ತಿನ ಉಭಯ ಸದನಗಳ ಒಪ್ಪಿಗೆ ಪಡೆದಿದೆ. ಇದಕ್ಕಾಗಿ ಪ್ರತಿಪಕ್ಷಗಳ ಅನುಪಸ್ಥಿತಿಯನ್ನು ಬಳಸಿಕೊಂಡಿದೆ.

ಸುಪ್ರೀಂ ಕೋರ್ಟಿನ ಸದುದ್ದೇಶದ ತೀರ್ಪನ್ನು ಕಡೆಗಣಿಸಿ ಸುಪ್ರೀಂ ಕೋರ್ಟಿನ ಮುಖ್ಯನ್ಯಾಯಮೂರ್ತಿ ಅವರನ್ನು ಕೈ ಬಿಟ್ಟು ಅವರ ಬದಲಾಗಿ ಕೇಂದ್ರ ಸರಕಾರದ ಸಂಪುಟ ದರ್ಜೆಯ ಸಚಿವರೊಬ್ಬರು ಇರುತ್ತಾರೆ. ಯಾವ ಸಚಿವರು ಆಯ್ಕೆ ಸಮಿತಿಯಲ್ಲಿ ಇರಬೇಕೆಂಬುದನ್ನು ಪ್ರಧಾನಮಂತ್ರಿ ತೀರ್ಮಾನಿಸುತ್ತಾರೆ. ಹೀಗೆ ಮೂವರ ಸಮಿತಿಯಲ್ಲಿ ಇಬ್ಬರು ಕೈಗೊಳ್ಳುವ ತೀರ್ಮಾನ ಬಹುಮತದ ಹಾಗೂ ಅಂತಿಮ ತೀರ್ಮಾನವಾಗುತ್ತದೆ. ಒಂದು ವೇಳೆ ಸಮಿತಿಯಲ್ಲಿ ಇರುವ ಪ್ರತಿಪಕ್ಷ ನಾಯಕ ಒಪ್ಪಿಗೆ ನೀಡದಿದ್ದರೂ ಆಳುವ ಸರಕಾರ ಇಷ್ಟಪಟ್ಟವರೇ ಮುಖ್ಯ ಚುನಾವಣಾ ಆಯುಕ್ತರು ಮತ್ತು ಆಯುಕ್ತರಾಗಿ ನೇಮಕಗೊಳ್ಳುತ್ತಾರೆ. ಇದರ ಅರ್ಥ ಸರಳ. ಮೋದಿ ಸರಕಾರಕ್ಕೆ ಹೇಳಿದಂತೆ ಕೇಳುವ ಕೈಗೊಂಬೆಯಾದ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಆಯುಕ್ತರು ಬೇಕಾಗಿದ್ದಾರೆ.

ಚುನಾವಣಾ ಆಯೋಗದ ಇತಿಹಾಸವನ್ನು ಅವಲೋಕಿಸಿದರೆ ಅದು ಮುಂಚಿನಿಂದಲೂ ಆಳುವ ಸರಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತ ಬಂದಿದೆ. ಮೋದಿ ಸರಕಾರ ಬಂದ ನಂತರವಂತೂ ಚುನಾವಣಾ ಆಯೋಗದ ಪಾರದರ್ಶಕತೆ ಅನೇಕ ಬಾರಿ ಸಂಶಯಕ್ಕೆ ಕಾರಣವಾಗಿದೆ. ಸರಕಾರದ ಮುಲಾಜಿಗೆ ಒಳಗಾಗದ ನಿಷ್ಠುರ, ದಕ್ಷ ಆಯುಕ್ತರು ಇರಲಿಲ್ಲವೆಂದಲ್ಲ. ಟಿ.ಎನ್.ಶೇಷನ್ ಮುಖ್ಯ ಚುನಾವಣಾ ಆಯುಕ್ತರಾಗಿದ್ದಾಗ ಯಾರ ಮುಲಾಜಿಗೂ ಒಳಗಾಗದೆ ಚುನಾವಣಾ ಅಕ್ರಮಗಳಿಗೆ ಕಡಿವಾಣ ಹಾಕಿದ್ದರು. ಜೆ.ಎ.ಲಿಂಗ್ಡೊ ಅವರು ಮುಖ್ಯ ಚುನಾವಣಾ ಆಯುಕ್ತರಾಗಿದ್ದಾಗಲೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಿದ್ದರು.ಆದರೆ ಅಧಿಕಾರದಲ್ಲಿ ಇರುವ ಪಕ್ಷದ, ಸರಕಾರದ ತಾಳಕ್ಕೆ ತಕ್ಕಂತೆ ಕುಣಿದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ.

