ಧರ್ಮಸ್ಥಳ ಪ್ರಕರಣ | ಜಾಮೀನು ಮಂಜೂರಾಗಿ 24 ದಿನಗಳ ಬಳಿಕ ಜೈಲಿನಿಂದ ಚಿನ್ನಯ್ಯ ಬಿಡುಗಡೆ

ಶಿವಮೊಗ್ಗ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಚಿನ್ನಯ್ಯ ಜಾಮೀನ ಮಂಜೂರಾಗಿ 24 ದಿನಗಳ ಬಳಿಕ ಶಿವಮೊಗ್ಗ ಕೇಂದ್ರ ಕಾರಾಗೃಹದಿಂದ ಗುರುವಾರ ಬಿಡುಗಡೆಗೊಂಡಿದ್ದಾನೆ.
ಗುರುವಾರ ಬೆಳಗ್ಗೆ ಆತನ ಪತ್ನಿ, ಸಹೋದರಿ ಮತ್ತು ವಕೀಲರು ಚಿನ್ನಯ್ಯನನ್ನು ಜೈಲಿನಿಂದ ಕರೆದೊಯ್ದರು.
ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಬಳಿಕ ಆರೋಪಿಯಾಗಿ ಜೈಲು ಸೇರಿದ್ದ ಚಿನ್ನಯ್ಯ ನಾಲ್ಕು ತಿಂಗಳಿನಿಂದ ಜೈಲಿನಲ್ಲಿದ್ದ. ಚಿನ್ನಯ್ಯನಿಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯವು ನ.24ರಂದು 12 ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತ್ತು. ಆದರೆ ಬಾಂಡ್ ಮತ್ತು ಶೂರಿಟಿ ನೀಡಲು ಯಾರೂ ಮುಂದೆ ಬಾರದ ಕಾರಣ ಬಿಡುಗಡೆ ಸಾಧ್ಯವಾಗಿರಲಿಲ್ಲ.
ಬುಧವಾರ ಆತನ ಪತ್ನಿ ಮಲ್ಲಿಕಾ ಒಂದು ಲಕ್ಷ ರೂ. ಬಾಂಡ್ ಮತ್ತು ಇಬ್ಬರು ಜಾಮೀನುದಾರರೊಂದಿಗೆ ಬೆಳ್ತಂಗಡಿ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯಕ್ಕೆ ಶೂರಿಟಿ ಕೊಡಿಸಿ ಕಾನೂನು ಪ್ರಕ್ರಿಯೆ ಪೂರೈಸಿದ್ದಾರೆ.
Next Story







