Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಶಿವಮೊಗ್ಗ
  4. ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ...

ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ಸ್ಥಗಿತಗೊಳಿಸಿ : ಬಿ.ಟಿ.ವೆಂಕಟೇಶ್

ವಾರ್ತಾಭಾರತಿವಾರ್ತಾಭಾರತಿ8 Dec 2025 10:46 PM IST
share
ಎಸ್‌ಐಆರ್ ಪ್ರಕ್ರಿಯೆ ತಕ್ಷಣವೇ ಸ್ಥಗಿತಗೊಳಿಸಿ : ಬಿ.ಟಿ.ವೆಂಕಟೇಶ್

ಶಿವಮೊಗ್ಗ : ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ದೇಶಾದ್ಯಂತ ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ(ಎಪಿಸಿಆರ್) ಯ ರಾಜ್ಯ ಕಾರ್ಯಕಾರಿ ಸದಸ್ಯ ಹಾಗೂ ಹೈಕೋರ್ಟ್ ವಕೀಲ ಬಿ.ಟಿ.ವೆಂಕಟೇಶ್ ಹೇಳಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ಎಸ್‌ಐಆರ್ ಪ್ರಕ್ರಿಯೆಯನ್ನು ಮಾಡುತ್ತಿದೆ. ಈ ಪ್ರಕ್ರಿಯೆಯಲ್ಲಿಯೇ ಪಾರದರ್ಶಕದ ಕೊರತೆ, ಅಸ್ಪಷ್ಟತೆ ಇದೆ. ಅತ್ಯಲ್ಪ ಸಮಯಾವಕಾಶವಿದೆ. ಅಲ್ಲದೆ ಮತದಾನ ಮಾಡಲು ಹುಟ್ಟಿದ ದಿನಾಂಕದ ಪ್ರಮಾಣಪತ್ರವನ್ನು ನೀಡಬೇಕು ಎನ್ನುವುದು ಎಷ್ಟರಮಟ್ಟಿಗೆ ಸರಿ. ಅಲೆಮಾರಿಗಳು, ಓದೇ ಗೊತ್ತಿಲ್ಲದವರು, ಬಡವರು, ಹುಟ್ಟಿದ ದಿನಾಂಕ ಗೊತ್ತಿಲ್ಲದವರು ಏನು ಮಾಡಬೇಕು? ಅವರು ಎಲ್ಲಿಂದ ಜನನ ಪ್ರಮಾಣಪತ್ರ ತರಬೇಕು?. ಅಲ್ಲದೆ ಭಾರತ ಸರಕಾರವೇ ನೀಡಿದ ಆಧಾರ್ ಕಾರ್ಡನ್ನು ಗುರುತಿನ ಚೀಟಿ ಎಂದು ಏಕೆ ಕರೆಯಬಾರದು?. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಮತ್ತು ಮತದಾನ ಮಾಡಲು ಸರಕಾರವೇ ನೀಡಿದ ಪಡಿತರ ಕಾರ್ಡ್ ಮತ್ತು ಈಗಾಗಲೇ ಚುನಾವಣಾ ಆಯೋಗ ನೀಡಿದ ಗುರುತಿನ ಚೀಟಿ ಸಾಕಲ್ಲವೇ?. ಹೀಗಿದ್ದೂ ಹುಟ್ಟಿದ ದಿನಾಂಕದ ಪ್ರಮಾಣಪತ್ರ ಏಕೆ ಎಂದು ಪ್ರಶ್ನಿಸಿದರು.

ಎಪಿಸಿಆರ್‌ನ ರಾಜ್ಯ ಸಮಿತಿ ಉಪಾಧ್ಯಕ್ಷ ಅಖೀಲ ವಿದ್ಯಾಸಂದ್ರ ಮಾತನಾಡಿ, ನಮ್ಮ ಸಂಘಟನೆಯು ಮಾನವ ಹಕ್ಕುಗಳ ರಕ್ಷಣೆಗಾಗಿ ಹೋರಾಡುತ್ತಾ ಬಂದಿದೆ. ಮಹಿಳೆಯರ ಮೇಲೆ, ಅಲ್ಪಸಂಖ್ಯಾತರ ಮೇಲೆ, ದಲಿತರ ಮೇಲೆ ನಡೆಯುವ ಶೋಷಣೆ, ದೌರ್ಜನ್ಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆಯ ವಿರುದ್ಧ 25 ವರ್ಷಗಳಿಂದ ಅಸೋಷಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಹೆಸರಿನಲ್ಲಿ ಈ ಸಂಸ್ಥೆ ಜನ್ಮತಾಳಿ, 18 ರಾಜ್ಯಗಳಲ್ಲಿ ಕೆಲಸ ಮಾಡುತ್ತಿದೆ. ಇದೀಗ ಶಿವಮೊಗ್ಗ ಜಿಲ್ಲಾ ಘಟಕ ಅಸ್ಥಿತ್ವಕ್ಕೆ ಬಂದಿದೆ. ಶಿವಮೊಗ್ಗದಲ್ಲಿಯೂ ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ನಮ್ಮ ಸಂಘಟನೆ ನಿರಂತರವಾಗಿ ಹೋರಾಡುತ್ತಾ ಬರುತ್ತದೆ ಎಂದರು.