ಚುನಾವಣಾ ಆಯೋಗ ಈಗಾಗಲೇ ಸಾಕಷ್ಟು ಅಧಿಕಾರ ಹೊಂದಿದೆ. ಅದಕ್ಕೆ ಹೊಸ ವಿಶೇಷಾಧಿಕಾರಗಳ ಅಗತ್ಯವಿಲ್ಲ. ಇದಕ್ಕೆ ಟಿ.ಎನ್. ಶೇಷನ್ ಅವರು ಉದಾಹರಣೆಯಾಗಿದ್ದಾರೆ. 1990ರಲ್ಲಿ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕಗೊಂಡ ಅವರ ಹೆಸರು ಕೇಳಿದರೆ ಸಾಕು ಅಕ್ರಮ ವ್ಯವಹಾರಗಳ ಮೂಲಕ ಚುನಾವಣೆಯಲ್ಲಿ ಗೆಲ್ಲುತ್ತಿದ್ದ ರಾಜಕಾರಣಿಗಳು ಗಡ-ಗಡ ನಡಗುತ್ತಿದ್ದರು. ಆಯೋಗಕ್ಕೆ ಇದ್ದ ಸಾಂವಿಧಾನಾತ್ಮಕ ಅಧಿಕಾರಗಳನ್ನು ಆಯುಧಗಳಂತೆ ಪ್ರಯೋಗಿಸಿದರು. ಎಲ್ಲೇ ಅಕ್ರಮಗಳ ವಾಸನೆಗಳನ್ನು ಕಂಡರೂ ಚುನಾವಣೆಯನ್ನೇ ರದ್ದು ಮಾಡಿಬಿಡುತ್ತಿದ್ದರು.ಮತದಾರರ ಗುರುತಿನ ಚೀಟಿಗಳಿಗೆ ಸಂಬಂಧಿಸಿದ ಮತದಾರರ ಭಾವಚಿತ್ರ ಅಂಟಿಸುವುದನ್ನು ಕಡ್ಡಾಯಗೊಳಿಸಿದರು. ಫೋಟೊ ಸಹಿತ ಗುರುತಿನ ಚೀಟಿ ಜಾರಿಗೆ ಬರುವವರೆಗೆ ಚುನಾವಣೆಗಳನ್ನೇ ನಡೆಸುವುದಿಲ್ಲ ಎಂದು ಪಟ್ಟು ಹಿಡಿದರು. ಹೀಗಾಗಿ ಸರಕಾರ ಮಣಿಯಬೇಕಾಯಿತು. ಆಗ ಅವರೊಬ್ಬರೇ ಆಯುಕ್ತರು. ಇತರ ಇಬ್ಬರು ಇರಲಿಲ್ಲ. ಆದರೆ ಆಗ ಪ್ರಧಾನಿಯಾಗಿದ್ದ ಪಿ.ವಿ. ನರಸಿಂಹರಾವ್ ಸರಕಾರ ಶೇಷನ್ ಗೆ ಕಡಿವಾಣ ಹಾಕಲು 1993ರಲ್ಲಿ ಇನ್ನೆರಡು ಆಯುಕ್ತ ಹುದ್ದೆಗಳನ್ನು ಸೃಷ್ಟಿಸಿತು.

