Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಬಾಬಾ ಬುಡಾನ್‌ಗಿರಿ ಗೋರಿಗಳ ಉತ್ಖನನ...

ಬಾಬಾ ಬುಡಾನ್‌ಗಿರಿ ಗೋರಿಗಳ ಉತ್ಖನನ ಹೇಳಿಕೆ; ಬಿಜೆಪಿ ಮುಖಂಡರಿಂದ ಕೋಮು ಗಲಭೆ ಷಡ್ಯಂತ್ರ : ಫ್ರಕುದ್ದೀನ್ ಶಾಖಾದ್ರಿ ಆರೋಪ

ವಾರ್ತಾಭಾರತಿವಾರ್ತಾಭಾರತಿ14 Aug 2025 12:15 AM IST
share
ಬಾಬಾ ಬುಡಾನ್‌ಗಿರಿ ಗೋರಿಗಳ ಉತ್ಖನನ ಹೇಳಿಕೆ;  ಬಿಜೆಪಿ ಮುಖಂಡರಿಂದ ಕೋಮು ಗಲಭೆ ಷಡ್ಯಂತ್ರ : ಫ್ರಕುದ್ದೀನ್ ಶಾಖಾದ್ರಿ ಆರೋಪ

ಚಿಕ್ಕಮಗಳೂರು, ಆ.13 : ಧರ್ಮಸ್ಥಳದಲ್ಲಿ ಸಮಾಧಿಗಳ ಉತ್ಖನನ ಮಾಡುತ್ತಿರುವಂತೆಯೇ ಗುರು ದತ್ತಾತ್ರೇಯ ಬಾಬಾ ಬುಡಾನ್ ದರ್ಗಾದ ಆವರಣದಲ್ಲಿರುವ ಗೋರಿಗಳಲ್ಲೂ ಉತ್ಖನ ಮಾಡಬೇಕು ಎಂದು ಬಿಜೆಪಿ ಮುಖಂಡರು ಕೋಮ ಸಾಮರಸ್ಯ ಹದಗೆಡಿಸುವ ಹೇಳಿಕೆ ನೀಡಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುವುದಾಗಿ ಬಾಬಾ ಬುಡಾನ್ ವಂಶಸ್ಥ ಸೈಯದ್ ಫ್ರಕುದ್ದೀನ್ ಶಾಖಾದ್ರಿ ತಿಳಿಸಿದ್ದಾರೆ.

ಬುಧವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯ ಸರಕಾರ ಮತ್ತು ಎಸ್‌ಐಟಿ ತಂಡ ತನಿಖೆ ಮೂಲಕ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಅತ್ಯಾಚಾರ ಪ್ರಕರಣಗಳ ಸತ್ಯ ಹೊರ ತರಲು ಮುಂದಾಗಿರುವ ಹೊತ್ತಿನಲ್ಲಿ ಜಿಲ್ಲೆಯ ಕೆಲ ಮುಖಂಡರು ಪ್ರಕರಣದ ದಿಕ್ಕು ತಪ್ಪಿಸುವ ಷಡ್ಯಂತ್ರ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಉತ್ಖನನದಂತೆ ಬಾಬಾ ಬುಡಾನ್‌ಗಿರಿಯಲ್ಲಿರುವ ಗೋರಿಗಳನ್ನೂ ಉತ್ಖನನ ಮಾಡಬೇಕು ಎನ್ನುವ ಮೂಲಕ ಧರ್ಮಸ್ಥಳ ಪ್ರಕರಣದ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ದೂರಿದ ಅವರು, ಬಿಜೆಪಿಯವರ ಈ ಹೇಳಿಕೆಯಿಂದ ಒಂದು ಸಮುದಾಯದವರ ಧಾರ್ಮಿಕ ನಂಬಿಕೆ ಹಾಗೂ ಭಾವನೆಗಳಿಗೆ ನೋವುಂಟಾಗಿದೆ. ಧರ್ಮಸ್ಥಳದ ಉತ್ಖನಕ್ಕೂ, ಬಾಬಾ ಬುಡಾನ್ ದರ್ಗಾದ ಆವರಣದಲ್ಲಿರುವ ಗೋರಿಗಳ ಉತ್ಖನಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದಾರೆ.

ಗೋರಿಗಳ ಉತ್ಖನನ ಮಾಡುವುದೇ ಆದರೆ ಔದಂಬರ ವೃಕ್ಷ ಎಷ್ಟು ವರ್ಷಗಳ ಪುರಾತನ ಕಾಲದ್ದು ಎಂಬ ಬಗ್ಗೆ ಇತಿಹಾಸ ಹೊರ ತೆಗೆಯಲಿ, ಬಾಬಾ ಬುಡಾನ್ ದರ್ಗಾದಲ್ಲಿರುವ ಪಾದುಕೆಗಳು ಅಲ್ಲಿಗೆ ಹೇಗೆ ಬಂತು?, ಆ ಪಾದುಕೆಗಳನ್ನು ನೀಡಿದವರು ಯಾರು? ಎಂಬ ಇತಿಹಾಸದ ಬಗ್ಗೆ ಅಧ್ಯಯನ ನಡೆಯಲಿ. ಇದಕ್ಕೆ ನಾವೂ ಸಹಕಾರ ನೀಡುವುದರೊಂದಿಗೆ ರಾಜ್ಯ ಸರಕಾರವನ್ನೂ ಆಗ್ರಹಿಸುತ್ತೇವೆ. ಇದರ ಹೊರತಾಗಿ ಗೋರಿಗಳ ಉತ್ಖನನ ನಡೆಯಲಿ ಎಂಬ ಬಿಜೆಪಿಯವರ ಹೇಳಿಕೆ ಸಮುದಾಯದವರ ಭಾವನೆಗಳನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸುವ ಸಂಚಿನ ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯವರ ಷಡ್ಯಂತ್ರವನ್ನು ಜಿಲ್ಲೆಯ ಜನರು ಅರ್ಥ ಮಾಡಿಕೊಳ್ಳಬೇಕು. ಜಿಲ್ಲೆಯ ಸಾಮರಸ್ಯ ಹಾಳು ಮಾಡುವ ಬಿಜೆಪಿ ಮುಖಂಡರ ಹೇಳಿಕೆಗಳಿಗೆ ಜನತೆ ಸೊಪ್ಪು ಹಾಕಬಾರದು ಎಂದು ಸೈಯದ್ ಫ್ರಕುದ್ದೀನ್ ಶಾಖಾದ್ರಿ ಮನವಿ ಮಾಡಿದ್ದಾರೆ.

ಸಂಘ ಪರಿವಾರದ ಕಾರ್ಯಕರ್ತ ಎಂದು ಹೇಳಿಕೊಳ್ಳುತ್ತಿರುವ ರಘು ಸಕಲೇಶಪುರ ಎಂಬಾತ ಗಡಿಪಾರು ಆಗಿರುವ ವ್ಯಕ್ತಿ. ಈತ ಚಿಕ್ಕಮಗಳೂರು ಜಿಲ್ಲೆಗೆ ಬಂದು ಪ್ರಚೋದನಕಾರಿ ಹೇಳಿಕೆ ನೀಡುತ್ತಾ ಜನರ ಭಾವನೆ ಕೆರಳಿಸುವ ಕೃತ್ಯ ಎಸಗುತ್ತಿದ್ದಾನೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಈತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ. ಆದ್ದರಿಂದ ಪೊಲೀಸ್ ಇಲಾಖೆ ಈತನ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು.

ಸೈಯದ್ ಫಕ್ರುದ್ದೀನ್ ಶಾಖಾದ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X