ಜಿಲ್ಲಾ ಸಮಿತಿ ಅಧ್ಯಕ್ಷೆ ಸರೋಜಾ ಪಿ. ಚಂಗೊಳ್ಳಿ ಮಾತನಾಡಿ, ಇದು ರಾಷ್ಟ್ರಮಟ್ಟದ ಸಂಘಟನೆ. ಈಗ ಕಳೆದ ಕೆಲವು ತಿಂಗಳಿನಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಅಸ್ಥಿತ್ವಕ್ಕೆ ಬಂದಿದೆ. ಈಗಾಗಲೇ ಪದಾಧಿಕಾರಿಗಳ ನೇಮಕವೂ ಆಗಿದೆ. ಈ ವರ್ಷ ಸುಮಾರು 50 ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿ ಹೊಂದಲಾಗಿದೆ. ಈಗಾಗಲೇ 15 ಕಾರ್ಯಕ್ರಮಗಳನ್ನು ನಾವು ಪೂರೈಸಿದ್ದೇವೆ. ಶಾಲಾ-ಕಾಲೇಜುಗಳಲ್ಲಿ ಕಾನೂನುಗಳ ಅರಿವು ಉಚಿತ ಕಾನೂನು ಸಹಾಯ, ಕೈದಿಗಳ ಬಿಡುಗಡೆಗಾಗಿ ಹೋರಾಟ, ಗಾಂಜಾ ವಿರುದ್ಧ ಹೋರಾಟ, ಪೊಕ್ಸೊ ಕಾಯ್ದೆಯ ಬಗ್ಗೆ ಅರಿವು ಮೂಡಿಸುವುದು, ಮೌಲ್ಯಗಳ ಮನವರಿಕೆ ಮಾಡುವುದು ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ರೂಪಿಸಲಾಗುವುದು ಎಂದು ತಿಳಿಸಿದರು.

ನೂತನ ಸಮಿತಿ ಅಸ್ತಿತ್ವಕ್ಕೆ: ಎಪಿಸಿಆರ್‌ನ ಜಿಲ್ಲಾ ಘಟಕದ ಗೌರವ ಅಧ್ಯಕ್ಷರಾಗಿ ಆರ್.ಟಿ. ನಟರಾಜ್, ಜಿಲ್ಲಾಧ್ಯಕ್ಷರಾಗಿ ಸರೋಜಾ ಪಿ. ಚಂಗೊಳ್ಳಿ, ಉಪಾಧ್ಯಕ್ಷರಾಗಿ ಹಾಲೇಶಪ್ಪ, ರಾಜಮ್ಮ, ಸೈಯದ್ ಲಿಯಾಖತ್, ಅಬ್ದುಲ್ ವಹ್ಹಾಬ್, ಮುಹಮ್ಮದ್ ಅಯ್ಯೂಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ರಫಿ, ಜಂಟಿ ಕಾರ್ಯದರ್ಶಿಗಳಾಗಿ ರಮ್ಯಾ, ದೇವೇಂದ್ರಪ್ಪ, ಹಬೀಬುಲ್ಲಾ, ಖಜಾಂಚಿಯಾಗಿ ಸುಕನ್ಯಾ, ಸಂಘಟನಾ ಕಾರ್ಯದರ್ಶಿಯಾಗಿ ಚನ್ನವೀರಪ್ಪ ಗಾಮನಗಟ್ಟಿ ಅವರನ್ನು ನೇಮಕ ಮಾಡಲಾಯಿತು.

ಸುದ್ದಿಗೋಷ್ಠಿಯಲ್ಲಿ ಎಪಿಸಿಆರ್‌ನ ರಾಜ್ಯ ಕಾರ್ಯಕಾರಿ ಸದಸ್ಯ ಮುಹಮ್ಮದ್ ಕುಂಞಿ, ಕಚೇರಿ ಕಾರ್ಯದರ್ಶಿ ನೌಫಲ್ ಮರ್ಝೂಕಿ ಇದ್ದರು.

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಬಡವರು, ಗ್ರಾಮೀಣ ಮಹಿಳೆಯರು, ವಯೋವೃದ್ಧರು, ಆದಿವಾಸಿಗಳು, ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ಗಂಭೀರ ಪರಿಣಾಮಗಳು ಬೀಳುತ್ತವೆ. ಇದು ಸಂವಿಧಾನದ 14, 15, 21ನೇ ವಿಧಿಗಳಿಗೆ ವಿರುದ್ಧವಾಗಿದೆ. ಲಕ್ಷಾಂತರ ನಾಗರಿಕರನ್ನು ಅನಾಗರಿಕ ಎಂಬ ಗುರಿಯಿಂದ ಹೊರಗಿಟ್ಟು ಅವರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕ ಸಮಾಲೋಚನೆ ಮತ್ತು ನಾಗರೀಕ ಸ್ನೇಹಿ ಚೌಕಟ್ಟು ರೂಪಿಸುವವರಿಗೆ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು.

ಟಿ.ವೆಂಕಟೇಶ್, ಎಪಿಸಿಆರ್ ರಾಜ್ಯ ಕಾರ್ಯಕಾರಿ ಸದಸ್ಯ, ಹೈಕೋರ್ಟ್ ವಕೀಲ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X