2024ರಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಗುರಿಯನ್ನು ಹೊಂದಿರುವ ಮೋದಿ ನೇತೃತ್ವದ ಬಿಜೆಪಿ ಸರಕಾರಕ್ಕೆ ಶೇಷನ್‌ರಂಥ ಚುನಾವಣಾ ಆಯುಕ್ತರು ಬರುವುದು ಬೇಕಾಗಿಲ್ಲ. ತಾವು ಹೇಳಿದಂತೆ ಕೇಳುವ ಚುನಾವಣಾ ಆಯುಕ್ತರು ಅದಕ್ಕೆ ಬೇಕಾಗಿದ್ದಾರೆ. ಅದಕ್ಕಾಗಿ ತಮಗೆ ಅಡ್ಡಿಯಾಗಬಾರದೆಂದು ಸುಪ್ರೀಂ ಕೋರ್ಟ್ ತೀರ್ಪನ್ನು ಕಡೆಗಣಿಸಿ ಮುಖ್ಯ ನ್ಯಾಯಮೂರ್ತಿಗಳನ್ನು ಹೊರಗಿಟ್ಟು ಚುನಾವಣಾ ಆಯುಕ್ತರ ನೇಮಕಾತಿ ಸಮಿತಿಯನ್ನು ಮಾಡಿಕೊಂಡಿದೆ. ಸಂವಿಧಾನದ 324 (2) ಕಲಮಿನ ಪ್ರಕಾರ ಚುನಾವಣಾ ಆಯೋಗದ ಹುದ್ದೆಗಳಿಗೆ ನೇಮಕಾತಿ ಅಧಿಕಾರ ರಾಷ್ಟ್ರಪತಿಯವರದು. ಆದರೆ ಯಾರನ್ನು ಆಯ್ಕೆ ಮಾಡಬೇಕೆಂಬುದನ್ನು ನಿರ್ಧರಿಸುವುದು ಪ್ರಧಾನಮಂತ್ರಿ. ನೇಮಕದ ಕುರಿತು ಸಂಸತ್ತು ಯಾವುದಾದರೂ ಕಾಯ್ದೆಯನ್ನು ಮಾಡಿದರೆ ಅದರ ಪ್ರಕಾರ ನೇಮಕಾತಿ ಮಾಡಬೇಕಾಗುತ್ತದೆ. ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಚುನಾವಣಾ ಆಯೋಗವನ್ನು ಯಾವುದೇ ರಾಜಕೀಯ ಪಕ್ಷ ಇಷ್ಟ ಪಡುವುದಿಲ್ಲ. ಈಗ ಒಂಭತ್ತು ವರ್ಷಗಳಿಂದ ಅಧಿಕಾರ ಹಿಡಿದು ಕೂತಿರುವ ಬಿಜೆಪಿಗಂತೂ ಮತ್ತೆ ಅಧಿಕಾರಕ್ಕೆ ಬರುವುದು ಮುಖ್ಯವಾಗಿದೆ. ಅದಕ್ಕಾಗಿ ತನ್ನ ಕೈಗೊಂಬೆ ಚುನಾವಣಾ ಆಯುಕ್ತರನ್ನು ಅದು ಬಯಸುತ್ತಿದೆ.

ಒಂದು ವೇಳೆ ಸುಪ್ರೀಂ ಕೋರ್ಟ್ ತೀರ್ಪಿನಂತೆ ಮುಖ್ಯ ನ್ಯಾಯಮೂರ್ತಿಗಳನ್ನು ಸಮಿತಿಯಲ್ಲಿ ಸೇರ್ಪಡೆ ಮಾಡಿದರೆ ಅವರೂ ಮತ್ತು ಪ್ರತಿಪಕ್ಷ ನಾಯಕ ಒಟ್ಟಿಗೆ ಮತ ಚಲಾಯಿಸಿದರೆ ಸರಕಾರ ಬಯಸಿರುವ ಆಯುಕ್ತರ ನೇಮಕ ಅಸಾಧ್ಯವಾಗುತ್ತದೆ.ಹಾಗಾಗಬಾರದೆಂದು ಮೋದಿ ಸರಕಾರ ಈ ಶಾಸನ ತಂದಿದೆ. ಚುನಾವಣಾ ಆಯೋಗ ಇನ್ನು ಮುಂದೆಯೂ ಆಳುವ ಸರಕಾರದ ಕೈಗೊಂಬೆಯಾಗಿಯೇ ಮುಂದುವರಿಯಲಿದೆ.ಇದು ಜನತಂತ್ರ ವ್ಯವಸ್ಥೆಗೆ ಶೋಭೆ ತರುವುದಿಲ್ಲ. ಆದರೆ ಯಾವುದೇ ಸಾಂವಿಧಾನಿಕ ಸಂಸ್ಥೆಗಳ ಬಗ್ಗೆ ಗೌರವವಿಲ್ಲದ, ತನ್ನದೇ ಗುಪ್ತ ಕಾರ್ಯಸೂಚಿಯನ್ನು ಹೊಂದಿರುವ ಪಕ್ಷದಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ?

share
ವಾರ್ತಾಭಾರತಿ
ವಾರ್ತಾಭಾರತಿ
Next Story
X